ವಿಜಯಪುರ | ಮುರುಡೇಶ್ವರ ಪವರ್ ಕಂಪೆನಿಯ ₹75 ಲಕ್ಷಕ್ಕೂ ಅಧಿಕ ತೆರಿಗೆ ಬಾಕಿ; ವಸೂಲಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

Date:

Advertisements

ನಾರಾಯಣಪುರ ಜಲಾಶಯದ ಕೃಷ್ಣಾ ನದಿ ಹಿನ್ನೀರು ಬಳಸಿ, ವಿದ್ಯುತ್ ಉತ್ಪಾದಿಸುವ ಮುರುಡೇಶ್ವರ ಪವರ್ ಕಂಪೆನಿಯು ಬಾಕಿ ಉಳಿಸಿಕೊಂಡಿರುವ ₹75 ಲಕ್ಷಕ್ಕೂ ಹೆಚ್ಚು ತೆರಿಗೆಯನ್ನು ವಸೂಲಿ ಮಾಡಿ, ನಾಗಬನಾಳ ಗ್ರಾಮ ಪಂಚಾಯಿತಿಯ ಅಭಿವೃದ್ಧಿಗೆ ಬಳಸಬೇಕೆ ಎಂದು ಒತ್ತಾಯಿಸಿ ಯುವಜನ ಸೇನೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಪಂಚಾಯತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಪ್ರಾರಂಭಿಸಿದ್ದಾರೆ.

ಯುವಜನ ಸೇನೆ ಅಧ್ಯಕ್ಷ ಶಿವಾನಂದ ವಾಲಿ ಮಾತನಾಡಿ, “24 ವರ್ಷಗಳಲ್ಲಿ ಅಂದಾಜು ₹2ಕೋಟಿಯಿಂದ ₹3ಕೋಟಿಯಷ್ಟು ತೆರಿಗೆ ವಂಚಿಸಲಾಗಿದೆ. 2000ದಿಂದ 2024ರವರೆಗೆ ಕಂಪನಿಯು ವಿದ್ಯುತ್ ಉತ್ಪಾದನೆಯ ವಾಣಿಜ್ಯ ತೆರಿಗೆ ಕಟ್ಟಿಲ್ಲ. ಪಿಡಿಒ ಅವರಿಂದ ಜಿಲ್ಲಾಧಿಕಾರಿವರೆಗೂ ಪತ್ರ ವ್ಯವಹಾರ ನಡೆಸಿದ್ದರೂ ಸ್ಪಂದಿಸುತ್ತಿಲ್ಲ. ಸರ್ಕಾರಕ್ಕೆ ವಂಚಿಸಿ ನಷ್ಟವುಂಟು ಮಾಡಿದ ಕಂಪನಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಖೋಬಾ ಸಿಂಗ್ ಜಾದವ್ ಪ್ರತಿಭಟನಾ ಸ್ಥಳಕ್ಕಾಗಮಿಸಿ ಈವರೆಗೆ ಕೈಗೊಂಡ ಕ್ರಮಗಳ ಮಾಹಿತಿ ನೀಡಿದರು. ತಾಲೂಕು ಪಂಚಾಯಿತಿ ಎನ್ ಎಸ್ ಮುಸಳಿ ಆಗಮಿಸಿ ಬೇಡಿಕೆ ಪರಿಶೀಲಿಸಲು ಕಾಲಾವಕಾಶ ಕೇಳಿದರು.

Advertisements

ಆಕ್ರೋಶಗೊಂಡ ಹೋರಾಟಗಾರರು, “ಈ ಕುರಿತು ಅನೇಕ ಬಾರಿ ಪಿಡಿಒ, ತಾಲೂಕು ಪಂಚಾಯಿತಿಯ ಈ ಹೊಂದಿನ ಇಒ ಗಮನಕ್ಕೂ ತಂದಾಗಿದೆ. ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲಾಧಿಕಾರಿ ಅಥವಾ ತಹಶೀಲ್ದಾರ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ ತೆರಿಗೆ ವಂಚನೆ ಕುರಿತು ಕ್ರಮ ಕೈಗೊಳ್ಳುವದಾಗಿ, ಬಾಕಿ ತೆರಿಗೆ ತುಂಬಿಸಿಕೊಳ್ಳುವುದಾಗಿ ಲಿಖಿತ ಪತ್ರ ನೀಡಿದರೆ ಮಾತ್ರ ಧರಣಿ ಕೈಬಿಡುತ್ತೇವೆ” ಎಂದು ಹೋರಾಟಗಾರರು ಪಟ್ಟುಹಿಡಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 1 ವರ್ಷ ಸಜೆ

ಈ ವೇಳೆ ಸಂಘಟನೆಗಳ ಮುಖಂಡರುಗಳಾದ ಗಿರಿಯಪ್ಪ ತಳವಾರ, ಮಲ್ಲು ಬಿಜ್ಜುರ, ರಾಜು ಮಾಸಬಿನಾಳ, ಸಂಗಯ್ಯ ಸಾರಂಗ ಮಠ, ಶಿವು ಒನಕಿಹಾಳ, ರಫೀಕ್ ತಗ್ಗಿನಮನಿ, ಬಾಬು ತಡ್ಲಿಮನಿ, ಗುರು ತಂಗಡಗಿ, ಶಕೀಲ್ ಅವಟಿ, ರಾಹುಲ್ ಚಲವಾದಿ, ರಮೇಶ ಚಲವಾದಿ, ಶರಣ ಕಂಬಳಿ, ವೀರೇಶ ವಡ್ಡರ, ಸಂಗಮೇಶ ತಳವಾರ, ಶೇಖಪ್ಪ ಚಲವಾದಿ ಮಂಜುನಾಥ ತಿಳಗೂರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X