ಶಿವಮೊಗ್ಗ | ಶಾಸಕ ಸಂಗಮೇಶ್‌ ರಾಜಿನಾಮೆಗೆ ಆಗ್ರಹಿಸಿ ಫೆ.14 ರಂದು ಜೆಡಿಎಸ್ ಪ್ರತಿಭಟನೆ

Date:

Advertisements

ಕರ್ತವ್ಯ ನಿರತ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ನಿಂದಿಸಿ, ಬೆದರಿಕೆ ಹಾಕಿದ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ಅವರ ಮಗ ಬಿ.ಎಸ್ ಬಸವೇಶ್ವರನನ್ನು ಬಂಧಿಸಬೇಕು ಹಾಗೂ ಶಾಸಕ ಸಂಗಮೇಶ್ ಕೂಡಲೇ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿ ಫೆ.14 ರಂದು ಜೆಡಿಎಸ್ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕಡಿದಾಳ್‌ ಗೋಪಾಲ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಮರಳು ಅವ್ಯವಹಾರದಲ್ಲಿ ತೊಡಗಿದ್ದೂ ಅಲ್ಲದೆ, ಮಹಿಳಾ ಅಧಿಕಾರಿಯನ್ನು ನಿಂದಿಸಿರುವ ಮೂವರನ್ನ ಬಂಧಿಸಲಾಗಿದೆ. ಇವರನ್ನ ಬಿಟ್ಟು ನಿಜವಾದ ಆರೋಪಿ ಬಸವೇಶ್ವರನ್ನು ಬಂಧಿಸಬೇಕು. ಇಲ್ಲದಿದ್ದಲ್ಲಿ ಪ್ರತಿಭಟನೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ವಿದ್ಯಾರ್ಥಿ ಸಾವು

Advertisements

ಭದ್ರಾವತಿಯಲ್ಲಿ ಘಟನೆಗೆ ಕಾರಣ ಯಾರು ಕಾರಣಕರ್ತರಾದವರನ್ನು ಬಿಟ್ಟು ನಾಮ ಮಾತ್ರಕ್ಕೆ ಇನ್ಯಾರನ್ನೋ ಬಂಧಿಸಲಾಗಿದೆ. ಪೊಲೀಸ್‌ ಇಲಾಖೆ ಈ ರೀತಿ ನಡೆದುಕೊಳ್ಳುತ್ತಿರುವುದನ್ನು ಜೆಡಿಎಸ್‌ ಉಗ್ರವಾಗಿ ಖಂಡಿಸುತ್ತದೆ. ಅಲ್ಲದೆ ಇಲಾಖೆ ಪ್ರಾಮಾಣಿಕವಾಗಿ ಕರ್ತವ್ಯದಲ್ಲಿ ಶಾಸಕರು ಹಸ್ತಕ್ಷೇಪ ಮಾಡುತ್ತಿದ್ದಾರೆ. ಶಾಸಕರ ಮಕ್ಕಳು ಎಂದ ಮಾತ್ರಕ್ಕೆ ಅತಿರೇಕದ ವರ್ತನೆ ಸರಿಯಲ್ಲ. ಘಟನೆ ಕುರಿತು ಕೂಡಲೇ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X