ಮೈಕ್ರೋ ಫೈನಾನ್ಸ್‌ ಕಿರುಕುಳ | ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಸ್ತು

Date:

Advertisements

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲ ಪಡೆದವರಿಗೆ ಕಿರುಕುಳ ನೀಡುವುದನ್ನು ತಡೆಯಲು ರಾಜ್ಯ ಸರ್ಕಾರ ಹೊರಡಿಸಲು ಮುಂದಾದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅಸ್ತು ಎಂದಿದ್ದಾರೆ.

ಈ ಹಿಂದೆ ರಾಜ್ಯ ಸರ್ಕಾರವು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದರು ಮತ್ತು ಮರುಪರಿಶೀಲನೆಗೆ ಸೂಚಿಸಿದ್ದರು. ರಾಜ್ಯಪಾಲರು ಕೋರಿದ ವಿವರಣೆಯೊಂದಿಗೆ ಮೈಕ್ರೋ ಫೈನಾನ್ಸ್‌ಗೆ ಸಂಬಂಧಿಸಿದ ಸುಗ್ರೀವಾಜ್ಞೆಯನ್ನು ಸರ್ಕಾರ ರಾಜಭವನಕ್ಕೆ ಕಳುಹಿಸಿತ್ತು.‌

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೈಕ್ರೋ ಫೈನಾನ್ಸ್‌; ಜನಪರ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರ ನಡೆ ಸರ್ವಥಾ ಸರಿಯಲ್ಲ

Advertisements

ಬಡ್ಡಿ, ಚಕ್ರಬಡ್ಡಿ ಹಾಕುವ ಮೈಕ್ರೋ ಫೈನಾನ್ಸ್ ಕಿರುಕುಳದಿಂದಾಗಿ ಹಲವಾರು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಹಾಗೆಯೇ ಹಲವು ಮಂದಿ ಸಾಲಗಾರ ನೀಡಿದವರ ಕಾಟದಿಂದ ತಪ್ಪಿಸಿಕೊಳ್ಳಲು ಊರು ತೊರೆದು ಹೋಗಿರುವ ಘಟನೆಗಳು ನಡೆದಿದೆ. ಇವೆಲ್ಲವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರವು ವಿಶೇಷ ಸಚಿವ ಸಂಪುಟ ಸಭೆ ಕರೆದು, ಹಲವು ನಿಯಮಗಳೊಂದಿಗೆ ಸುಗ್ರೀವಾಜ್ಞೆ ಮಸೂದೆ ರಚಿಸಿತ್ತು. ರಾಜ್ಯಪಾಲರ ಅಂಕಿತಕ್ಕಾಗಿ ರಾಜಭವನಕ್ಕೆ ಕಳುಹಿಸಿತ್ತು.

10 ವರ್ಷಗಳ ಶಿಕ್ಷೆ ಮತ್ತು 5 ಲಕ್ಷ ದಂಡವನ್ನು ಸುಗ್ರೀವಾಜ್ಞೆಯನ್ನು ಉಲ್ಲೇಖಿಸಲಾಗಿತ್ತು. ಆದರೆ ಇದು ಅತಿಯಾಗಿದೆ ಎಂದು ರಾಜ್ಯಪಾಲರು ಉಲ್ಲೇಖಿಸಿರುವುದಾಗಿ ಸಿಎಂ ಕಚೇರಿ ತಿಳಿಸಿದೆ. ಹಾಗೆಯೇ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಬಳಸಬಹುದಿತ್ತು ಎಂದೂ ತಿಳಿಸಿದ್ದರು.

ನಿಯಮ ಪ್ರಕಾರ ರಾಜ್ಯಪಾಲರು ಸೂಚಿಸಿದ್ದ ಮರುಪರಿಶೀಲನೆಯನ್ನು ಸರ್ಕಾರ ಸರಿಪಡಿಸಿ ಮತ್ತೆ ಸುಗ್ರೀವಾಜ್ಞೆ ಪ್ರಸ್ತಾಪ ಸಲ್ಲಿಸಿದರೆ ಅದಕ್ಕೆ ರಾಜ್ಯಪಾಲರು ಸಹಿ ಹಾಕಲೇಬೇಕು. ಆದರೆ ತಮಿಳುನಾಡು ರಾಜ್ಯಪಾಲರು ಯಾವುದೇ ಮರುಪರಿಶೀಲನೆ ಸೂಚಿಸದೆ ಹಾಗೆಯೇ ಉಳಿಸಿಕೊಳ್ಳಿರುವುದು ಕೂಡಾ ಪ್ರಸ್ತಾಪಿಸಬೇಕಾದ ವಿಚಾರ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X