ರಾಹುಲ್‌ಗೆ ಹಿಂಬಡ್ತಿ; ಜಡೇಜಾಗೆ ‘ಎ+’ ಶ್ರೇಣಿಗೆ ಬಡ್ತಿ

Date:

Advertisements

ಸತತ ವೈಫಲ್ಯದಿಂದ ಟೀಮ್‌ ಇಂಡಿಯಾದ ಉಪನಾಯಕನ ಪಟ್ಟ ಕಳೆದುಕೊಂಡ ಬೆನ್ನಲ್ಲೇ ಬಿಸಿಸಿಐ, ಕೆ ಎಲ್‌ ರಾಹುಲ್‌ಗೆ ಮತ್ತೊಂದು ಶಾಕ್‌ ಕೊಟ್ಟಿದೆ. 2022-23 ಸಾಲಿನ ಕೇಂದ್ರೀಯ ಒಪ್ಪಂದ ಹೊಂದಿರುವ ಆಟಗಾರರ ಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದ್ದು, ಕನ್ನಡಿಗ ಕೆ ಎಲ್‌ ರಾಹುಲ್‌ ಎ+ ಶ್ರೇಣಿಯಿಂದ ‘ಬಿ’ ಗುಂಪಿಗೆ ಹಿಂಬಡ್ತಿಪಡೆದಿದ್ದಾರೆ.

ಗಾಯದ ಕಾರಣ ಆರು ತಿಂಗಳುಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿದು, ಆಸ್ಟ್ರೇಲಿಯ ವಿರುದ್ಧದ ಬಾರ್ಡರ್-ಗವಾಸ್ಕರ್‌ ಟ್ರೋಫಿಯಲ್ಲಿ ಅಮೋಘ ಕಮ್‌ಬ್ಯಾಕ್ ಮಾಡಿದ್ದ ಸ್ಟಾರ್‌ ಆಲ್‌ರೌಂಡರ್‌ ಜಡೇಜಾಗೆ ಬಿಸಿಸಿಐ ಎ+ ಶ್ರೇಣಿಗೆ ಮುಂಬಡ್ತಿ ನೀಡಿದೆ.

ಬಿಸಿಸಿಐನ ಹೊಸ ಒಪ್ಪಂದದ ಪಟ್ಟಿಯಲ್ಲಿ ಅತ್ಯುನ್ನತ ವೇತನ ಶ್ರೇಣಿ (ಎ+) ಪಟ್ಟಿಯಲ್ಲಿ ಏಕದಿನ-ಟೆಸ್ಟ್‌ ತಂಡದ ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಜಸ್‌ಪ್ರೀತ್‌ ಬುಮ್ರಾ ಜೊತೆಗೆ ಜಡೇಜಾ  ಸ್ಥಾನ ಪಡೆದಿದ್ದಾರೆ. ಹಿರಿಯ ಆಟಗಾರ ಶಿಖರ್‌ ಧವನ್‌ ಮತ್ತು ಸಂಜು ಸ್ಯಾಮ್ಸನ್‌ ʻಸಿʼ ಶ್ರೇಣಿಯಲ್ಲಿ ಕಾಣಿಸಿಕೊಂಡಿದ್ದಾರೆ. ಆ ಮೂಲಕ ಮುಂಬರುವ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಈ ಇಬ್ಬರು ಆಟಗಾರರು ಸ್ಥಾನ ಪಡೆಯುವ ಸಾಧ್ಯತೆಯ ಸುಳಿವನ್ನು ಬಿಸಿಸಿಐ ನೀಡಿದೆ.

Advertisements

ವಿವಿಧ ವೇತನ ಶ್ರೇಣಿಗಳಲ್ಲಿ ಇರುವ ಆಟಗಾರರ ಪಟ್ಟಿ

ಎ+ (₹7 ಕೋಟಿ): ರೋಹಿತ್ ಶರ್ಮಾ, ವಿರಾಟ್‌ ಕೊಹ್ಲಿ, ಜಸ್‌ಪ್ರೀತ್‌ ಬುಮ್ರಾ ಮತ್ತು ರವಿಂದ್ರ ಜಡೇಜಾ.

ಎ (₹5 ಕೋಟಿ): ಹಾರ್ದಿಕ್ ಪಾಂಡ್ಯ, ರವಿಚಂದ್ರನ್‌ ಅಶ್ವಿನ್, ಮೊಹಮ್ಮದ್‌ ಶಮಿ, ರಿಷಭ್ ಪಂತ್ ಮತ್ತು ಅಕ್ಷರ್ ಪಟೇಲ್‌.

ಬಿ (₹3 ಕೋಟಿ): ಚೇತೇಶ್ವರ್‌ ಪೂಜಾರ, ಕೆ ಎಲ್ ರಾಹುಲ್‌, ಶ್ರೇಯಸ್‌ ಅಯ್ಯರ್, ಮೊಹಮ್ಮದ್‌ ಸಿರಾಜ್, ಸೂರ್ಯಕುಮಾರ್‌ ಯಾದವ್‌ ಮತ್ತು ಶುಭಮನ್‌ ಗಿಲ್.

ಸಿ (₹1 ಕೋಟಿ): ಶಿಖರ್‌ ಧವನ್, ಶಾರ್ದುಲ್ ಠಾಕೂರ್‌, ಇಶಾನ್‌ ಕಿಶನ್, ದೀಪಕ್‌ ಹೂಡ, ಯುಜ್ವೇಂದ್ರ ಚಹಲ್, ಕುಲ್ದೀಪ್‌ ಯಾದವ್‌, ವಾಷಿಂಗ್ಟನ್‌ ಸುಂದರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್‌ ಮತ್ತು ಕೆ ಎಸ್ ಭರತ್.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X