ಐಪಿಎಲ್‌ 2025 | ‘ಆರ್‌ಸಿಬಿ’ ಹೊಸ ನಾಯಕ ರಜತ್ ಪಾಟೀದಾರ್

Date:

Advertisements

ಐಪಿಎಲ್‌ 2025ರ ಟೂರ್ನಿಯು ಮಾರ್ಚ್‌ನಲ್ಲಿ ಆರಂಭವಾಗಲಿದೆ. ಟೂರ್ನಿಗೆ ಕೆಲವೇ ದಿನಗಳ ಬಾಕಿ ಇರುವಾಗ ‘ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು’ (RCB) ತಂಡುವ ತನ್ನ ಹೊಸ ನಾಯಕರನ್ನು ಆಯ್ಕೆ ಮಾಡಿದೆ. ಬ್ಯಾಟರ್ ರಜತ್ ಪಾಟೀದಾರ್ ಅವರು ತಂಡವನ್ನು ಮುನ್ನಡೆಸಲಾಗಿದ್ದಾರೆ ಎಂದು ಆರ್‌ಸಿಬಿ ಘೋಷಿಸಿದೆ.

ವಿರಾಟ್‌ ಕೊಹ್ಲಿ ಅವರು ತಂಡದ ನಾಯಕತ್ವವನ್ನು ತೊರೆದ ಬಳಿಕ, ಮೂರು ವರ್ಷಗಳಿಂದ ದಕ್ಷಿಣ ಆಫ್ರಿಕಾದ ಫಾಫ್‌ ಡು ಪ್ಲೆಸಿಸ್‌ ಅವರು ತಂಡವನ್ನು ಮುನ್ನಡೆಸಿದ್ದರು. ಆದರೆ, ಈ ಬಾರಿ, ಅವರನ್ನು ತಂಡದಿಂದ ಕೈಬಿಡಲಾಗಿದೆ. ಹೀಗಾಗಿ, ಹೊಸ ನಾಯಕನನ್ನು ಆಯ್ಕೆ ಮಾಡಲು ತಂಡವು ಚಿಂತನೆ ನಡೆಸಿತ್ತು.

ಆರ್‌ಸಿಬಿಯಲ್ಲಿ ವಿರಾಟ್‌ ಕೊಹ್ಲಿಯಷ್ಟು ಅನುಭವಿ ಆಟಗಾರ ಬೇರೆ ಯಾರೂ ಇಲ್ಲದ ಕಾರಣ, ಕೊಹ್ಲಿ ಅವರೇ ಮತ್ತೆ ಆರ್‌ಸಿಬಿಗೆ ನಾಯಕನಾಗಿ ಮರಳಬಹುದು ಎಂಬ ಚರ್ಚೆಗಳೂ ಇದ್ದವು. ಆದರೆ, ಕ್ಯಾಪ್ಟನ್ಸಿ ಪಡೆಯಲು ಕೊಹ್ಲಿ ನಿರಾಕರಿಸಿದ್ದರು. ಬಳಿಕ ಪಾಟೀದಾರ್ ಮತ್ತು ಕೃನಾಲ್ ಪಾಂಡ್ಯಾ ಹೆಸರನ್ನು ಮುನ್ನೆಲೆಯಲ್ಲಿತ್ತು.

Advertisements

ಇದೀಗ, ಯುವ ಆಟಗಾರ ರಜತ್ ಅವರಿಗೆ ನಾಯಕತ್ವ ನೀಡಲಾಗಿದೆ. ರಜತ್ ಪಾಟೀದಾರ್ ದೇಶೀಯ ಕ್ರಿಕೆಟ್‌ನಲ್ಲಿ ಗಮನ ಸೆಳೆದಿದ್ದ ಆಟಗಾರ. ಅವರು ಸ್ಥಳೀಯ ತಂಡವನ್ನೂ ಮುನ್ನಡೆಸಿರುವ ಅನುಭವವನ್ನೂ ಹೊಂದಿದ್ದಾರೆ. ಈ ಬಾರಿ ಪಾಟೀದಾರ್ ತಂಡವನ್ನು ಮುನ್ನಡೆಸಲಿದ್ದಾರೆ.

ತಮ್ಮನ್ನು ತಂಡದ ನಾಯಕನ್ನಾಗಿ ನೇಮಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪಾಟೀದಾರ್, “ಈಗಾಗಲೇ ದಿಗ್ಗಜರು ಆರ್‌ಸಿಬಿ ತಂಡದ ನಾಯಕರಾಗಿದ್ದಾರೆ. ಈ ಬಾರಿ ನನ್ನನ್ನು ನಾಯಕನನ್ನಾಗಿ ಆಯ್ಕೆ ಮಾಡಲಾಗಿರುವುದು, ನನಗೆ ಸಿಕ್ಕ ದೊಡ್ಡ ಗೌರವವೆಂದು ನಾನು ಭಾವಿಸುತ್ತೇನೆ. ನನ್ನ ನಾಯಕತ್ವದ ಶೈಲಿ ಕೊಂಚ ವಿಭಿನ್ನವಾಗಿರಲಿದೆ. ನಾನು ಶಾಂತಚಿತ್ತವಾಗಿರುತ್ತೇನೆ. ಪಂದ್ಯದ ಪರಿಸ್ಥಿತಿಗೆ ಅನುಗುಣವಾಗಿ ತಂಡಕ್ಕೆ ಏನು ಬೇಕು, ಏನು ಬೇಡ ಎಂಬುದನ್ನು ಅರ್ಥಮಾಡಿಕೊಂಡು ತಂಡವನ್ನು ಮುನ್ನಡೆಸುತ್ತೇನೆ” ಎಂದು ಹೇಳಿದ್ದಾರೆ.

ಹೊಸ ನಾಯಕನಾಗಿರುವ ರಜತ್ ಪಾಟೀದಾರ್ ಮುಂದಾಳತ್ವದಲ್ಲಿ ಆರ್‌ಸಿಬಿ ಹೊಸ ಅಧ್ಯಾಯ ಬರೆಯುವುದೇ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X