ಶಿವಮೊಗ್ಗ | ಹೈಕೋರ್ಟ್ ಆದೇಶವಾದರೂ ಭೂಮಿ ಬಿಡಿಸಿಕೊಡದ ಅಧಿಕಾರಿಗಳು; ಮಹಿಳೆ ಹೋರಾಟ

Date:

Advertisements

ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಫೆಬ್ರವರಿ 6ರಿಂದ ಹೋರಾಟ ನಡೆಸುತ್ತಿರುವ ದಲಿತ ಮಹಿಳೆಗೆ ಇನ್ನೂ ಪರಿಹಾರ ದೊರಕದಿದ್ದು, ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ.

ಶಿವಮೊಗ್ಗ ನಗರದ ನಿವಾಸಿ ಉಮಾದೇವಿ ನ್ಯಾಯಕ್ಕಾಗಿ ಧರಣಿ ಕೂತಿದ್ದಾರೆ. ಹಸೂಡಿ ಗ್ರಾಮದ ಸರ್ವೇ ನಂಬರ್ 134/6ರಲ್ಲಿನ ಎರಡು ಎಕರೆ ಜಮೀನನ್ನು ಪಿಟಿಸಿಎಲ್ ಕಾಯ್ದೆಯಡಿ ಮರು ಸ್ವಾಧೀನ ಮಾಡಿಕೊಡಬೇಕೆಂದು ಈ ಹಿಂದೆ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. 11-12-1985ರಂದು ಆದೇಶವಾಗಿತ್ತು. ಜೆ ಜೆ ವೆಂಕಟೇಶ್ ಎಂಬವವರು ಭೂಮಿಯನ್ನು ಸ್ವಾಧೀನ ಮಾಡಿಕೊಂಡಿದ್ದರು.
ತೀರ್ಪಿನ ವಿರುದ್ಧ ಪ್ರತಿವಾದಿಯು ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿದ್ದರು. ನಂತರ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯಗಳು ತೀರ್ಪು ನೀಡಿದ್ದು ಜಮೀನನ್ನು ತೆರವುಗೊಳಿಸಬೇಕಿದೆ. ಅಧಿಕಾರಿಗಳು ನೋಟಿಸ್ ನೀಡಿ ಶೀಘ್ರದಲ್ಲಿ ಮರು ಸ್ವಾಧೀನಪಡಿಸಿಕೊಡಬೇಕಿದೆ. ಈ ಸಂಬಂಧ ಉಮಾದೇವಿ ಹೋರಾಟಕ್ಕೆ ಕುಳಿತಿದ್ದಾರೆ. ಕಾನೂನುಯುತವಾಗಿ ಬರಬೇಕಾದ ಭೂಮಿಗಾಗಿ ಬೇಡಿಕೊಳ್ಳುವಂತಾಗಿದೆ.

1001239789

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಶಾಸಕ ಸಂಗಮೇಶ್‌ ರಾಜಿನಾಮೆಗೆ ಆಗ್ರಹಿಸಿ ಫೆ.14 ರಂದು ಜೆಡಿಎಸ್ ಪ್ರತಿಭಟನೆ

Advertisements

“ಆದೇಶ ಪ್ರತಿ ಸ್ಪಷ್ಟವಾಗಿದೆ. ದಿನಾಂಕ 09-01-2025ರಂದು ಹೈಕೋರ್ಟ್ ನೀಡಿರುವ ಆದೇಶದಂತೆ ಜಮೀನನ್ನು ಜೆ ಜೆ ವೆಂಕಟೇಶ್ ಅವರಿಂದ ಬಿಡಿಸಿಕೊಡಬೇಕಾಗಿದೆ. ಇಲ್ಲಿವರೆಗೂ ಅಧಿಕಾರಿಗಳು ಕ್ರಮ ತೆಗೆದುಕೊಂಡಿಲ್ಲ” ಎಂದು ಉಮಾದೇವಿ ಆರೋಪಿಸುತ್ತಿದ್ದಾರೆ.
ಉಪವಿಭಾಗಾಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ಉಚ್ಚ ನ್ಯಾಯಾಲಯದ ಆದೇಶಕ್ಕೆ ಮನ್ನಣೆ ನೀಡದೆ ಬರೀ ಸಬೂಬು ಹೇಳಿ ಕಾಲಹರಣ ಮಾಡುತ್ತಿದ್ದಾರೆ. ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿಯು ಈ ಹೋರಾಟಕ್ಕೆ ಬೆಂಬಲವಾಗಿ ನಿಂತಿದ್ದು, “ನ್ಯಾಯ ಸಿಗುವವರೆಗೂ, ಜಮೀನನ್ನು ಉಮಾದೇವಿಯವರಿಗೆ ಸ್ವಾಧೀನಪಡಿಸಿ ಕೊಡುವವರೆಗೂ ಧರಣಿ ಮುಂದುವರಿಸುತ್ತೇವೆ” ಎಂದು ಸಮಿತಿ ಹೇಳಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X