ಕಲಬುರಗಿ | ವಿಚಿತ್ರ ಪ್ರತಿಭಟನೆ; ರಕ್ತದಿಂದ ಸಹಿ ಮಾಡಿ ಸರ್ಕಾರಕ್ಕೆ ಮನವಿ

Date:

Advertisements

ಸರ್ಕಾರಿ ಹಾಸ್ಟೆಲ್‌ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ರಕ್ತದಿಂದ ಸಹಿ ಸಂಗ್ರಹ ಮಾಡಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ವಿಚಿತ್ರವಾಗಿ ಮನವಿ ಸಲ್ಲಿಸಿತು.

ಮನವಿ ಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, “ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ 15-20 ವರ್ಷಗಳಿಂದ ದುಡಿಯುತ್ತಿರುವ ನೌಕರರು ಅತ್ಯಂತ ಕಡಿಮೆ ವೇತನ ಪಡೆಯುತ್ತಿದ್ದಾರೆ. ಜತೆಗೆ ಏಜೆನ್ಸಿಗಳು ಒತ್ತಡದಿಂದ ಸಿಬ್ಬಂದಿಗಳನ್ನೂ ಕಡಿತ ಮಾಡಿದ್ದರಿಂದ ಕೆಲಸದ ಹೊರೆ ಹೆಚ್ಚಾಗಿ ಅನಾರೋಗ್ಯದಿಂದ ಬಳಲುವಂತಾಗಿದೆ. ಇತ್ತ ಸಮಯಕ್ಕೆ ಸರಿಯಾಗಿ ವೇತನ ಕೂಡಾ ಪಾವತಿಯಾಗುತ್ತಿಲ್ಲ. ಈ ಕಡೆ ವೇತನವೂ ಇಲ್ಲ, ಆ ಕಡೆ ಬರುವ ವೇತನವೂ ಸರಿಯಾದ ಸಮಯಕ್ಕೂ ಬರುತ್ತಿಲ್ಲ. ಇದರಿಂದ ನೌಕರರು ಸಂಕಷ್ಟದಲ್ಲಿ ಪರದಾಡುವಂತಾಗಿದೆ” ಎಂದು ಅಸಮಾಧಾನಗೊಂಡರು.

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತಮ್ಮ ನ್ಯಾಯುತವಾದ ಬೇಡಿಕೆಗಳಿಗಾಗಿ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಬಳ್ಳಾರಿ, ವಿಜಯನಗರ, ವಿಜಾಪುರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಸಭೆ ನಡೆಸಿ ಬೀದರ್ ಮಾದರಿಯಲ್ಲಿ ಸಹಕಾರ ಸಂಘ ರಚಿಸಿ ವೇತನ ಪಾವತಿಸುವುದಾಗಿ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ. ಆದರೆ ಕಲಬುರಗಿ ಜಿಲ್ಲೆಯಲ್ಲಿ 25 ದಿನಗಳಿಂದ ನೂರಾರು ಮಹಿಳೆಯರು ಅಹೋರಾತ್ರಿ ಧರಣಿ, ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಜಿಲ್ಲಾಡಳಿತ ಇತ್ತ ಗಮನಹರಿಸುತ್ತಿಲ್ಲ” ಎಂದು ಸಂಘದ ಮುಖಂಡರು ಕಿಡಿಕಾರಿದರು.

Advertisements

ಈ ಸುದ್ದಿ ಓದಿದ್ದೀರಾ?: ಕಲಬುರಗಿ| ವಿದ್ಯಾರ್ಥಿಗಳಿಗಾಗಿ ಆನಾಪಾನ ಧ್ಯಾನ ಕಾರ್ಯಕ್ರಮ

ಈ ವೇಳೆ ಸಂಘದ ಜಿಲ್ಲಾ ಕಾರ್ಯದರ್ಶಿ ಕಾಶಿನಾಥ ಬಂಡಿ, ರಾಜ್ಯ ಜಂಟಿ ಕಾರ್ಯದರ್ಶಿ ಹುಲಗಣಾ ಚಲವಾದಿ, ಜೇವರ್ಗಿ ತಾಲೂಕು ಅಧ್ಯಕ್ಷ ಕಲ್ಯಾಣಿ ಪೂಜಾರಿ, ಜಿಲ್ಲಾಧ್ಯಕ್ಷ ಪರಶುರಾಮ ಹಡಲಗಿ, ಸೇಡಂ ತಾಲೂಕು ಅಧ್ಯಕ್ಷ ನರಸಮ್ಮ ಕೊರಡಂಪಳ್ಳಿ, ಚಿಂಚೋಳಿ ತಾಲೂಕು ಕಾರ್ಯದರ್ಶಿ ಸಂಜುಕುಮಾರ ಮೇತ್ರ, ಬಾಬು ಹೊಸಮನಿ ಇನ್ನಿತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X