ಮೈಸೂರು | ಭಾರತೀಯ ಅಂಚೆ ಇಲಾಖೆಯಿಂದ ವಿಶೇಷ ಉಡುಗೊರೆ; ನಟ ಡಾಲಿ ಧನಂಜಯ ಸಂತಸ

Date:

Advertisements

ಮದುವೆಗೂ ಮುನ್ನ ಮೈಸೂರಿನ ಭಾರತೀಯ ಅಂಚೆ ಇಲಾಖೆ ಅಧಿಕಾರಿಗಳು ವಿಶೇಷ ವಿನ್ಯಾಸದ ನಟ ಡಾಲಿ ಧನಂಜಯ್ ಹಾಗೂ ಡಾ ಧನ್ಯತಾ ಭಾವಚಿತ್ರವಿರುವ 12 ಅಂಚೆ ಚೀಟಿಗಳ ಪಟವಿರುವ ವಿಶೇಷ ಉಡುಗೊರೆಯೊಂದನ್ನು ನೀಡಿದ್ದು, ನಟ ಡಾಲಿ ಧನಂಜಯ ಸಂತಸ ವ್ಯಕ್ತಪಡಿಸಿದ್ದಾರೆ.

ಧನಂಜಯ ತಮ್ಮ ಮದುವೆ ಆಹ್ವಾನ ಪತ್ರಿಕೆಯನ್ನು ಭಾರತೀಯ ಅಂಚೆ ಇಲಾಖೆ ಇನ್ ಲ್ಯಾಂಡ್ ಲೆಟರ್ ಮಾದರಿಯಲ್ಲಿ ಹಂಚಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿತ್ತು. ಬಹು ಜನರ ಮೆಚ್ಚಿಗೆಗೆ ಪಾತ್ರವಾಗಿತ್ತು.

ಇದೀಗ ʼಶುಭ ವಿವಾಹ’ ಎಂಬ ಶೀರ್ಷಿಕೆ ಒಳಗೊಂಡ 12 ಸ್ಟ್ಯಾಂಪ್ ಗಳನ್ನು ಮೈಸೂರಿನ ಅಂಚೆ ಅಧಿಕಾರಿಗಳು ಧನಂಜಯ ಅವರನ್ನು ಭೇಟಿ ಮಾಡಿ ಉಡುಗೊರೆಯಾಗಿ ನೀಡಿರುವುದು ನವ ಜೋಡಿಗಳ ಸಂತಸವನ್ನು ದುಪ್ಪಟ್ಟು ಮಾಡಿದೆ. ಧನಂಜಯ್ ಅವರ ಮೂಲಕ ಇನ್ ಲ್ಯಾಂಡ್ ಕವರ್ ಬಳಕೆ ಹೆಚ್ಚಿದ್ದು, ಬೇಡಿಕೆಯೂ ಹೆಚ್ಚಿದೆ ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ರೈತ ಸಾಲಗಾರನಲ್ಲ; ಸರ್ಕಾರವೇ ರೈತನಿಗೆ ಬಾಕಿದಾರ: ವಿಶ್ವ ರೈತಚೇತನ ಪ್ರೊ. ಎಂಡಿಎನ್ ನೆನಪು

ಇದೇ ತಿಂಗಳ 15 ಮತ್ತು16 ರಂದು ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ಧನಂಜಯ ಮತ್ತು ಧನ್ಯತಾ ಮದುವೆ ನಡೆಯಲಿದೆ. ಈಗಾಗಲೇ ಮದುವೆ ಶಾಸ್ತ್ರ, ಸಂಪ್ರದಾಯಗಳ ಕಾರ್ಯಕ್ರಮಗಳು ನಡೆಯುತ್ತಿದ್ದು, ಕುಟುಂಬಸ್ಥರಲ್ಲಿ ಸಂತಸ ಮನೆ ಮಾಡಿದೆ. ಅಭಿಮಾನಿಗಳು ಮದುವೆಯ ದಿನ ಭಾಗಿಯಾಗಲು ಕಾತುರದಿಂದ ಕಾಯುತ್ತಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X