ಬಾಗಲಕೋಟೆ | ಕಳ್ಳರ ಹಾವಳಿ: ದೊಣ್ಣೆ ಹಿಡಿದು ರಾತ್ರಿ ಗಸ್ತು ತಿರುಗುತ್ತಿರುವ ಮಹಿಳೆಯರು

Date:

Advertisements

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಮನೆಗಳಲ್ಲಿ ದರೋಡೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಕಳ್ಳರ ಹಾವಳಿಯನ್ನು ತಡೆಯಲು, ಕಳ್ಳರನ್ನು ಹಿಡಿಯಲು ಮಹಿಳೆಯರೇ ಮುಂದಾಗಿದ್ದಾರೆ. ಮುಧೋಳದ ಜಯನಗರ ಬಡಾವಣೆಯ ಮಹಿಳೆಯರು ದೊಣ್ಣೆ ಹಿಡಿದು, ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದಾರೆ.

ಮಹಿಳೆಯರ ಜೊತೆಗೆ ಪುರುಷರೂ ಕೈಜೋಡಿಸಿದ್ದಾರೆ. ದಿನನಿತ್ಯ ಮಧ್ಯರಾತ್ರಿ 12.30ರಿಂದ ಬೆಳಗಿನ ಜಾವ 4 ಗಂಟೆವರೆಗೆ ಗುಂಪುಗಳಾಗಿ ಗಸ್ತು ತಿರುಗುತ್ತಿದ್ದಾರೆ. ಪಟ್ಟಣದ ಜಯನಗರ, ಕೊಡಗ ಪ್ಲಾಟ್, ಸದಾಶಿವ ಕಾಲೊನಿ, ಯಡಹಳ್ಳಿ ಹಳೇ ಬೈ ಪಾಸ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಹಿಳೆಯರು ಮತ್ತು ಪುರಷರು ಗಸ್ತು ತಿರುಗುತ್ತಿದ್ದಾರೆ. ಕಳ್ಳರನ್ನು ಹಿಡಿಯಲು ಪೊಲೀಸರಿಗೆ ನೆರವು ನೀಡುತ್ತಿದ್ದಾರೆ.

ಗಸ್ತು ನಡೆಸುವುದಾಗಿಯೇ ಮುಧೋಳ ನಿವಾಸಿಗಳು ವಾಟ್ಸ್‌ಆ್ಯಪ್ ಗುಂಪನ್ನು ರಚಿಸಿದ್ದಾರೆ. ಆ ಗುಂಪಿನಲ್ಲಿ ಯಾರು ಯಾವ ಭಾಗದಲ್ಲಿ ಗಸ್ತಿಗೆ ಹೋಗುತ್ತಿದ್ದಾರೆ ಎಂಬ ಬಗ್ಗೆ ಚರ್ಚಿಸಿಕೊಂಡು, ಒಗ್ಗಟ್ಟಾಗಿ ರಸ್ತೆಗೆ ಇಳಿಯುತ್ತಿದ್ದಾರೆ. ಸಾರ್ವಜನಿಕರೇ ಗಸ್ತು ನಡೆಸುತ್ತಿದ್ದು, ಪಟ್ಟಣದ ನಿವಾಸಿಗಳು ಆತಂಕವಿಲ್ಲದೆ ಜೀವಿಸುವ ವಾತಾವರಣ ಸೃಷ್ಟಿಯಾಗಿದೆ.

Advertisements

ಪೊಲೀಸರು ಕೂಡ ‘ರಾತ್ರಿ ಗಸ್ತು’ ತಿರುವುದನ್ನು ಹೆಚ್ಚಿಸಿದ್ದಾರೆ. ಪೊಲೀಸರು ಮತ್ತು ಸಾರ್ವಜನಿಕರ ಸಹಭಾಗಿತ್ವದಲ್ಲಿ ಕಳ್ಳರ ಹಾವಳಿಗೆ ಬ್ರೇಕ್‌ ಹಾಕಲು ಮುಧೋಳ ಮಾದರಿಯಾಗುತ್ತಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X