ಕೊಡಗು | ಅಕ್ರಮ ಮರಳು ಲಾರಿಗಳ ವೇಗದ ಚಾಲನೆ; ಬಾಳೆಲೆ ಸಾರ್ವಜನಿಕರ ಪ್ರತಿಭಟನೆ

Date:

Advertisements

ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಮರಳು ತುಂಬಿದ ಟಿಪ್ಪರ್ ಲಾರಿಗಳು ಅತಿಯಾದ ವೇಗದಿಂದ ಸಂಚಾರ ಮಾಡುತ್ತಿರುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ. ಈ ಹಿಂದೆ ಅಪಘಾತ ಸಂಭವಿಸಿ ಓರ್ವರು ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ ಬಾಳೆಲೆ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.

ಬಾಳೆಲೆ ಸಮೀಪ ಕೈನಟಿಯಲ್ಲಿ ಟಿಪ್ಪರ್ ಲಾರಿ ಹಾಗೂ ಮಾರುತಿ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳೀಯ ಉದ್ಯಮಿ ಅಡ್ಡೆಂಗಡ ಸಜನ್ ಎಂಬವರು ಸಾವನಪ್ಪಿದ್ದರು.

ತಾಲ್ಲೂಕಿನಲ್ಲಿ ಮರಳು ದಂಧೆ ಅಕ್ರಮವಾಗಿ ಎಗ್ಗಿಲ್ಲದೆ ನಡೆಯುತ್ತಿದ್ದು, ಪೊಲೀಸ್ ಇಲಾಖೆ, ಸಂಬಂಧಪಟ್ಟ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ. ಲಾರಿಗಳು ಮರಳು ತುಂಬಿಸಿಕೊಂಡು ವೇಗವಾಗಿ ಓಡಾಡುತ್ತಿದ್ದರೂ ಇತ್ತ ಕಡೆ ಯಾವೊಬ್ಬ ಅಧಿಕಾರಿಗೂ ಗಮನ ಹರಿಸುತ್ತಿಲ್ಲ. ಮರಳು ದಂಧೆಗೆ ಕಡಿವಾಣ ಹಾಕಲು ತಹಶೀಲ್ದಾರ್, ಪೊಲೀಸ್ ಇಲಾಖೆ ವಿಫಲವಾಗಿದ್ದು ಟಿಪ್ಪರ್ ಲಾರಿಗಳ ಓಡಾಟಕ್ಕೆ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಅತಿಯಾದ ವೇಗದಿಂದ ಓಡಾಡುವ ಲಾರಿಗಳಿಂದ ಸಾರ್ವಜನಿಕರು ಜೀವ ಕೈಯಲ್ಲಿಡಿದು ಓಡಾಡುವ ಪರಿಸ್ಥಿತಿ ಎದುರಾಗಿದೆ. ಕಿರಿದಾದ ರಸ್ತೆಗಳು, ಅದರಲ್ಲೂ ಹೆಚ್ಚು ತಿರುವುಗಳು, ಇಳಿಜಾರು, ದಿಣ್ಣೆಯಂತಹ ರಸ್ತೆಗಳಲ್ಲಿ ಮನಬಂದಂತೆ ಲಾರಿ ಚಲಾಯಿಸುತ್ತಿದ್ದು ಬೇರೆ ವಾಹನಗಳಿಗೆ ಕಿರಿಕಿರಿ ಆಗುತ್ತಿರುವುದಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಮಾದಕ ವಸ್ತು ಸೇವನೆ ದುಷ್ಪರಿಣಾಮಗಳ ಜಾಗೃತಿ ಅಗತ್ಯ: ಡಿಸಿ ಶಿಲ್ಪಾ ನಾಗ್

ಟಿಪ್ಪರ್ ಅಪಘಾತಕ್ಕೆ ಬಲಿಯಾದ ಪ್ರಕರಣ ಸಂಬಂಧ ಪೊಲೀಸ್ ಇಲಾಖೆ ಸೂಕ್ತ ಕ್ರಮ ವಹಿಸಬೇಕು. ಕೂಡಲೇ ಇಲಾಖೆ, ತಾಲ್ಲೂಕು ಆಡಳಿತ ಟಿಪ್ಪರ್ ಲಾರಿ ಓಡಾಟ ಹಾಗೂ ಮರಳು ದಂಧೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X