ಕರ್ನಾಟಕದ ಸೋಲಿನಿಂದಾಗಿ ಬಿಜೆಪಿಯಿಂದ ಅವಧಿಪೂರ್ವ ಲೋಕಸಭಾ ಚುನಾವಣೆ ಘೋಷಣೆ: ಎಂ ಕೆ ಸ್ಟಾಲಿನ್

Date:

Advertisements

ಕರ್ನಾಟಕದ ವಿಧಾನಸಭಾ ಸೋಲಿನಿಂದಾಗಿ ಬಿಜೆಪಿಯು ಅವಧಿಗೂ ಮುನ್ನವೇ 2024ರ ಲೋಕಸಭಾ ಚುನಾವಣೆಯನ್ನು ಘೋಷಿಸಲು ಪ್ರಯತ್ನಿಸುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಆರೋಪಿಸಿದ್ದಾರೆ.

ಭಾನುವಾರ ಸೇಲಂ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಭಾರತಾದ್ಯಂತ ಬಿಜೆಪಿ ಪ್ರಭಾವ, ವರ್ಚಸ್ಸು ಕ್ರಮೇಣ ಕಡಿಮೆಯಾಗುತ್ತಿದೆ. ಇದರಿಂದಾಗಿ ಬಿಜೆಪಿ ನಾಯಕರು ಯಾವ ನಿರ್ಧಾರವನ್ನು ಬೇಕಾದರೂ ಕೈಗೊಳ್ಳಬಹುದು. ಕರ್ನಾಟಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅವರು ಸಂಸತ್ತಿನ ಚುನಾವಣೆಯನ್ನು ಮೊದಲೇ ಘೋಷಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಎಂ ಕೆ ಸ್ಟಾಲಿನ್ ತಿಳಿಸಿದರು.

“ಮುಂದಿನ ವರ್ಷ 2024ರ ಏಪ್ರಿಲ್ ಇಲ್ಲವೇ ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೂ ಮೊದಲು ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಸಜ್ಜುಗೊಳಿಸಲು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಆ ಸಭೆಯಲ್ಲಿ ನಾನು ಸಹ ಭಾಗವಹಿಸುತ್ತೇನೆ” ಎಂದು ಸ್ಟಾಲಿನ್ ತಿಳಿಸಿದರು.

Advertisements

“ಕೇಂದ್ರ ಸರ್ಕಾರ ಕಳೆದ 9 ವರ್ಷಗಳಲ್ಲಿ ತಮಿಳುನಾಡಿಗೆ ಏನು ಮಾಡಿದೆ ಎಂಬ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೇಳುತ್ತಿದ್ದೇನೆ. ತಮಿಳುನಾಡಿಗೆ ಕೇಂದ್ರ ಬಿಜೆಪಿ ಸರ್ಕಾರ ಮೀಸಲಿಟ್ಟಿರುವ ವಿಶೇಷ ಯೋಜನೆಗಳ ಪಟ್ಟಿಯನ್ನು ಬಿಡುಗಡೆ ಮಾಡಬೇಕು. ಈ ಮೂಲಕ ರಾಜ್ಯದಲ್ಲಿ ಬಿಜೆಪಿ ಮಾಡಿರುವ ಅಭಿವೃದ್ಧಿ ಕಾರ್ಯದ ಬಗ್ಗೆ ಅಮಿತ್‌ ಶಾ ತಿಳಿಸಬೇಕು” ಎಂದು ಅವರು ಸವಾಲೆಸೆದರು.

ಈ ಸುದ್ದಿ ಓದಿದ್ದೀರಾ? 2024ರಲ್ಲಿ ಮೋದಿ ಗೆದ್ದರೆ ನರೇಂದ್ರ ಪುಟಿನ್‌ ಆಗುತ್ತಾರೆ; ಪಂಜಾಬ್‌ ಸಿಎಂ ಭಗವಂತ್ ಮಾನ್

“ತಮಿಳುನಾಡಿನ ವೆಲ್ಲೂರಿನಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚೆನ್ನೈಗೆ ಆಗಮಿಸಲಿದ್ದಾರೆ ಎಂಬ ಸುದ್ದಿಗಳನ್ನು ಮಾಧ್ಯಮಗಳು ವರದಿ ಮಾಡಿವೆ. ಇವೆಲ್ಲವೂ ಅಮಿತ್ ಶಾ ಅವರು 2024ರ ಸಂಸತ್ ಚುನಾವಣೆಗೆ ಸಜ್ಜಾಗುತ್ತಿರುವುದನ್ನು ತಿಳಿಸುತ್ತವೆ” ಎಂದು ಎಂ ಕೆ ಸ್ಟಾಲಿನ್ ತಿಳಿಸಿದರು.  

ಲೋಕಸಭೆ ಚುನಾವಣೆಗೆ ಸಿದ್ಧರಾಗಿರಿ ಎಂದು ಡಿಎಂಕೆ ಕಾರ್ಯಕರ್ತರಿಗೆ ಕರೆ ನೀಡಿದ ಸ್ಟಾಲಿನ್, ಯಾವುದೇ ರಾಜಕೀಯ ಪಕ್ಷವು ಡಿಎಂಕೆಯನ್ನು ಸೋಲಿಸಲು ಸಾಧ್ಯವಿಲ್ಲ. 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನ ಎಲ್ಲಾ ಸ್ಥಾನಗಳನ್ನು ಗೆಲ್ಲಲು ಶ್ರಮಿಸಬೇಕು ಎಂದು ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X