ಹಾವೇರಿ | ಕಲಿತ ಕೌಶಲ್ಯಗಳಿಂದ ಬದುಕನ್ನು ರೂಪಿಸಿಕೊಳ್ಳಬೇಕು: ಫಾದರ್ ಜೆರಾಲ್ಡ್  ಡಿಸೋಜಾ

Date:

Advertisements

“ದೈಹಿಕ ಹಸಿವಿಗೆ ಹಾಲು ರೊಟ್ಟಿ, ಹಣ್ಣು ಬೇಕು. ಆದರೆ ಜ್ಞಾನದ ಹಸಿವಿಗೆ ಕೌಶಲ್ಯಗಳು ಬೇಕಾಗುತ್ತದೆ. ಕಲಿತ ಕೌಶಲ್ಯಗಳಿಂದ ಬದುಕನ್ನು ರೂಪಿಸಿಕೊಳ್ಳಬೇಕು. ಆಗ ಸ್ಪರ್ಧಾತ್ಮಕ ಬದುಕಿನಲ್ಲಿ ನಾಯಕತ್ವದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ” ಎಂದು ಲೋಯಲಾ ವಿಕಾಸ ಕೇಂದ್ರ ನಿರ್ದೇಶಕರು ಫಾದರ್ ಜೆರಾಲ್ಡ್  ಡಿಸೋಜಾ ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ರೋಷನಿ ಟ್ರಸ್ಟ್ ಸಂಸ್ಥೆಯಲ್ಲಿ ಯುವಜನ ಸಾಮರ್ಥ್ಯ ವೃದ್ಧಿ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

“ಕಲಿತದ್ದನ್ನು ವಿವೇಚನೆಯಿಂದ ಆಲೋಚಿಸಬೇಕು. ಆಲೋಚಿಸಿದ್ದನ್ನು ಭವಿಷ್ಯತ್ತಿನಲ್ಲಿ ರೂಪಗೊಳ್ಳಲು ಅಳವಡಿಕೊಳ್ಳಬೇಕು. ಇಂತಹ ಕಾರ್ಯಾಗಾರ ನಿಮ್ಮ ವ್ಯಕ್ತಿತ್ವ, ಆಲೋಚನಾ ಕ್ರಮ ಬದಲಾವಣೆ ಉಪಯುಕ್ತವಾಗಿದೆ. ಇಂತಹ ಕಾರ್ಯಾಗಾರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು” ಎಂದರು.

Advertisements

ಮಂಜುನಾಥ್ ಎಮ್ ಕಾರ್ಯಕ್ರಮದ ಪ್ರಸ್ತಾವಿಕ ಮಾತನಾಡಿ, “ಅಂಬೇಡ್ಕರ್ ಅವರ ಜೀವನ ಬಹು ದೊಡ್ಡದು. ಅವರ ಹೋರಾಟ ಬದುಕನ್ನು ನಾವೆಲ್ಲರೂ ಅಳವಡಿಸಿಳ್ಳಲು ಇಂತಹ ಕಾರ್ಯಗಾರಗಳು ಬಹಳ ಮುಖ್ಯ ಆಗುತ್ತವೆ. ಗುರುಗಳ, ತಂದೆತಾಯಿ ಮಾತುಗಳನ್ನು ಕೇಳಬೇಕು. ಜೀವನದಲ್ಲಿ ಶಿಸ್ಟನ್ನು ಅಳವಡಿಸಿಕೊಳ್ಳಬೇಕು. ಪ್ರೀತಿ, ವಿಶ್ವಾಸ ನಂಬಿಕೆಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳಬೇಕು. ನಮ್ಮ ಸಮಾಜ ಏನಾಗಿದೆ, ಯಾವ ಕಡೆ ನಡೆದಿದೆ ಎಂಬುದನ್ನು ಇಂದಿನ ಯುವಕರು ಇಂತಹ ಕಾರ್ಯಾಗಾರಗಳಲ್ಲಿ ಭಾಗವಹಿಸಬೇಕು” ಎಂದರು.

ರೋಷನಿ ಸಂಸ್ಥೆಯ ಮುಖ್ಯಸ್ಥರು ಸಿಸ್ಟೆರ್ ಜಾನೆಟ್ ಪಿಂಟೋ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಸಮಾಜದಲ್ಲಿ ಆಗುವಂತ ಸಮಸ್ಯೆಗಳನ್ನು ನಾವೇ ಕಲ್ಪಿಸಿಕೊಳ್ಳಲು ಆಗದಂತಹ ಪರಿಸ್ಥಿತಿ ನಮ್ಮಿಂದಲೇ ಆಗಿದೆ. ಅದರಿಂದ ಆಚೆ ಬಂದು ನಾವು ನೀವೆಲ್ಲ ಆಲೋಚಿಸಬೇಕಿದೆ. ನಮ್ಮ ಸಂವಿಧಾನದಲ್ಲಿ ಸಮಾನತೆ, ಭ್ರಾತೃತ್ವ, ಸ್ವಾತಂತ್ರ ಒಳಗೊಂಡು ರೂಪಿತವಾಗಿದೆ. ಹಾಗಾಗಿ ಸಂವಿಧಾನದ ಮೂಲಕ ಸಮಾಜದ ಎಲ್ಲ ಜನರನ್ನು ಗೌರವಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿ‌ಪಿ‌ಐ ಪ್ರತಿಭಟನೆ

ಕಾರ್ಯಕ್ರಮದಲ್ಲಿ ರೋಷನಿ ಸಂಸ್ಥೆಯ ನಿರ್ದೇಶಕರು ಸಿಸ್ಟೆರ್ ಅನಿತಾ ಡಿಸೋಜಾ ಆಯೋಜನಕರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪೈರೋಜ್ ಅಹಮ್ಮದ ಶಿರಬಡಗಿ, ನಾಗರಾಜ್ ಪೂಜಾರ್, ರಂಜಿತಾ ಗೊಲ್ಲರ್ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಶಿಬಿರರ್ಥಿಗಳು ಉಪಸ್ಥಿತರಿದ್ದರು. ಮಂಜುನಾಥ್ ಗೌಳಿ ನಿರೂಪಿಸಿದರು. ಎಸ್ ವಿ ಪಾಟೀಲ್ ಸ್ವಾಗತಿಸಿದರು. ಫಕಿರೇಶ್ ಗುಂಡಳ್ಳಿ ವಂದನಾರ್ಪಣೆ ಮಾಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X