ವಿದ್ಯುತ್ ದರ ಹೆಚ್ಚಳಕ್ಕೆ ಸ್ಪಷ್ಟನೆ ನೀಡಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ

Date:

Advertisements
  • ಮೇ 12ರಂದು ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 70 ಪೈಸೆ ಏರಿಕೆ ಮಾಡಿದ ಕೆಇಆರ್‌ಸಿ
  • ಬೆಸ್ಕಾಂ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ 59 ಪೈಸೆ ಯಷ್ಟು ವಿಧಿಸಲು ಕೆಇಆರ್‌ಸಿ ಅನುಮತಿ ನೀಡಿದೆ

ರಾಜ್ಯದಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ತನ್ನ ಘೋಷಿತ ಐದು ಗ್ಯಾರಂಟಿಗಳಲ್ಲಿ ಒಂದಾದ 200 ಯೂನಿಟ್‌ ಉಚಿತ ವಿದ್ಯುತ್ ಅನ್ನು ಕೆಲವು ಷರತ್ತುಗಳೊಂದಿಗೆ ಜುಲೈಗೆ ಅನ್ವಯವಾಗುವಂತೆ ಜಾರಿಗೆ ತಂದಿದೆ. ಈ ಬಾರಿಯ ವಿದ್ಯುತ್ ಕಳೆದ ಬಾರಿಗಿಂತ ಹೆಚ್ಚಿಗೆ ಬಂದಿರುವುದು ಜನರಲ್ಲಿ ಗೊಂದಲ ಸೃಷ್ಟಿ ಮಾಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಮೇ 12 ರಂದು ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 70 ಪೈಸೆ ಏರಿಕೆ ಮಾಡಿದೆ. ಈ ಹಿನ್ನೆಲೆ ಬೆಸ್ಕಾಂ ಜೂನ್ ತಿಂಗಳಲ್ಲಿ ನೀಡುವ ಮೇ ತಿಂಗಳ ವಿದ್ಯುತ್ ಬಳಕೆಯ ಬಿಲ್‌ನಲ್ಲಿ ಪರಿಷ್ಕೃತ ವಿದ್ಯುತ್ ಶುಲ್ಕವನ್ನು ನಮೂದಿಸಿದೆ. ವಿದ್ಯುತ್ ದರ ಪರಿಷ್ಕರಣೆ ಆದೇಶ ಏಪ್ರಿಲ್‌ನಿಂದ ಪೂರ್ವನ್ವಯವಾಗುವುದರಿಂದ ಬಿಲ್‌ನಲ್ಲಿ ಏಪ್ರಿಲ್ ತಿಂಗಳ ಹಿಂಬಾಕಿಯನ್ನು ನೀಡಲಾಗಿದೆ.

ಕೆಇಆರ್‌ಸಿ ಆದೇಶದ ಪ್ರಕಾರ, ಎರಡು ಶ್ರೇಣಿಗಳಲ್ಲಿ ವಿದ್ಯುತ್ ಶುಲ್ಕವನ್ನು ಸಂಗ್ರಹಿಸಲಾಗುತ್ತಿದೆ. ಗ್ರಾಹಕರು ಬಳಸುವ ಮೊದಲ 100 ಯೂನಿಟ್‌ ವಿದ್ಯುತ್‌ಗೆ ಪ್ರತಿ ಯೂನಿಟ್‌ ದರ ₹4.75 ವಿಧಿಸಲಾಗಿದೆ. 100 ಯೂನಿಟ್ ಮೀರಿದರೆ ಬಳಸಿದ ಅಷ್ಟೂ ಯೂನಿಟ್‌ಗೆ ಎರಡನೇ ಶ್ರೇಣಿ ದರ ಪ್ರತಿ ಯೂನಿಟ್‌ಗೆ ₹7 ಅನ್ವಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

Advertisements

ಈ ಮೊದಲು ಮೂರು ಶ್ರೇಣಿ ದರಗಳಲ್ಲಿ ಸಂಗ್ರಹಿಲಾಗುತ್ತಿತ್ತು. (ಮೊದಲ 50 ಯೂನಿಟ್‌ಗೆ ₹4.15, ನಂತರದ 50 ಯೂನಿಟ್‌ಗೆ ₹5.6 ಹಾಗೂ 100 ಯೂನಿಟ್ ಮೀರಿದರೆ ₹7.15 ಸಂಗ್ರಹಿಸಲಾಗುತ್ತಿತ್ತು) ಇದೀಗ ಎರಡು ಶ್ರೇಣಿ ದರಗಳಲ್ಲಿ ಸಂಗ್ರಹಿಸಲು ಕೆಇಆರ್‌ಸಿ ಮೇ 12 ರಂದು ಹೊರಡಿಸಿರುವ ಆದೇಶದಲ್ಲಿ ಸ್ಪಷ್ಟಪಡಿಸಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ನಿಗದಿತ ಶುಲ್ಕ ಪರಿಷ್ಕರಣೆ

ಕೆಇಆರ್‌ಸಿ ದರ ಪರಿಷ್ಕರಣೆ ಆದೇಶದಲ್ಲಿ ನಿಗದಿತ ಶುಲ್ಕದಲ್ಲಿ 1 ರಿಂದ 50 ಕಿಲೋ ವ್ಯಾಟ್‌ ವಿದ್ಯುತ್‌ ಮಂಜೂರಾತಿ ಲೋಡ್‌ಗೆ ₹110 ಮತ್ತು 50 ಕೆವಿಗೆ ಮೇಲ್ಪಟ್ಟ ವಿದ್ಯುತ್‌ ಮುಂಜೂರಾತಿ ಲೋಡ್‌ಗೆ ₹210 ಬರಲಿದೆ.

ಕೆಇಆರ್‌ಸಿ ದರ ಪರಿಷ್ಕರಣೆ ನೀತಿ  

ಕೆಇಆರ್‌ಸಿ ದರ ನಿಯಂತ್ರಣ ಅಧಿಸೂಚನೆ 2006ರ ಪ್ರಕಾರ ಎಲ್ಲ ಎಸ್ಕಾಂಗಳೂ ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ವಿದ್ಯುತ್ ದರ ಪರಿಷ್ಕರಣೆಗೆ ಕೆಇಆರ್‌ಸಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಿ ಎಸ್ಕಾಂಗಳ ಮನವಿಯನ್ನು ಪರಿಗಣಿಸಿ ಕೆಇಆರ್‌ಸಿ ಪ್ರತಿ ವರ್ಷ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ದರ ಪರಿಷ್ಕರಣೆ ಆದೇಶವನ್ನು ನೀಡುತ್ತದೆ. ಇದು ಕೆಇಆರ್‌ಸಿಯ ಸಾಮಾನ್ಯ ನಡವಳಿಯಾಗಿದ್ದು, ಎಸ್ಕಾಂಗಳು ದರ ಪರಿಷ್ಕಣೆಗೆ ಅರ್ಜಿ ಸಲ್ಲಿಸದಿದ್ದ ಪಕ್ಷದಲ್ಲಿ ಕೆಇಆರ್‌ಸಿ ಸ್ವಯಂಪ್ರೇರಿತವಾಗಿ ವಿದ್ಯುತ್ ದರ ಏರಿಕೆ ಆದೇಶ ನೀಡಲು ಕಾನೂನಿನಲ್ಲಿ ಅವಕಾಶವಿದೆ.

ಈ ವರ್ಷದ ಮಾರ್ಚ್/ಏಪ್ರಿಲ್ ನಲ್ಲಿ ಜಾರಿಗೆ ಬರಬೇಕಿದ್ದ ದರ ಪರಿಷ್ಕರಣೆ ಆದೇಶವನ್ನು ಮಾರ್ಚ್ 29, 2023ರಂದು ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ಹಿನ್ನೆಲೆಯಲ್ಲಿ ಕೆಇಆರ್‌ಸಿ ತಡೆ ಹಿಡಿದಿತ್ತು, ಚುನಾವಣೆ ಮುಗಿದ ತಕ್ಷಣ, ಮೇ 12ರಂದು ದರ ಪರಿಷ್ಕರಣೆ ಮಾಡಿ ಏಪ್ರಿಲ್‌ನಿಂದ ಪೂರ್ವನ್ವಯವಾಗುವಂತೆ ಜಾರಿಗೊಳಿಸಿ ಕೆಇಆರ್‌ಸಿ ಆದೇಶ ನೀಡಿತ್ತು.

2022ರ ನವೆಂಬರ್‌ನಲ್ಲಿ ವಿದ್ಯುತ್ ದರ ಪರಿಷ್ಕರಣೆಗೆ ನೀಡಿದ್ದ ಮನವಿಯನ್ನು ಪುರಸ್ಕರಿಸಿ ಏಪ್ರಿಲ್ ತಿಂಗಳಿಂದ ಅನ್ವಯವಾಗುವಂತೆ ಪ್ರತಿ ಯೂನಿಟ್ ಗೆ 70 ಪೈಸೆ ಯಷ್ಟು ಹೆಚ್ಚಳ ಮಾಡಿದ ಮೊತ್ತವನ್ನು ಜೂನ್ ತಿಂಗಳಲ್ಲಿ ಸಂಗ್ರಹಿಸಲಾಗುತ್ತಿದೆ ಎಂದು ಬೆಸ್ಕಾಂ ಎಂಡಿ ಹೇಳಿದ್ದಾರೆ.

ವಿದ್ಯುತ್ ದರ ಪರಿಷ್ಕರಣೆಯನ್ನು ನವೆಂಬರ್ 4, 2020 ರಂದು ಪ್ರತಿ ಯೂನಿಟ್ ಗೆ 40 ಪೈಸೆ, ಜೂನ್ 6, 2021ರಂದು ಪ್ರತಿ ಯೂನಿಟ್ ಗೆ 30 ಪೈಸೆ ಹಾಗೂ ಏಪ್ರಿಲ್ 4, 2022ರಂದು ಪ್ರತಿ ಯೂನಿಟ್‌ಗೆ 35 ಪೈಸೆಗಳಷ್ಟು ಹೆಚ್ಚಳ ಮಾಡಿ ಕೆಇಆರ್‌ಸಿ ಆದೇಶ ಹೊರಡಿಸಿತ್ತು.

ಈ ಸುದ್ದಿ ಓದಿದ್ದೀರಾ? 5 ತಿಂಗಳಿನಲ್ಲಿ 55 ಬಲಿ ಪಡೆದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ

ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕ

ಕಾಲಕಾಲಕ್ಕೆ ಕೆಇಆರ್‌ಸಿ ಜಾರಿಗೊಳಿಸುವ ವಿದ್ಯುತ್ ದರ ಪರಿಷ್ಕರಣೆಗೂ ಮತ್ತು ಎಸ್ಕಾಂಗಳು ಜನರೇಟರ್ ಗಳಿಂದ ಖರೀದಿಸುವ ವಿದ್ಯುತ್ ಮೇಲಿನ ಇಂಧನ ವೆಚ್ಚದಲ್ಲಿನ ಬೆಲೆಯಲ್ಲಿ ವ್ಯತ್ಯಾಸ ಉಂಟಾಗುವುದಿರಂದ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕವನ್ನು ವಿಧಿಸಲು ಕೆಇಆರ್‌ಸಿ ಎಸ್ಕಾಂಗಳಿಗೆ ಅನುಮತಿ ನೀಡುತ್ತದೆ.

ಕೇಂದ್ರ ಸರ್ಕಾರ 2005ರ ವಿದ್ಯುಚ್ಚಕ್ತಿ ನಿಯಮಗಳಿಗೆ ಡಿಸೆಂಬರ್ 29, 2002ರಲ್ಲಿ ತಿದ್ದುಪಡಿ ತಂದು ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚವನ್ನು ಸಮಯಕ್ಕೆ ಸರಿಯಾಗಿ ಸಂಗ್ರಹಿಸಲು ಸೂಚಿಸಿತ್ತು.

ಈ ತಿದ್ದುಪಡಿ ಅನ್ವಯ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚವನ್ನು ಪ್ರತಿ ತಿಂಗಳು ಗ್ರಾಹಕರಿಂದ ಸಂಗ್ರಹಿಸಲು ಕೆಇಆರ್‌ಸಿ ಫೆಬ್ರವರಿ 23, 2023ರಂದು ಅಧಿಸೂಚನೆ ಹೊರಡಿಸಿತ್ತು.

ಹಾಗಾಗಿ, ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚವನ್ನು ಬೆಸ್ಕಾಂ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ 59 ಪೈಸೆ ಯಷ್ಟು ವಿಧಿಸಲು ಕೆಇಆರ್‌ಸಿ ಅನುಮತಿ ನೀಡಿದ್ದು, ಈ ಮೊತ್ತವನ್ನು ಜೂನ್ ತಿಂಗಳಲ್ಲಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ ಎಂದು ಬೆಸ್ಕಾಂ ಎಂಡಿ ತಿಳಿಸಿದ್ದಾರೆ.  

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

4 COMMENTS

  1. ಎನ್ ಬೇಕಾದ್ರೂ ಸ್ಪಷ್ಟನೆ ಕೊಟ್ಟಿಕೊಳ್ಳುತ್ತೀರಿ ಸ್ವಾಮಿ, ಆದ್ರೆ ನಮ್ಗೆ ಕಟ್ಟೋವಷ್ಟು ಆದಾಯ ಬರೋ ದಾರಿಯನ್ನೂ ತೋರಿಸಿ, ಇಲ್ಲ ಅಂದ್ರೆ ವಿದ್ಯುತ್ ಕಳ್ಳತನ ಆರಂಭಿಸವೇಕಾಗುತ್ತೆ ಜನರು.

  2. ಎಕಾಏಕಿ ನೀವು ಇನ್ನೂರು ಮುನ್ನೂರು ಬರುತ್ತಿದ್ದ ಬಿಲ್ಲನ್ನ ಸಾವಿರ ಕಟ್ಟಿ ಅಂದ್ರೆ ಬಡವರು ಕೂಲಿ ಮಾಡಿ ನಾವು ಕಟ್ಟಬೇಕು ಸ್ವಾಮಿ… ನಿಮ್ಮ ಗವರ್ನಮೆಂಟ್ ಎಸಿ ಕಾರಲ್ಲಿ ಕೂತ್ತಿಲ್ಲ ನಿಮ್ಮ ಆದೇಸಕ್ಕೆ ನನ್ನ…… ‌‌ಹಾಕ

  3. ಎಕಾಏಕಿ ನೀವು ಇನ್ನೂರು ಮುನ್ನೂರು ಬರುತ್ತಿದ್ದ ಬಿಲ್ಲನ್ನ ಸಾವಿರ ಕಟ್ಟಿ ಅಂದ್ರೆ ಬಡವರು ಕೂಲಿ ಮಾಡಿ ನಾವು ಕಟ್ಟಬೇಕು ಸ್ವಾಮಿ… ನಿಮ್ಮತರ ಗವರ್ನಮೆಂಟ್ ಎಸಿ ಕಾರಲ್ಲಿ ಕೂತ್ತಿಲ್ಲ ನಿಮ್ಮ ಆದೇಸಕ್ಕೆ ನನ್ನ…… ‌‌ಹಾಕ

  4. ಬಿಲ್ ನಲ್ಲಿ ಇತರೆ ಅಂತ 200 ರೂ. ಸೇರಿಸಿದ್ದೀರಲ್ಲಪ್ಪ. ಅದೇನು ನಿಮ್ಮ ಮೋಜು ಮೇಜವಾನಿ ಖರ್ಚಾ ?

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X