ಗದಗ | ಛಲವಾದಿ ಸಮಾಜಕ್ಕೆ ಭೂಮಿ ಮಂಜೂರು ಮಾಡಲು ಜಿಲ್ಲಾಧಿಕಾರಿಗೆ ಮನವಿ

Date:

Advertisements

“ಅನೇಕ ದಶಕಗಳಿಂದ ಸಮಾಜದ ಒಳಿತಿಗಾಗಿ ಮತ್ತು ಸಮಾಜದ ಅಭಿವೃದ್ಧಿಗಾಗಿ ಅನೇಕ ಜನ ಹಿರಿಯರು ತಮ್ಮ ಜೀವನವನ್ನೇ ಸವೆಸಿದ್ದಾರೆ. ಇಂತಹ ಸದೃಢ ಸಮಾಜ ಕಟ್ಟುವಲ್ಲಿ ಶ್ರಮಿಸಿದ. ಸಮಾಜದ ಹಿರಿಯರನ್ನು ಮತ್ತು ನಾಯಕರ ಸ್ಮರಣೆಗೆ ಭೂಮಿ ಮಂಜೂರು ಮಾಡಬೇಕು” ಎಂದು ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಆನಂದ ಶಿಂಗಾಡಿ ಒತ್ತಾಯಿಸಿದರು.

ಛಲವಾದಿ ಮಹಾಸಭಾ ಜಿಲ್ಲಾ ಸಮಿತಿಗೆ ಐದು ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಗದಗ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಗದಗ ಜಿಲ್ಲೆಯಲ್ಲಿ ನಮ್ಮ ಛಲವಾದಿ ಸಮಾಜವು ರಾಜಕೀಯವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಅತೀ ಹಿಂದುಳಿದಿದೆ. ಇತ್ತೀಚಿನ ವರ್ಷಗಳಲ್ಲಿ ಸಾಮಾಜಿಕ ನ್ಯಾಯದ ಪರ ನಿಲ್ಲುವ ಸರ್ಕಾರಗಳು ಬಂದ ನಂತರ ಭಲವಾದಿ ಸಮಾಜ ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಸಮಾಜದ ಮುಖ್ಯವಾಹಿನಿಗೆ ಬಂದಿದೆ. ಆದರೂ ‘ಸಮಾಜದಲ್ಲಿ ಇನ್ನೂ ಕೂಡಾ ಹೇಳಿಕೊಳ್ಳುವಷ್ಟು ಬದಲಾವಣೆಗಳು ಆಗಿಲ್ಲ’ ಎನ್ನುವ ಬೇಸರವನ್ನು ವ್ಯಕ್ತಪಡಿಸುತ್ತಾ, ಇಂತಹ ಸಮಾಜವನ್ನು ಮತ್ತಷ್ಟು ಬಲಿಷ್ಠಗೊಳಿಸಿ ಸಮಾಜದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಸಹಕಾರಿಯಾಗಲು ನಮಗೆ ಬಂದು ಶೈಕ್ಷಣಿಕ ಭವನದ ಅವಶ್ಯಕತೆ ಇದೆ” ಎಂದು ಮನವಿ ಮಾಡಿದರು.

Advertisements

“ಜಿಲ್ಲೆಯಲ್ಲಿ ಛಲವಾದಿ ಸಮಾಜಕ್ಕೆ ಕನಿಷ್ಠ ಐದು ಎಕರೆ ಭೂಮಿಯನ್ನು ಮಂಜೂರು ಮಾಡಬೇಕು. ಅಲ್ಲಿ ಸಮಾಜದ ಅಭಿವೃದ್ಧಿಗಾಗಿ ಚಿಂತನೆ ನಡೆಸುವ ಭವ್ಯವಾದ ಕಟ್ಟಡ ಕಟ್ಟಲು ಮತ್ತು ಮಹಿಳೆಯರ ಮಕ್ಕಳ ಹಾಗೂ ವಿದ್ಯಾರ್ಥಿ ಯುವಜನರ ಆಶೋತ್ತರಗಳಿಗೆ ಪೂರಕವಾಗುವ ಯೋಜನೆಗಳನ್ನು ರೂಪಿಸಲಾಗುವುದು. ನಮ್ಮ ಜಿಲ್ಲೆಯಲ್ಲಿ ಸಮಾಜದ ಶೈಕ್ಷಣಿಕ ಸಾಮರ್ಥ್ಯ ಹೆಚ್ಚಿದ್ದು ಅದನ್ನು ಮತ್ತಷ್ಟು ಪ್ರೋತ್ಸಾಹಿಸಲು ನಮಗೆ ಮಕ್ಕಳ ಯುವಜನರ ವಿಧ್ಯಾಭ್ಯಾಸಕ್ಕಾಗಿ ಕಟ್ಟಡವನ್ನು ನಿರ್ಮಿಸಲು ಅವಕಾಶ ಕಲ್ಪಿಸಿಕೊಡಬೇಕು” ಎಂದು ಆನಂದ ಶಿಂಗಾಡಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸೈಬರ್ ವಂಚನೆ ಬಗ್ಗೆ ಎಚ್ಚರವಹಿಸಿ : ಪ್ರೊ.ಬಿ.ಎಸ್.ಬಿರಾದಾರ್

ಮನವಿ ಸಂದರ್ಭದಲ್ಲಿ ಮುಖಂಡರು ಬಾಲರಾಜ್ ಅರಬರ್, ಶಿವಾನಂದ ತಮ್ಮಣ್ಣವರ, ಮುತ್ತು ಚೌಡಣ್ಣವರ, ಪರಶು ಕಾಳೆ, ಅನಿಲ್ ಕಾಳೆ, ರಮೇಶ್ ಛಲವಾದಿ ಇನ್ನೂ ಅನೇಕರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X