ಎಪಿಎಲ್‌ ಕುಟುಂಬಗಳಿಗೂ ಕೆಎಫ್‌ಡಿ ಉಚಿತ ಚಿಕಿತ್ಸೆ ವಿಸ್ತರಣೆ: ಸಚಿವ ದಿನೇಶ್‌ ಗುಂಡೂರಾವ್

Date:

Advertisements

ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್‌ ಡಿಸೀಸ್ (ಕೆಎಫ್‌ಡಿ) ನಿಯಂತ್ರಣಕ್ಕೆ ನಮ್ಮ ಸರ್ಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ರೋಗದಿಂದ ಬಾಧಿತರಾದವರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್‌ ಕುಟುಂಬಗಳಿಗೂ ವಿಸ್ತರಿಸಲಾಗಿದೆ‌ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೆಎಫ್‌ಡಿ ಬಾಧಿತ ಎಪಿಎಲ್ ಕುಟುಂಬದ ಸದಸ್ಯರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಅಡಿ ನೋಂದಾಯಿಸಿಕೊಂಡಿರುವ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರೆಯಲಿದೆ. ಇದರಿಂದ ನೂರಾರು ಕುಟುಂಬಗಳಿಗೆ ಸಹಾಯವಾಗಲಿದೆ ಎಂದು ಎಕ್ಸ್‌ ತಾಣದಲ್ಲಿ ಬರೆದುಕೊಂಡಿದ್ದಾರೆ.

“ಈಗಾಗಲೇ ಮಂಗನ ಕಾಯಿಲೆ ವಿರುದ್ಧ ನಿರ್ಣಾಯಕ ಹೆಜ್ಜೆಯಿಟ್ಟಿರುವ ನಮ್ಮ ಸರ್ಕಾರ ಐಸಿಎಂಆರ್ ಜೊತೆಗೆ ಚರ್ಚೆ ನಡೆಸಿದ್ದು, ಪ್ರಯೋಗಗಳ ಬಳಿಕ 2026ರ ವೇಳೆಗೆ ಕೆಎಫ್‌ಡಿ ಲಸಿಕೆ ಸಿಗಲಿದೆ. ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಹೇಳಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X