ಟ್ಯಾಂಕರ್‌ನಲ್ಲಿ ನೆರೆ ರಾಜ್ಯದ ತ್ಯಾಜ್ಯ: ಕ್ರಮಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

Date:

Advertisements

ನೆರೆ ರಾಜ್ಯದಿಂದ ಅಪಾಯಕಾರಿ ದ್ರವ ತ್ಯಾಜ್ಯವನ್ನು ಟ್ಯಾಂಕರ್‌ಗಳಲ್ಲಿ ತಂದು ಮಂಗಳೂರಿನ ಚರಂಡಿ ಮತ್ತು ರಾಜಕಾಲುವೆಗೆ ಸುರಿಯಲಾಗುತ್ತಿರುವ ವರದಿ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಈ ಬಗ್ಗೆ ಜಲ ಕಾಯಿದೆ ಅಡಿ ಪ್ರಕರಣ ದಾಖಲಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿಂದು ವರದಿಗಾರರೊಂದಿಗೆ ಮಾತನಾಡಿದ ಅವರು, “ಚರಂಡಿ, ರಾಜಕಾಲುವೆಗಳಿಗೆ ಸುರಿದ ದ್ರವ ತ್ಯಾಜ್ಯ, ನದಿ, ಕೆರೆ, ಸಮುದ್ರ ಸೇರಿ ಜಲ ಚರಗಳ ಮತ್ತು ಜಾನುವಾರುಗಳ ಸಾವಿಗೆ ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ಕೂಡಲೇ ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಜಲ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಮಂಗಳೂರು ವಿಭಾಗದ ಅಧಿಕಾರರಿಗಳಿಗೆ ಸೂಚಿಸುವುದಾಗಿ” ಹೇಳಿದರು.

“ದ್ರವ ತ್ಯಾಜ್ಯವನ್ನು ಬತ್ತಿ ಹೋದ ಬೋರ್ ವೆಲ್ ಗಳಲ್ಲಿ, ಚರಂಡಿಗಳಲ್ಲಿ, ಕೆರೆ, ಕುಂಟೆ ಸೇರಿದಂತೆ ಯಾವುದೇ ಜಲ ಮೂಲಕ್ಕೆ ಹರಿಸುವುದು ಅಪರಾಧವಾಗಿರುತ್ತದೆ. ಈ ರೀತಿ ಕಾನೂನು ಬಾಹಿರವಾಗಿ ತ್ಯಾಜ್ಯ ಸುರಿಯುವವರ ವಿರುದ್ಧ ಪರಿಸರ ಸಂರಕ್ಷಣಾ ಕಾಯಿದೆ ಅಡಿಯಲ್ಲೂ ಕ್ರಮ ಜರುಗಿಸಲಾಗುವುದು” ಎಂದರು.

Advertisements

“ಕರ್ನಾಟಕ ಸರ್ಕಾರ ಪ್ರಕೃತಿ ಪರಿಸರ ಸಂರಕ್ಷಣೆಗೆ ಬದ್ಧವಾಗಿದ್ದು, ಈ ರೀತಿಯ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ. ಜಿಲ್ಲಾಡಳಿತ, ಸ್ಥಳೀಯ ಸಂಸ್ಥೆಗಳು, ಪೊಲೀಸರು ಕೂಡ ಈ ನಿಟ್ಟಿನಲ್ಲಿ ಕಾನೂನು ರೀತ್ಯ ಸೂಕ್ತ ಕ್ರಮ ಜರುಗಿಸುತ್ತಾರೆ” ಎಂದು ಈಶ್ವರ ಖಂಡ್ರೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X