‘ಶೀಶ್ ಮಹಲ್’ ಪ್ರಕರಣ: ಕೇಜ್ರಿವಾಲ್ ವಿರುದ್ಧ ತನಿಖೆಗೆ ಕೇಂದ್ರ ಆದೇಶ

Date:

Advertisements

ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮಾಜಿ ಮುಖ್ಯಮಂತ್ರಿಯಾಗಿದ್ದಾಗ, ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಶೀಶ್‌ ಮಹಲ್‌’ನ ಐಷಾರಾಮಿ ನವೀಕರಣ ಕಾಮಗಾರಿ ನಡೆಸಲಾಗಿದ್ದು, ಆ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ. ಕಟ್ಟಡ ಮಾನದಂಡಗಳನ್ನೂ ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ವಿವರವಾದ ತನಿಖೆ ನಡೆಸಲು ಕೇಂದ್ರ ಸರ್ಕಾರವು ಆದೇಶಿಸಿದೆ.

ಅಕ್ರಮ ಮತ್ತು ಮಾನಡಂಗಳ ಉಲ್ಲಂಘನೆ ಕುರಿತು ತನಿಖೆ ನಡೆಸುವಂತೆ ಕೇಂದ್ರ ಲೋಕೋಪಯೋಗಿ ಇಲಾಖೆಗೆ (ಸಿಪಿಡಬ್ಲ್ಯೂಡಿ) ಕೇಂದ್ರ ಜಾಗೃತ ಆಯೋಗವು (ಸಿವಿಸಿ) ಕೇಳಿದೆ.

ಮುಖ್ಯಮಂತ್ರಿಗಳ ನಿವಾಸ ಶೀಶ್‌ ಮಹಲ್ 40,000 ಚದರ ಗಜಗಳಷ್ಟು (8 ಎಕರೆ) ವಿಸ್ತಾರವಾದ ಪ್ರದೇಶದಲ್ಲಿದೆ. ಈ ಕಟ್ಟಡವನ್ನು ನಿರ್ಮಿಸಲು ಕಟ್ಟಡ ಮಾನದಂಡಗಳನ್ನು ಉಲ್ಲಂಘಿಸಿ, ಯೋಜನೆ ರೂಪಿಸಲಾಗಿದೆ ಎಂದು ಆರೋಪಿಸಲಾಗಿದೆ.

Advertisements

ದೆಹಲಿಯ 6 ಫ್ಲ್ಯಾಗ್ ಸ್ಟಾಫ್ ರಸ್ತೆಯಲ್ಲಿರುವ ಮುಖ್ಯಮಂತ್ರಿ ನಿವಾಸದ (ಶೀಶ್‌ ಮಹಲ್) ನವೀಕರಣದಲ್ಲಿ ಅಕ್ರಮ ನಡೆದಿದೆ. ಕಟ್ಟಡ ಮಾನದಂಡಗಳನ್ನು ಉಲ್ಲಂಘಿಸಲಾಗಿದೆ ಎಂದು 2024ರ ಅಕ್ಟೋಬರ್ 14ರಂದು ಬಿಜೆಪಿ ನಾಯಕ ವಿಜೇಂದರ್ ಗುಪ್ತಾ ಅವರು ಸಿವಿಸಿಗೆ ದೂರು ನೀಡಿದ್ದರು.

“ರಾಜ್‌ಪುರ ರಸ್ತೆಯಲ್ಲಿರುವ ಸರ್ಕಾರಿ ನಿವಾಸಗಳ ಸಂಖ್ಯೆ 45 ಮತ್ತು 47 (ಹಿಂದೆ ಹಿರಿಯ ಅಧಿಕಾರಿಗಳು ಮತ್ತು ನ್ಯಾಯಾಧೀಶರಿಗೆ ನಿವಾಸಗಳನ್ನು ನೀಡಲಾಗಿತ್ತು) ಎರಡು ಬಂಗಲೆಗಳನ್ನು ಕೆಡವಿ ಶೀಶ್‌ ಮಹಲ್‌ ಜೊತೆಗೆ ವಿಲೀನಗೊಳಿಸಲಾಗಿದೆ. ಇದು ಕಟ್ಟಡ ಮಾನದಂಡಗಳನ್ನು ಉಲ್ಲಂಘಿಸಿದೆ. ಯೋಜನೆಗೆ ವಿನ್ಯಾಸ ಅನುಮೋದನೆಯನ್ನೂ ಪಡೆಯಲಾಗಿಲ್ಲ” ಎಂದು ದೂರಿನಲ್ಲಿ ಆರೋಪಿಸಿದ್ದರು.

“ಅರವಿಂದ್ ಕೇಜ್ರಿವಾಲ್ ತಮ್ಮ ನಿವಾಸದ ಐಷಾರಾಮಿ ಸೌಕರ್ಯಗಳಿಗಾಗಿ ತೆರಿಗೆದಾರರ ಕೋಟ್ಯಂತರ ಹಣವನ್ನು ಖರ್ಚು ಮಾಡಿದ್ದಾರೆ. ಐಷಾರಾಮಿ ವಸ್ತುಗಳ ಮೇಲಿನ ಖರ್ಚುಗಳು ಸೂಚಿಸಲಾದ ಮಿತಿಗಳನ್ನು ಮೀರಿವೆ. ಅಕ್ರಮ ನಡೆದಿದೆ” ಎಂದು ಆರೋಪಿಸಿದ್ದರು.

ದೂರು ದಾಖಲಾದ ಬಳಿಕ, ಫೆಬ್ರವರಿ 13 ರಂದು ಸಿಎಂ ನಿವಾಸದ ವಾಸ್ತವಿಕ ವರದಿಯನ್ನು ಸಿಪಿಡಬ್ಲ್ಯೂಡಿ ಸಲ್ಲಿಸಿದೆ. ಇದೀಗ, ತನಿಖೆ ನಡೆಸುವಂತೆ ಸಿವಿಸಿ ಆದೇಶಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X