ದೆಹಲಿ | ಮುಸ್ಲಿಮರಿಗೆ ಬಿಜೆಪಿ ಶಾಸಕನಿಂದ ಬುಲ್ಡೋಜರ್ ಬೆದರಿಕೆ: ವಿಡಿಯೋ ವೈರಲ್

Date:

Advertisements

ಆಸ್ತಿ, ನಿವಾಸಗಳ ಮೇಲೆ ಬುಲ್ಡೋಜರ್ ಹತ್ತಿಸುವುದಾಗಿ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಬಿಜೆಪಿಯ ನೂತನ ಶಾಸಕ ರವೀಂದರ್ ಸಿಂಗ್‌ ನೇಗಿ ಬೆದರಿಕೆ ಹಾಕಿರುವ ಘಟನೆ ದೆಹಲಿಯ ಪ್ರತಾಪ್‌ಗಂಜ್‌ನಲ್ಲಿ ನಡೆದಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಈ ಹಿಂದೆ, ದೆಹಲಿ ಪಾಲಿಕೆಯ ಕೌನ್ಸಿಲರ್‌ ಆಗಿದ್ದ ನೇಗಿ ಮುಸ್ಲಿಮರ ವಿರುದ್ಧ ಪ್ರಚೋದನಾಕಾರಿ ದ್ವೇಷ ಭಾಷಣ ಮಾಡುವಲ್ಲಿ ಕುಖ್ಯಾತಿ ಹೊಂದಿದ್ದರು. ಇತ್ತೀಚೆಗೆ ನಡೆದ ದೆಹಲಿ ಚುನಾವಣೆಯಲ್ಲಿ ಅವರು ಪ್ರತಾಪ್‌ಗಂಜ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಪ್ರತಾಪ್‌ಗಂಜ್‌ನ ನಿವಾಸಿ ಅಬ್ದುಲ್ ರಹೀಮ್ ಎಂಬವರ ಅಸ್ತಿಯ ಮೇಲೆ ಬುಲ್ಡೋಜರ್ ಹರಿಸುವುದಾಗಿ ಶಾಸಕ ನೇಗಿ ಬೆದರಿಕೆ ಹಾಕಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಜನಸಮೂಹದ ನಡುವೆ ಪೊಲೀಸರೊಂದಿಗೆ ನೇಗಿ ಇರುವುದು ಕಾಣಿಸುತ್ತದೆ. “ನೀವು ಭೂಮಿಯನ್ನು ಖಾಲಿ ಮಾಡಬೇಕು. ಇಲ್ಲದಿದ್ದರೆ ದೊಡ್ಡ ಕ್ರಮ ಕೈಗೊಳ್ಳಲಾಗುವುದು. ನಿಮ್ಮ ಜೀವನದುದ್ದಕ್ಕೂ ನೀವು ಒದ್ದಾಟ ನಡೆಸಬೇಕಾಗುತ್ತದೆ. ಸ್ಥಳೀಯ ಜನರನ್ನು ವ್ಯಸನಕಾರಿಯಾಗಿಸುವ ಚಾಳಿ ನಿಲ್ಲಿಸಬೇಕು” ಎಂದು ನೇಗಿ ಧಮ್ಕಿ ಹಾಕುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Advertisements

ತಮ್ಮ ಪ್ರದೇಶದಲ್ಲಿ ಯಾವುದೇ ಮಾದಕ ವಸ್ತು ಮಾರಾಟ ನಡೆಯುತ್ತಿಲ್ಲ ಎಂದು ಮುಸ್ಲಿಂ ವ್ಯಕ್ತಿ ಹೇಳಿದ್ದಾರೆ. ಆದಾಗ್ಯೂ, ದ್ವೇಷದ ಮಾತುಗಳನ್ನು ಮುಂದುವರೆಸಿರುವ ನೇಗಿ, “ಈ ಭೂಮಿ ಸರ್ಕಾರಕ್ಕೆ ಸೇರಿದೆ. ಅಬ್ದುಲ್ ಭಾಯ್, ನಾನು ಇಲ್ಲಿ ಜೆಸಿಬಿ ಓಡಿಸುತ್ತೇನೆ. ಇಲ್ಲಿರುವ ಎಲ್ಲವೂ ಒಂದು ನಿಮಿಷದಲ್ಲಿ ನಾಶವಾಗುತ್ತದೆ” ಎಂದು ಬೆದರಿಕೆ ಹಾಕಿದ್ದಾರೆ.

“ಬಿಜೆಪಿ ಶಾಸಕರು ತಮ್ಮನ್ನು ಕಾನೂನಿಗಿಂತ ಶ್ರೇಷ್ಠರೆಂದು ಪರಿಗಣಿಸುತ್ತಾರೆ. ಅವರು ಶಾಸಕರಾಗಿ ಒಂದು ವಾರವೂ ಆಗಿಲ್ಲ, ಇನ್ನೂ ದೆಹಲಿಯ ಮುಖ್ಯಮಂತ್ರಿಯ ಆಯ್ಕೆಯೂ ಆಗಿಲ್ಲ. ಆದರೆ ಬಿಜೆಪಿಯ ಗೂಂಡಾಗಿರಿ ಆರಂಭವಾಗಿದೆ. ಶಾಸಕರೇ ಈ ಕಾರ್ಮಿಕನ ಹೆಸರು ಅಬ್ದುಲ್ ಆಗಿದ್ದಕ್ಕಾಗಿ ಸಂತೋಷಪಡಬೇಡಿ. ಬಿಜೆಪಿ ಸರ್ಕಾರ ರಚನೆಯಾದರೆ, ಅವರು ಪ್ರತಿಯೊಬ್ಬ ಬಡ ಕಾರ್ಮಿಕರ ಗುಡಿಸಲಿನ ಮೇಲೆ ಬುಲ್ಡೋಜರ್ ಓಡಿಸುತ್ತಾರೆ” ಎಂದು ಎಎಪಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: 2024ರಲ್ಲಿ ದ್ವೇಷ ಭಾಷಣಗಳ ಸಂಖ್ಯೆ 74.4% ಹೆಚ್ಚಳ; ಬಿಜೆಪಿಗರೇ ಪ್ರಮುಖ ಆರೋಪಿಗಳು!

“ಅದು ಹಾಗೆಯೇ ಆಗುತ್ತದೆ, ಅವರು ಅಮಿತ್, ಸುಮಿತ್, ಗುರುದೀಪ್ ಮತ್ತು ಅಬ್ದುಲ್ ಇನ್ನೂ ಯಾರೇ ಆಗಲಿ ಅವರನ್ನು ಬಿಡುವುದಿಲ್ಲ. ಅವರು ಬಡವರ ಮೇಲೆ ತಮ್ಮ ಗೂಂಡಾಗಿರಿಯನ್ನು ತೋರಿಸುತ್ತಾರೆ ಮತ್ತು ಪ್ರತಿಯೊಬ್ಬ ಬಡವರನ್ನು ಬುಲ್ಡೋಜರ್ ನಿಂದ ನಾಶಮಾಡುತ್ತಾರೆ!” ಎಂದು ಪತ್ರಕರ್ತ ಜಾಕಿರ್ ತಿಯಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹೊಸದಾಗಿ ಆಯ್ಕೆಯಾದ ಶಾಸಕರೇ, ಭೂಮಿ ಸರ್ಕಾರಿ ಆಗಿದ್ದರೆ ಮೂಲಭೂತ ಅಂಶಗಳನ್ನು ಗ್ರಹಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಿ – ಮಿಸ್ಟರ್. ಸರ್ಕಾರ ನಿಮ್ಮ ವೈಯಕ್ತಿಕ ಆಸ್ತಿಯಲ್ಲ; ಅದು ಜನರಿಂದ, ಜನರಿಗಾಗಿ, ಜನರಿಗೇ ಇರುವಂತಹದ್ದು. ಆದರೆ ಖಂಡಿತವಾಗಿಯೂ ನಿಮ್ಮಂತಹ ರಾಜಕಾರಣಿಗಳು ದುರ್ಬಲರ ಮುಂದೆ ತಮ್ಮ ಅಧಿಕಾರದ ದರ್ಪ ತೋರಿಸಬಾರದು. ನಿಮಗೆ ನಿಜವಾಗಿಯೂ ಧೈರ್ಯವಿದ್ದರೆ, ನಿಜವಾದ ಶಕ್ತಿ ಹೇಗಿರುತ್ತದೆ ಎಂಬುದನ್ನು ಜನರು ನಿಮಗೆ ತೋರಿಸಲು ನಿರ್ಧರಿಸಿದಾಗ ಅವರನ್ನು ಎದುರಿಸಲು ಪ್ರಯತ್ನಿಸಬೇಕು” ಎಂದು NSUI ನಾಯಕ ಅನೀಶ್ ಕನ್ಸಾಲ್ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X