ಬೀದರ್‌ | ಫೆ.24ಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಕಚೇರಿ ಎದುರು ಧರಣಿ : ಶರಣಬಸಪ್ಪ ಮಮಶೆಟ್ಟಿ

Date:

Advertisements

ಬಗರ್ ಹುಕುಂ ಸಾಗುವಳಿದಾರರರಿಗೆ ಹಕ್ಕು ಪತ್ರ ಕೊಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಫೆ.24ರಂದು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಕಚೇರಿ ಎದುರು ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಕೃಷಿ ಕೂಲಿಕಾರರ ಸಂಘದ ರಾಜ್ಯ ಉಪಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ತಿಳಿಸಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ʼಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುತ್ತಿರುವುದನ್ನು ಖಂಡಿಸಿ ಅರಣ್ಯ ಸಚಿವರ ಹಾಗೂ ಸಂಸದ ಸಾಗರ್‌ ಖಂಡ್ರೆ ಹಾಗೂ ಎಲ್ಲ ಶಾಸಕರ ಮನೆ ಮುಂದೆ ಧರಣಿ ನಡೆಸಲಾಗುವುದುʼ ಎಂದು ಹೇಳಿದರು.

ಪ್ರತಿ ಕ್ವಿಂಟಲ್ ತೊಗರಿಗೆ ₹12,500 ಬೆಂಬಲ ಬೆಲೆಯನ್ನು ಕೊಡುವಂತೆ, ಅರಣ್ಯ ಭೂಮಿ ಸಾಗುವಳಿದಾರರಿಗೆ ಒಕ್ಕಲೆಬ್ಬಿಸುತ್ತಿರುವುದನ್ನು ತಡೆಗಟ್ಟುವಂತೆ ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ಕೊಡಬೇಕು. ನೆಟೆ ರೋಗದಿಂದ ಒಣಗುತ್ತಿರುವ ತೊಗರಿ ಬೆಳೆ ಸಮೀಕ್ಷೆ ಮಾಡಬೇಕು. ನೆಟೆ ರೋಗದಿಂದ ಒಣಗಿದ ತೊಗರಿಗೆ ಎಕರೆಗೆ ₹25 ಸಾವಿರ ಪರಿಹಾರ ಕೊಡಬೇಕು. ರಾಜ್ಯ ಸರ್ಕಾರ ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡಿಸುತ್ತಿರುವ ಅಧಿವೇಶನದಲ್ಲಿ ₹30 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ತೊಗರಿ ಬೆಳಗಾರರ ನೆರವಿಗೆ ರಾಜ್ಯ ಸರ್ಕಾರ ಬರಬೇಕು ಎಂದು ಆಗ್ರಹಿಸಿದರು.

Advertisements

ʼಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಗಳಿಂದ ಜಂಟಿಯಾಗಿ ಧರಣಿ ಹಮ್ಮಿಕೊಳ್ಳಲಾಗಿದೆ. ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು. ಕಲಬುರಗಿ ಜಿಲ್ಲೆಯ ಚಿಂಚೋಳಿ, ಕಾಳಗಿ, ಬೀದರ್‌ ಜಿಲ್ಲೆಯಲ್ಲಿ ಬಡ ರೈತರಿಗೆ ಕೊಡುತ್ತಿರುವ ಕಿರುಕುಳ ತಡೆಯಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ ಎಟಿಎಂ ದರೋಡೆ ಪ್ರಕರಣ: ಆರೋಪಿಗಳ ಫೋಟೊ ಬಿಡುಗಡೆ; ಮಾಹಿತಿ ಕೊಟ್ಟವರಿಗೆ ₹5 ಲಕ್ಷ ಬಹುಮಾನ!

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಅಧ್ಯಕ್ಷ ಸೈಯದ್ ಇಸಾಮೊದ್ದಿನ್, ಜಿಲ್ಲಾ ಕಾರ್ಯದರ್ಶಿ ದೇವಾನಂದ್ ಗಾಯಕವಾಡ, ಸಂಘದ ಪ್ರಮುಖರಾದ ದಿಲೀಪ್ ನಾಗೂರೆ, ಸಂಗ್ರಾಮ ಖಾಜಾಮಿಯ್ಯಾ ಸೇರಿಕಾರ್, ಭುಜಂಗ್ ಔರಾದ್‌, ಆರ್.ಪಿ ರಾಜಾ, ಸಂತೋಷ ಬಿ. ಕೊರವಾ ಹಾಜರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X