ಹೆಚ್ಚು ವರದಕ್ಷಿಣೆ ನೀಡಿಲ್ಲವೆಂದು ಸೊಸೆಗೆ ಎಚ್​ಐವಿ ಸೋಂಕಿತ ಸೂಜಿ ಚುಚ್ಚಿದ ಅತ್ತೆ-ಮಾವ

Date:

Advertisements

ವರದಕ್ಷಿಣೆಯಾಗಿ 10 ಲಕ್ಷ ರೂ. ಹಾಗೂ ಎಸ್​ಯುವಿ ಕಾರು ಕೊಟ್ಟಿಲ್ಲವೆಂದು ಅತ್ತೆ-ಮಾವ ಸೊಸೆಗೆ ಎಚ್​ಐವಿ ಸೋಂಕಿತ ಸೂಜಿ ಚುಚ್ಚಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಸಹರಾನ್​ಪುರದಲ್ಲಿ ನಡೆದಿದೆ.

30 ವರ್ಷದ ಮಹಿಳೆಗೆ ಸಂಬಂಧಿಸಿದ ಈ ಘಟನೆಯ ಬಗ್ಗೆ ದೂರು ದಾಖಲಿಸುವಂತೆ ಸಹರಾನ್​ಪುರ ನ್ಯಾಯಾಲಯವು ಉತ್ತರ ಪ್ರದೇಶದ ಪೊಲೀಸರಿಗೆ ಆದೇಶಿಸಿದೆ. ಮಹಿಳೆ ಸಹರಾನ್​ಪುರ ನಿವಾಸಿ, ಆಕೆಯ ಪತಿ, ಅತ್ತೆ ಸೇರಿ ಒಟ್ಟು ನಾಲ್ಕು ಜನರ ವಿರುದ್ಧ ಐಪಿಸಿ 307, 498ಎ, 323, 328, 406 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಗಳ ಪ್ರಕಾರ, ಈ ಘಟನೆ ಮೇ 2024 ರಲ್ಲಿ ಹರಿದ್ವಾರದಲ್ಲಿರುವ ಮಹಿಳೆಯ ಅತ್ತೆಯ ಮನೆಯಲ್ಲಿ ನಡೆದಿತ್ತು.

ಸಂತ್ರಸ್ತೆಯ ತಂದೆ ಮಾತನಾಡಿ, 2023ರಲ್ಲಿ ತಮ್ಮ ಮಗಳ ಮದುವೆ ಮಾಡಿಕೊಟ್ಟಿದ್ದೆವು. ಮದುವೆಗೆ 45 ಲಕ್ಷ ರೂ. ಖರ್ಚು ಮಾಡಿದ್ದೆವು. ವರನ ಕುಟುಂಬಕ್ಕೆ 15 ಲಕ್ಷ ರೂ. ನಗದು ಹಾಗೂ ಸಬ್​-ಕಾಂಪ್ಯಾಕ್ಟ್​ ಎಸ್​ಯುವಿ ನೀಡಿದ್ದೇವೆ. ಆದರೆ ಅವರು ಹೆಚ್ಚುವರಿಯಾಗಿ 10 ಲಕ್ಷ ರೂಪಾಯಿ ನಗದು ಮತ್ತು ದೊಡ್ಡ ಎಸ್​ಯುವಿ ಕೇಳಿದ್ದಾರೆ ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

ಮದುವೆಯಾದ ತಕ್ಷಣ ಆಕೆಗೆ ಅತ್ತೆ-ಮಾವ ಕಿರುಕುಳ ನೀಡಲು ಆರಂಭಿಸಿ ಮಗಳನ್ನು ಅವಮಾನಿಸಿದರು. ಮಗನಿಗೆ ಬೇರೆ ಮದುವೆ ಮಾಡುವುದಾಗಿ ಬದರಿಕೆ ಹಾಕಿದರು. ದಿನದಿಂದ ದಿನಕ್ಕೆ ಆಕೆಗೆ ದೈಹಿಕ ಹಾಗೂ ಮಾನಸಿಕ ಚಿತ್ರಹಿಂಸೆ ನೀಡುವುದು ಹೆಚ್ಚಾಯಿತು.

2024ರ ಮೇನಲ್ಲಿ ಆಕೆಯ ಅತ್ತೆ ಮಾವ ಬಲವಂತವಾಗಿ ಆಕೆಗೆ ಎಚ್​ಐವಿ ಸೋಂಕಿತ ಸೂಚಿಯನ್ನು ಚುಚ್ಚಿದ್ದರು. ಇದರಿಂದಾಗಿ ಆಕೆಯ ಆರೋಗ್ಯ ಶೀಘ್ರವಾಗಿ ಹದಗೆಟ್ಟಿತ್ತು. ವೈದ್ಯಕೀಯ ಪರೀಕ್ಷೆ ಬಳಿಕ ಆಕೆ ಎಚ್​ಐವಿ ಪಾಸಿಟಿವ್ ಆಗಿರುವುದು ತಿಳಿದುಬಂದಿದೆ ಎಂದು ಕುಟುಂಬದವರು ದೂರಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X