ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ತಮಿಳಿನ ‘ವಿಕಟನ್’ ವೆಬ್‌ಸೈಟ್‌ ನಿರ್ಬಂಧಿಸಿದ ಕೇಂದ್ರ ಸರ್ಕಾರ

Date:

Advertisements

ಭಾರತೀಯರಿಗೆ ಕೈಕೋಳ ತೊಡಿಸಿ ಅಮೆರಿಕ ಗಡಿಪಾರು ಮಾಡಿದ ವಿಚಾರದಲ್ಲಿ ಮೌನವಾಗಿರುವ ಪ್ರಧಾನಿ ಮೋದಿ ಅವರನ್ನು ವ್ಯಂಗ್ಯಾತ್ಮಕವಾಗಿ ಚಿತ್ರಿಸಿ, ವ್ಯಂಗ್ಯಚಿತ್ರವನ್ನು ಪ್ರಕಟಿಸಿದ್ದ ತಮಿಳುನಾಡಿನ ಡಿಜಿಟಲ್ ಸುದ್ದಿ ಮಾಧ್ಯಮ ‘ವಿಕಟನ್’ ವೆಬ್‌ಸೈಟ್‌ಅನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಸ್ವತಃ ‘ವಿಕಟನ್’ ತಂಡ ಮಾಹಿತಿ ಹಂಚಿಕೊಂಡಿದ್ದು, “ನಮ್ಮ ವೆಬ್‌ಸೈಟ್‌ಅನ್ನು ಹಲವೆಡೆ ಹಲವರು ತೆರೆಯಲಾಗುತ್ತಿಲ್ಲ ಎಂಬ ದೂರುಗಳು ಬಂದಿವೆ. ಬಳಿಕ, ಪರಿಶೀಲಿಸಿದಾಗ, ನಮ್ಮ ವೆಬ್‌ಸೈಟ್‌ಅನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ ಎಂಬುದು ಗೊತ್ತಾಯಿತು. ಆದರೆ, ಸರ್ಕಾರವು ನಮಗೆ ಯಾವುದೇ ಮಾಹಿತಿ ನೀಡಿಲ್ಲ” ಎಂದು ಹೇಳಿದೆ.

“ನಮ್ಮ ವೆಬ್‌ಸೈಟ್‌ಅನ್ನು ನಿರ್ಬಂಧಿಸುವುದಕ್ಕೂ ಮೊದಲು, ವಿಕಟನ್ ಆನ್‌ಲೈನ್ ನಿಯತಕಾಲಿಕೆ ‘ವಿಕಟನ್ ಪ್ಲಸ್’ನಲ್ಲಿ (ಫೆಬ್ರವರಿ 10) ‘ಭಾರತೀಯರನ್ನು ಅಮೆರಿಕದಿಂದ ಕೈಕೋಳ ಹಾಕಿ ವಾಪಸ್ ಕರೆತರಲಾಗುತ್ತಿದೆ ಮತ್ತು ಪ್ರಧಾನಿ ಮೋದಿ ಅದರ ಬಗ್ಗೆ ಮಾತನಾಡಿಲ್ಲ’ ಎಂಬ ಒಂದು ಕಾರ್ಟೂನ್ ಪ್ರಕಟಿಸಲಾಗಿತ್ತು. ಆ ಕಾರ್ಟೂನ್ ವಿರುದ್ಧ ಬಿಜೆಪಿಗರು ಸಿಟ್ಟಾಗಿದ್ದರು. ಬಿಜೆಪಿ ರಾಜ್ಯ ಅಧ್ಯಕ್ಷ ಅಣ್ಣಾಮಲೈ ಅವರು ವಿಕಟನ್ ಕಂಪನಿಯ ವಿರುದ್ಧ ಕೇಂದ್ರ ಸರ್ಕಾರಕ್ಕೆ ದೂರು ನೀಡಿದ್ದರು. ಇದೀಗ, ಯಾವುದೇ ಮಾಹಿತಿಯನ್ನು ನೀಡದೆ, ವಿಕಟನ್ ವೆಬ್‌ಸೈಟ್ಅನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ” ಎಂದು ಆರೋಪಿಸಿದೆ.

Advertisements
ಮೋದಿ ವ್ಯಂಗ್ಯಚಿತ್ರ, ತಮಿಳುನಾಡು, ವಿಕಟನ್, ಕೇಂದ್ರ ಸರ್ಕಾರ, Modi cartoon, Tamil Nadu, Vikatan, Union Government,

“ವಿಕಟನ್ – ಒಂದು ಶತಮಾನದಿಂದ, ನಿರಂತರವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬೆಂಬಲಿಸುವ ಮೂಲಕ ಕೆಲಸ ಮಾಡುತ್ತಿದೆ. ನಾವು ಯಾವಾಗಲೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯುವುದಕ್ಕಾಗಿ ಕೆಲಸ ಮಾಡಿದ್ದೇವೆ. ಮುಂದೆಯೂ ಮಾಡುತ್ತೇವೆ. ಆ ಕಾರ್ಟೂನ್‌ ಕಾರಣಕ್ಕಾಗಿ ಕೇಂದ್ರ ಸರ್ಕಾರವು ವೆಬ್‌ಸೈಟ್ ಅನ್ನು ನಿರ್ಬಂಧಿಸಿದ್ದರೆ, ನಾವು ಕಾನೂನು ಹೋರಾಟ ನಡೆಸುತ್ತೇವೆ” ಎಂದು ವಿಕಟನ್ ಸಂಸ್ಥೆ ಹೇಳಿದೆ.

ವಿಕಟನ್ ವೆಬ್‌ಸೈಟ್‌ಅನ್ನು ನಿರ್ಬಂಧಿಸಿರುವ ಕೇಂದ್ರದ ನಡೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಖಂಡಿಸಿದ್ದಾರೆ. “ವಿಕಟನ್ ಸುಮಾರು ಒಂದು ಶನಮಾನದಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಕಾರಣಕ್ಕಾಗಿ ಮಾಧ್ಯಮಗಳನ್ನು ನಿರ್ಬಂಧಿಸುವುದು ಸೂಕ್ತವಲ್ಲ. ಇದು ಬಿಜೆಪಿ ಸರ್ಕಾರದ ಫ್ಯಾಸಿಸ್ಟ್ ಸ್ವಭಾವಕ್ಕೆ ಮತ್ತೊಂದು ಉದಾಹರಣೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X