ಶಿವಮೊಗ್ಗ | ಸಮಾಜದ ಅಭಿವೃದ್ಧಿಯಲ್ಲಿ ವಿಜ್ಞಾನದ ಸಂಶೋಧನೆಗಳು ಅಗತ್ಯ; ಪ್ರೊ.ಶರತ್ ಅನಂತಮೂರ್ತಿ

Date:

Advertisements

ಪ್ರತಿಯೊಂದು ಕ್ಷೇತ್ರದಲ್ಲಿಯೂ ವಿಜ್ಞಾನದ ಕೊಡುಗೆ ಬಹು ಮುಖ್ಯವಾದುದ್ದು. ವಿಜ್ಞಾನದ ಬೆಳವಣಿಗೆ ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ಸಂಶೋಧನಾ ಕ್ಷೇತ್ರಗಳ ಕೊಡುಗೆ ಅಗತ್ಯ ಎಂದು ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ತಿಳಿಸಿದರು.

ಶಿವಮೊಗ್ಗ ನಗರದ ಕುವೆಂಪು ವಿವಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ 15 ಲಕ್ಷ ವೆಚ್ಚದ ನವೀಕೃತ ಸೂಕ್ಷ್ಮ ಜೀವಶಾಸ್ತ್ರ ಪ್ರಯೋಗಾಲಯದ ಉದ್ಘಾಟನಾ ಸಮಾರಂಭಡಲ್ಲಿ ಭಾಗವಹಿಸಿ ಅವರು ಮಾತನಾಡಿದರು.

IMG 20250213 WA0024

ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರಗಳ ಸಂಶೋಧನೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು. ಸಂಶೋಧನೆಗಳು ವೈಜ್ಞಾನಿಕ ಕ್ಷೇತ್ರಕ್ಕೆ ಯಥೇಚ್ಛ ಪ್ರಮಾಣದಲ್ಲಿ ಕೊಡುಗೆ ನೀಡುವಂತಾಗಬೇಕು. ಉತ್ತಮ ಸಂಶೋಧನೆಗಳ ಮೂಲಕ ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಪ್ರಯೋಗಳಗಳ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ನೀಡುವ ಸೌಲಭ್ಯಗಳ ಸದುಪಯೋಗಪಡೆದುಕೊಳ್ಳಬೇಕು ಎಂದು ಹೇಳಿದರು.

Advertisements
IMG 20250213 WA0022

ವಿಭಾಗದ ಯೋಜನಾ ತನಿಖಾಧಿಕಾರಿ ಎನ್.ಬಿ.ತಿಪ್ಪೇಸ್ವಾಮಿ ಮಾತನಾಡಿ, ಒಂದೊಳ್ಳೆ ಸೂಕ್ಷ್ಮ ಜೀವಶಾಸ್ತ್ರ ಪ್ರಯೋಗಾಲಯ ನಿರ್ಮಿಸುವುದು ಹಾಗೂ ವಿಜ್ಞಾನ ಕ್ಷೇತ್ರಕ್ಕೆ ಕೊಡುಗೆ ನೀಡುವುದು ನಮ್ಮೆಲ್ಲರ ಕನಸು ಹಾಗೂ ಗುರಿಯಾಗಿತ್ತು. ಈ ಕುರಿತು ನಮ್ಮ ಮನವಿಗೆ ಸ್ಪಂದಿಸಿ ಪ್ರಯೋಗಾಲಯದ ನವೀಕರಣಕ್ಕೆ ಕುಲಪತಿಗಳು ಸಹಕರಿಸಿದ್ದು ನಮಗೆ ಸಂತಸ ತಂದಿದೆ ಎಂದು ಹೇಳಿದರು.

IMG 20250213 WA0021

ಸಂಶೋಧನಾ ವಿದ್ಯಾರ್ಥಿನಿ ಊರ್ಮಿಳಾ ನಾಗರಾಜ್ ಕಾರ್ಯಕ್ರಮ ನಿರೂಪಣೆ ಮಾಡಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥರಾದ ಪ್ರೊ.ಬಿ.ತಿಪ್ಪೇಸ್ವಾಮಿ, ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X