ಶಿವಮೊಗ್ಗ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಪೊಲೀಸ್ ವಿಶೇಷ ಗಸ್ತು; 197 ಪ್ರಕರಣ ದಾಖಲು

Date:

Advertisements

ಶಿವಮೊಗ್ಗ, ಭದ್ರಾವತಿ, ಸಾಗರ ಹಾಗೂ ಆನವಟ್ಟಿಯಲ್ಲಿ ಆಯಾ ಠಾಣೆಗಳ ಪೊಲೀಸರು ಫೆಬ್ರವರಿ 15ರ ಸಂಜೆ ವಿಶೇಷ ಕಾಲ್ನಡಿಗೆ ಗಸ್ತು ನಡೆಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

1001248327

ಈ ಕುರಿತು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದ್ದು, “ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್‌ ಸಿಬ್ಬಂದಿ ವಿಶೇಷ ಕಾಲ್ನಡಿಗೆ ಗಸ್ತು ನಡೆಸಿದ್ದಾರೆ. ಈ ವೇಳೆ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದವರು ಹಾಗೂ ಅಸಭ್ಯವಾಗಿ ವರ್ತಿಸುತ್ತಿದ್ದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, 123 ಲಘು ಪ್ರಕರಣ, ಕೋಟ್ಪಾ ಕಾಯ್ದೆ(ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ)ಯಡಿ 18 ಪ್ರಕರಣ ಹಾಗೂ ಮೋಟಾರು ಕಾಯ್ದೆಯಡಿ 56 ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ತಿಳಿಸಿದೆ.

1001248309

ಎಲ್ಲೆಲ್ಲಿ ಗಸ್ತು?

Advertisements

ಶಿವಮೊಗ್ಗ ನಗರದ ಕಸ್ತೂರ ಬಾ ರಸ್ತೆ, ಎಂಕೆಕೆ ರಸ್ತೆ, ಭರ್ಮಪ್ಪ ನಗರ, ಒಟಿ ರಸ್ತೆ, ಅಣ್ಣಾನಗರ, ಮಂಜುನಾಥ ಬಡಾವಣೆ, ಅಶೋಕ ರಸ್ತೆ, ಕೋಟೆ ರಸ್ತೆ, ಓಲ್ಡ್ ಬಾರ್ ಲೈನ್ ರಸ್ತೆ, ಪೆನ್ಷನ್ ಮೊಹಲ್ಲಾ, ಕಾಮತ್ ಪೆಟ್ರೋಲ್ ಬಂಕ್ ಸಮೀಪ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ರಾಜೇಂದ್ರ ನಗರ, ರವೀಂದ್ರ ನಗರ, ಬಸವನಗುಡಿ, ಜೈಲ್ ರಸ್ತೆ, ಸೋಮಿನಕೊಪ್ಪ, ಬೊಮ್ಮನಕಟ್ಟೆ, ಪುರಲೆ ಹಾಗೂ ತಾಲೂಕಿನ ಆಯನೂರು ಗ್ರಾಮದಲ್ಲಿ ಕಾಲ್ನಡಿಗೆ ಗಸ್ತು ನಡೆಸಲಾಗಿದೆ.

ಭದ್ರಾವತಿ ನಗರದ ನ್ಯೂಟೌನ್, ಖಾಜಿ ಮೊಹಲ್ಲಾ, ಹನುಮಂತನಗರ, ಸತ್ಯಸಾಯಿನಗರ ಹಾಗೂ ಬಾರಂದೂರು, ಶಂಕರಘಟ್ಟ ಗ್ರಾಮದಲ್ಲಿ ಗಸ್ತು ನಡೆಸಲಾಗಿದೆ.

1001248336

ಸಾಗರ ಪಟ್ಟಣದ ಹೊಸನಗರ ರಸ್ತೆ, ಜನ್ನೇಹಕ್ಲು ಹಾಗೂ ಸೊರಬ ತಾಲೂಕಿನ ಆನವಟ್ಟಿ ಪಟ್ಟಣದ ನೆಹರೂ ನಗರ ವೃತ್ತದಲ್ಲಿ ಕಾಲ್ನಡಿಗೆ ಗಸ್ತು ನಡೆಸಲಾಗಿದೆ” ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X