ಉದ್ದೀಪನ ಮದ್ದು ಸೇವನೆ: ವಿಶ್ವದ ನಂಬರ್‌ ಒನ್‌ ಟೆನಿಸ್ ಆಟಗಾರನಿಗೆ 3 ತಿಂಗಳು ನಿಷೇಧ

Date:

Advertisements

ಉದ್ದೀಪನ ಮದ್ದು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವದ ನಂಬರ್‌ ಒನ್‌ ಟೆನಿಸ್ ಆಟಗಾರ ಇಟಲಿಯ ಯಾನಿಕ್ ಸಿನ್ನರ್ ಅವರು 3 ತಿಂಗಳು ನಿಷೇಧಕ್ಕೆ ಒಳಗಾಗಿದ್ದಾರೆ.

2024ರ ಮಾರ್ಚ್​ನಲ್ಲಿ ನಡೆಸಲಾದ ಡೋಪಿಂಗ್ ಟೆಸ್ಟ್​ ವೇಳೆ ಸಿನ್ನರ್ ಉದ್ದೀಪನ ಮದ್ದು ಸೇವಿಸಿರುವುದು ದೃಢಪಟ್ಟಿತ್ತು. ಈ ಪರೀಕ್ಷೆ ವೇಳೆ ಯಾನಿಕ್ ಸಿನ್ನರ್ ಅವರ ದೇಹದಲ್ಲಿ ‘ವಾಡಾ’ (ಉದ್ದೀಪನ ಮದ್ದು ಸೇವನೆ ತಡೆ ಏಜೆನ್ಸಿ) ನಿಷೇಧಿತ ವಸ್ತು ‘ಕ್ಲೋಸ್ಟೆಬೋಲ್’ ಕಂಡುಬಂದಿದೆ.

ಅನಾಬಾಲಿಕ್ ಸ್ಟಿರಾಯ್ಡ್ ತೆಗೆದುಕೊಂಡಾಗ ಕ್ಲೋಸ್ಟೆಬೋಲ್ ದೇಹದೊಳಗೆ ಸೇರಿಕೊಂಡಿರುವುದಾಗಿ ಅವರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಇದಾಗ್ಯೂ ಯಾನಿಕ್ ಸಿನ್ನರ್ ಅವರಿಗೆ 3.2 ಲಕ್ಷ ಡಾಲರ್ ಅಂದರೆ ಸುಮಾರು 2.8 ಕೋಟಿ ರೂ. ದಂಡ ವಿಧಿಸಲಾಗಿತ್ತು. ಅಲ್ಲದೆ, ಸ್ವಲ್ಪ ಸಮಯದವರೆಗೆ ಅಮಾನತುಗೊಳಿಸಲಾಗಿತ್ತು.

Advertisements

ಈ ಬಗ್ಗೆ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವನ್ನು (ಸಿಎಎಸ್) ಸಂಪರ್ಕಿಸಿದ ಸಿನ್ನರ್ ಪ್ರಕರಣವನ್ನು ಇತ್ಯರ್ಥಗೊಳಿಸಿಕೊಡಬೇಕೆಂದು ಮನವಿ ಮಾಡಿದ್ದರು. ಅದರಂತೆ ಇದೀಗ ಪ್ರಕರಣದಿಂದ ಖುಲಾಸೆಗೊಂಡಿರುವ ಯಾನಿಕ್ ಸಿನ್ನರ್ ‘ವಾಡಾ’ ಮುಂದೆ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಅವರನ್ನು ಕೇವಲ 3 ತಿಂಗಳುಗಳ ಕಾಲ ಮಾತ್ರ ಟೆನಿಸ್ ಅಂಗಳದಿಂದ ನಿಷೇಧಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಅಗರ್ಕರ್‌ – ಗಂಭೀರ್‌ ನಡುವೆ ಭಿನ್ನಾಭಿಪ್ರಾಯ; ರಾಹುಲ್‌ ಪರ ನಿಂತ ಟೀಂ ಇಂಡಿಯಾ ಕೋಚ್‌

ಉದ್ದೀಪನ ಮದ್ದು ಸೇವನೆ ಪ್ರಕರಣದ ಬಗ್ಗೆ ಮಾತನಾಡಿದ ಯಾನಿಕ್ ಸಿನ್ನರ್, ಈ ಪ್ರಕರಣವು ಸುಮಾರು ಒಂದು ವರ್ಷದಿಂದ ಬಾಕಿ ಇತ್ತು. ಅಲ್ಲದೆ ಇದರ ಪ್ರಕ್ರಿಯೆ ಕೂಡ ವಿಳಂಬವಾಗಿತ್ತು. ಆದರೆ ನಾನು ಡೋಪಿಂಗ್ ನಿಯಮಗಳನ್ನು ಗೌರವಿಸುತ್ತೇನೆ. ಇದು ಬೇಕೆಂತಲೇ ಮಾಡಿದ ತಪ್ಪಲ್ಲ. ಅಜಾಗರೂಕತೆಯಿಂದ ನಡೆದು ಹೋಗಿದೆ. ಹೀಗಾಗಿ ಈ ವಿಷಯವನ್ನು ತ್ವರಿತವಾಗಿ ಪರಿಹರಿಸಲು 3 ತಿಂಗಳ ನಿಷೇಧದ ವಾಡಾ ಪ್ರಸ್ತಾವನೆಯನ್ನು ನಾನು ಒಪ್ಪಿಕೊಂಡೆ ಎಂದು ಅವರು ಹೇಳಿದ್ದಾರೆ.

ಯಾನಿಕ್ ಸಿನ್ನರ್ ಅವರ ದೇಹದಲ್ಲಿ ನಿಷೇಧಿತ ಕ್ಲೋಸ್ಟೆಬೋಲ್ ಅಂಶಗಳು ಕಾಣಿಸಿಕೊಳ್ಳಲು ಮುಖ್ಯ ಕಾರಣ, ವೈದ್ಯರು ಬಳಸಿದ ಸ್ಪ್ರೇ ಎಂದು ತಿಳಿದು ಬಂದಿದೆ. ಕೈ ಬೆರಳಿಗೆ ಗಾಯವಾಗಿದ್ದಾಗ ವೈದ್ಯರು ನೋವಿನ ಸ್ಪ್ರೇ ಬಳಸಿದ್ದರು. ಈ ಸ್ಪ್ರೇನಲ್ಲಿ ಕ್ಲೋಸ್ಟೆಬೋಲ್ ಅಂಶಗಳಿದ್ದವು. ಈ ಜಾಗರೂಕತೆಯಿಂದಾಗಿ ಇದೀಗ ಯಾನಿಕ್ ಸಿನ್ನರ್ ಮೂರು ತಿಂಗಳುಗಳ ನಿಷೇಧಕ್ಕೆ ಒಳಗಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X