ದೊಡ್ಡಬಳ್ಳಾಪುರ | ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ; ಗಾಯಿತ್ರಿ

Date:

Advertisements

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಕೃಷಿ ವಿಜ್ಞಾನ ಕೇಂದ್ರ. ಹಾಡೋನಹಳ್ಳಿ ಆವರಣದಲ್ಲಿ ರೈತರಿಗಾಗಿ ಅಟಲ್ ಭೂಜಲ್ ಯೋಜನೆಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಬೆಂಗಳೂರು ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಮಾತನಾಡಿ, ಜಿಲ್ಲೆಯಲ್ಲಿ ಈಗ ಅಂತರ್ಜಲ ಕಡಿಮೆಯಾಗಿ 1600 ಅಡಿ ಆಳ ಹೋದರು ಬೋರ್‌ವೆಲ್‌ ನಲ್ಲಿ ನೀರು ಸಿಗುತ್ತಿಲ್ಲ. ಆದ್ದರಿಂದ ಮಳೆ ನೀರನ್ನು ಕೃಷಿ ಹೊಂಡದ ಮೂಲಕ ಹಾಗು ವಿವಿಧ ಕ್ರಮಗಳ ಮೂಲಕ ನೀರನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.

ನೀರಿನ ಮಿತ ಬಳಕೆ, ಸೂಕ್ಷ್ಮ ನೀರಾವರಿ ತಾಂತ್ರಿಕತೆಗಳು ಮತ್ತು ನೀರಿನ ಮರು ಪೂರೈಕೆ ವಿಧಾನಗಳನ್ನು ಕೃಷಿಯಲ್ಲಿ ಅಳವಡಿಸಿಕೊಳ್ಳಿ. ಇದರಿಂದ ನೀರಿನ ಅಭಾವ ಸೃಷ್ಟಿ ಕಡಿಮೆಯಾಗಲಿದೆ ಎಂದು ರೈತರಿಗೆ ಮಾಹಿತಿ ನೀಡಿದರು.

Advertisements

ದೊಡ್ಡಬಳ್ಳಾಪುರದ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಹನುಮಂತರಾಯ ಬಿ.ಜಿ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೀರಿನ ಅಭಾವ ಕಾಡುತ್ತಿದೆ. ಲಭ್ಯವಿರುವ ನೀರಿನಲ್ಲಿ ಶೇ.70 ರಷ್ಟು ಕೃಷಿಗೆ ಬಳಕೆ ಮಾಡಲಾಗುತ್ತಿದೆ. ಹಾಗಾಗಿ ಮಳೆ ನೀರನ್ನು ಚೆನ್ನಾಗಿ ಶೇಖರಣೆ ಮಾಡಿ ಕೃಷಿಗೆ ಪರಿಮಾಮಕಾರಿಯಾಗಿ ನೂತನ ತಂತ್ರಜ್ಞಾನವಾದ sensor ಸ್ವಯಂಚಾಲಿತ ನೀರಾವರಿ ಮೂಲಕ ಭೂಮಿಗೆ ಎಷ್ಟು ನೀರು ಬೇಕೋ ಅಷ್ಟು ನೀರು ಕೊಟ್ಟು ನೀರಿನ ನಿರ್ವಹಣೆ ಮಾಡಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯಕ್ರಮ ನಿರ್ವಹಣಾ ಘಟಕದ ನಿಷಿತ, ಕೃಷಿ ತಜ್ಞೆ ದೀಪ್ತಿ, ಜಿಲ್ಲಾ ಕೃಷಿ ತರಬೇತಿ ಕೇಂದ್ರ ಆರ್.ಕೆ. ಶಾಲಾದ ಸಹಾಯಕ ಕೃಷಿ ನಿರ್ದೇಶಕಿ ಸುಮಂಗಲ, ಕೃಷಿ ಅಧಿಕಾರಿ ನವೀನ್ ಮತ್ತು ಕಸ್ತೂರಯ್ಯ, ಜೈನ್ ನೀರಾವರಿ ಸಂಸ್ಥೆಯ ತೋಷಿತ್ ರೈ, ಫೈಲೋ ಸಂಸ್ಥೆಯ ಅನಿಲ್, ತಾಲ್ಲೂಕಿನ ಸಿಬ್ಬಂಧಿಗಳು ಹಾಗೂ ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X