ಗೃಹಜ್ಯೋತಿ ಯೋಜನೆ | ಹೊಸ ಮನೆಗೆ ಇನ್ನೂರಲ್ಲ 58 ಯೂನಿಟ್ ಫ್ರೀ: ಸಚಿವ ಜಾರ್ಜ್

Date:

Advertisements
  • ಇಂಧನ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವ ಜಾರ್ಜ್
  • ಗೃಹಜ್ಯೋತಿ ಯೋಜನೆಯ ನಿಯಮದಲ್ಲಿ ಹೊಸ ಮಾರ್ಪಾಡು

ಹೊಸ ಮನೆ ಹಾಗೂ ಹೊಸ ಬಾಡಿಗೆದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗೃಹಜ್ಯೋತಿ ಯೋಜನೆ ನಿಯಮಗಳಲ್ಲಿ ಕೊಂಚ ಮಾರ್ಪಾಡು ಮಾಡಲಾಗಿರುವುದಾಗಿ ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಇಂಧನ ಇಲಾಖೆ ಇಲಾಖೆ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೊಸ ಮನೆ ಮತ್ತು ಮನೆ ಬದಲಾವಣೆ ವಿಚಾರ ಸಿಎಂ ಜೊತೆ ಚರ್ಚೆಯಾಗಿದೆ.

ಯಾರು ಹೊಸದಾಗಿ ಬಾಡಿಗೆ ಮನೆಗೆ ಬರ್ತಾರೆ ಅವರಿಗೆ ಅಗತ್ಯ ದಾಖಲೆಗಳಿರುವುದಿಲ್ಲ, ಹಾಗಾಗಿ ಅವರಿಗೆ ಅವರೇಜ್ 53% +10% ಸೇರಿಸಿ 58 ಯೂನಿಟ್ ವರೆಗೂ ವಿದ್ಯುತ್ ಉಚಿತ ನೀಡಲಾಗುತ್ತದೆ ಎಂದರು.

Advertisements

ಇದೇ ನಿಯಮ ಹೊಸದಾಗಿ ಮನೆ ನಿರ್ಮಿಸಿದವರಿಗೂ ಅನ್ವಯವಾಗಲಿದೆ. ಏಕೆಂದರೆ ಹಿಂದಿನ ಒಂದು ವರ್ಷದವರೆಗಿನ ಲೆಕ್ಕ ಇವರಿಗೆ ಸಿಗುವುದಿಲ್ಲ, ಹೀಗಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಜಾರ್ಜ್ ಹೇಳಿದರು.

ಈ ಸುದ್ದಿ ಓದಿದ್ದೀರಾ?:ಹೊರರಾಜ್ಯದ ಮಹಿಳೆಯರಿಗೂ ಸಿಗಲಿ ಶಕ್ತಿ ಯೋಜನೆ: ಶಾಮನೂರು ಶಿವಶಂಕರಪ್ಪ ಆಗ್ರಹ

ಸದ್ಯ 58 ಯೂನಿಟ್ ಪಡೆಯುವ ಹೊಸ ಮನೆ ಮತ್ತು ಹೊಸ ಬಾಡಿಗೆದಾರರು, ವರ್ಷದ ಬಳಿಕ 200 ಯೂನಿಟ್ ಪಡೆದುಕೊಳ್ಳಲಿದ್ದಾರೆ. 2022ರ ಏಪ್ರಿಲ್ ತಿಂಗಳಿಂದ 2023ರ ಮಾರ್ಚ್ ತಿಂಗಳ 12 ತಿಂಗಳ ಅವಧಿ ಬಿಲ್ ಲೆಕ್ಕಾಚಾರ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.

ಇದೇ ವೇಳೆ ಯೋಜನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಜಾರ್ಜ್, ಬಿಜೆಪಿಯವರು ನಮ್ಮ ಉಚಿತ ಕೊಡುಗೆ ವಿರುದ್ಧ ಇದ್ದಾರೆ. ಅವರಿಗೆ ಪ್ರಶ್ನೆ ಮಾಡುವ ಹಕ್ಕಿಲ್ಲ ಎಂದರು.

ದರ ಏರಿಕೆ ಕೆಇಆರ್‌ಸಿ ನಿರ್ಧಾರ

ವಿದ್ಯುತ್ ದರ ಏರಿಕೆಯಾಗಿದ್ದು ಹಿಂದಿನ ಸರ್ಕಾರದ ಅವಧಿಯಲ್ಲಿ. ಅದು ಈಗ ಜಾರಿಯಾಗಿದೆ. ಕೆಇಆರ್‌ಸಿ ಒಮ್ಮೆ ಆದೇಶ ಮಾಡಿದರೆ ಅದನ್ನು ಹಿಂಪಡೆಯಲು ಆಗುವುದಿಲ್ಲ.ಕೆಇಆರ್‌ಸಿ ಕಾಯ್ದೆ ಕೇಂದ್ರ ಸರ್ಕಾರದ ಅಧೀನದಲ್ಲಿದೆ. ವಿದ್ಯುತ್ ಏರಿಕೆ ವಿಚಾರವನ್ನು ಕೇವಲ ಅಧಿಕಾರಿಗಳು ನಿರ್ಧರಿಸುವುದಿಲ್ಲ. ಸಿಎಂ, ಇಂಧನ ಇಲಾಖೆ ಸಚಿವರು ಸಭೆ ನಡೆಸಿ ನಿರ್ಧಾರ ಕೈಗೊಳ್ತಾರೆ. ನಾವು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಕೆಇಆರ್‌ಸಿ ಮೇಲೆ ಹಾಕಲ್ಲ. ಎಂದು ಜಾರ್ಜ್‌ ಹೇಳಿದರು.

ಗೃಹಜ್ಯೋತಿ ಜಾರಿ ಹೊರೆಯನ್ನು ಗ್ರಾಹಕರ ಮೇಲೆ ಹಾಕುವುದಿಲ್ಲ. ಗೃಹಜ್ಯೋತಿ ಯೋಜನೆ ವೆಚ್ಚವನ್ನು ರಾಜ್ಯ ಸರ್ಕಾವೇ ಭರಿಸಲಿದೆ.ಉಚಿತ ಯೋಜನೆ ಪಡೆಯುವ ಮುನ್ನ ಬಾಕಿ ಬಿಲ್‌ ಪಾವತಿ ಮಾಡಬೇಕು.ಈ ಹಿಂದಿನ ಬಿಲ್ ಪಾವತಿಸಲು ಗ್ರಾಹಕರಿಗೆ 3 ತಿಂಗಳ ಕಾಲಾವಕಾಶವಿದೆ ಎಂದು ಇಂಧನ ಸಚಿವರು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X