ಕೊಡಗು | ಬಲೆಗೆ ಬಿದ್ದ ಮೂವರು ಕಳ್ಳರು; ಲಕ್ಷಾಂತರ ಮೌಲ್ಯದ ವಸ್ತು ವಶಕ್ಕೆ

Date:

Advertisements

ಕೊಡಗು ಜಿಲ್ಲೆ ವಿರಾಜಪೇಟೆ ಗ್ರಾಮಾಂತರ ತಾಲೂಕಿನ ಬಿಟ್ಟಂಗಾಲ ಗ್ರಾಮದಲ್ಲಿ ಕಳೆದ ನವೆಂಬರ್ 30ರಂದು ಅಂಚೆ ಕಚೇರಿ ಬಾಗಿಲು ಮುರಿದು ಖಜಾನೆ ಬಾಕ್ಸ್, ಅಂಚೆ ಚೀಟಿಗಳು, ಪಾಸ್ ಪುಸ್ತಕ, ಸಿಸಿ ಕ್ಯಾಮೆರಾ, ಡಿವಿಆರ್ ಕಳುವು ಹಾಗೂ ಸದರಿ ಗ್ರಾಮದ ಮಾಚಯ್ಯ ಅವರ ಮನೆಯ ಶೆಡ್‌ನಲ್ಲಿ ನಿಲ್ಲಿಸಿದ್ದ ಮಾರುತಿ ವ್ಯಾನ್ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ನಾಲಾಡಿ ಕಕ್ಕಬ್ಬೆ ಗ್ರಾಮದ ಕೆ ಸಿ ಅಶೋಕ (35), ಸೋಮವಾರ ಪೇಟೆ ಕಿಬ್ಬೆಟ್ಟ ಅಯ್ಯಪ್ಪ ಕಾಲೋನಿಯ ಕೆ ಪಿ ಕೀರ್ತಿ (25), ಸೋಮವಾರ ಪೇಟೆ ರೇಂಜರ್ ಬ್ಲಾಕ್ ನಿವಾಸಿ ರಿಯಾಜ್ (26) ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳಿಂದ ಸಿಸಿ ಟಿವಿ, ಡಿವಿಆರ್, 930 ರೂಪಾಯಿ ಮೌಲ್ಯದ ಅಂಚೆ ಚೀಟಿ, ಕೆಎ 04ಎನ್ 5010 ಮಾರುತಿ ಓಮ್ನಿ ವ್ಯಾನ್, ಕೆಎ 12ಕೆ 9059 ಹಾಗೂ ಕೆಎ 55ಜೆ 0861 ಎರಡು ದ್ವಿಚಕ್ರ ವಾಹನಗಳು, ಮರ ಕುಯ್ಯುವ ಯಂತ್ರ, ಒಂದು ಏರ್ ಗನ್, 250 ಕೆಜಿ ಕರಿ ಮೆಣಸು, 200 ಕೆಜಿ ಕಾಫಿ, 229 ಗ್ರಾಂ ಬೆಳ್ಳಿ, 30 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ.

Advertisements

ವಿರಾಜಪೇಟೆ ಡಿವೈಎಸ್ಪಿ ಮಹೇಶ್ ಕುಮಾರ್ ನೇತೃತ್ವದಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಸಬ್ ಇನ್ಸ್‌ಪೆಕ್ಟರ್ ವಾಣಿಶ್ರೀ, ಲತಾ ಹಾಗೂ ಅಪರಾಧ ಪತ್ತೆ ಸಿಬ್ಬಂದಿಗಳು ಸೇರಿದ ತಂಡ ಫೆ.10ರಂದು ಕಾರ್ಯಾಚರಣೆ ಆರಂಭಿಸಿತ್ತು.

ಈ ಸುದ್ದಿ ಓದಿದ್ದೀರಾ? ಕೊಡಗು | ಕಾಡು ಹಂದಿ ಬೇಟೆಯಾಡಿದ ಇಬ್ಬರ ಬಂಧನ

ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X