ತೀರ್ಥಹಳ್ಳಿ | ಸ್ವಾತಂತ್ರ್ಯ ಹೋರಾಟಗಾರನ ಪತ್ನಿಗೆ ನಿಂದನೆ; ಕೋಣಂದೂರು ಬ್ಯಾಂಕ್‌ನಿಂದ ಹೊರದಬ್ಬಿದ ಸಿಬ್ಬಂದಿ

Date:

Advertisements

ಸಾಲದ ಕಂತು ಕಟ್ಟಿಲ್ಲವೆಂಬ ಕಾರಣಕ್ಕೆ ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪತ್ನಿಯ ಕಿವಿಯೋಲೆ ಕಿತ್ತುಕೊಂಡು ನಿಂದಿಸಿದ ಕೋಣಂದೂರು ಬ್ಯಾಂಕ್‌ ಸಿಬ್ಬಂದಿ ಅವರನ್ನು ಬ್ಯಾಂಕ್‌ನಿಂದ ಹೊರದಬ್ಬಿದ ಘಟನೆ ನಡೆದಿದೆ.

ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಿಂದ ಕೂಗಳತೆ ದೂರದ ಬಿಲ್ಲೇಶ್ವರ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಎಸ್‌ ಚನ್ನವೀರಪ್ಪ ಅವರ ಪತ್ನಿ ಹಾಲಮ್ಮ(86) ಈ ಹಿಂದೆ ಮನೆ ದುರಸ್ತಿಗೆಂದು ಪಿಂಚಣಿ ಹಣದ ಆಧಾರದ ಮೇಲೆ ಸಾಲ ಪಡೆದಿದ್ದರು. ಅವರಿಗೆ ಕಳೆದ ನಾಲೈದು ತಿಂಗಳಿನಿಂದ ಪಿಂಚಣಿ ಹಣ ಬಂದಿರರಲಿಲ್ಲ. ಹಾಗಾಗಿ ಹಾಲಮ್ಮ ಮಾಡಿದ್ದ ಸಾಲದ ಒಂದು ಕಂತು ಕಟ್ಟಿಲ್ಲವೆನ್ನುವ ಕಾರಣಕ್ಕೆ ಅವರ ಕಿವಿಯಲ್ಲಿದ್ದ ಓಲೆಯನ್ನು ಕಿತ್ತುಕೊಂಡು ನಿಂದಿಸಿ ಹೊರದಬ್ಬಿದ್ದಾರೆ. ಈ ಬಗ್ಗೆ ಕೋಣಂದೂರು ಉಪಠಾಣೆಯಲ್ಲಿ ದೂರು ದಾಖಲಾಗಿದೆ.

ಪಿಂಚಣಿ ಹಣದ ಆಧಾರದ ಮೇಲೆ ಮನೆ ದುರಸ್ತಿಗೆ ಕೋಣಂದೂರಿನ ಬ್ಯಾಂಕ್‌ ಒಂದರಲ್ಲಿ ಸಾಲ ಪಡೆದಿದ್ದ ವೃದ್ದೆಗೆ ಕಳೆದ ನಾಲ್ಕು ತಿಂಗಳಿನಿಂದ ಪಿಂಚಣಿ ಹಣ ಬಂದಿಲ್ಲದ ಕಾರಣಕ್ಕೆ ಸಾಲದ ಕಂತು ಕಟ್ಟಲು ಸಾಧ್ಯವಾಗಿರಲಿಲ್ಲ.

Advertisements

“ಫೆಬ್ರವರಿ 10ರಂದು ಮನೆಯಲ್ಲಿ ದಿನಸಿ ಸಾಮಾನು ಇಲ್ಲದ ಕಾರಣಕ್ಕೆ ತನ್ನ ಕಿವಿಯಲ್ಲಿದ್ದ ಓಲೆ, ಚಿನ್ನದ ಸರವನ್ನು ಅಡವಿಡಲು ಬ್ಯಾಂಕ್‌ಗೆ ಬಂದಾಗ ಬ್ಯಾಂಕ್ ಸಿಬ್ಬಂದಿ ಓಲೆ, ಚಿನ್ನದ ಸರ ಪಡೆದು ಹಣ ನೀಡದೆ ಅವಾಚ್ಯವಾಗಿ ಏಕವಚನದಲ್ಲಿ ನಿಂದಿಸಿ ಹೊರದಬ್ಬಿದ್ದಾರೆ” ಎಂದು ಆರೋಪಿಸಿ ವೃದ್ಧೆಯ ಮಗಳು ಶಕುಂತಳಾ ದೂರು ನೀಡಿದ್ದಾರೆ.

1001254236

“ಬಿಲ್ಲೇಶ್ವರ ಗ್ರಾಮದ ಎಸ್ ಚನವೀರಪ ಸ್ವಾತಂತ್ರ್ಯ ಹೋರಾಟದ ಜೈಲುವಾಸ ಅನುಭವಿಸಿ ದೇಶಸೇವೆ ಮಾಡಿದ್ದಾರೆ. ಅವರ ಬಗ್ಗೆ ನನಗೆ ಅತೀವ ಹೆಮ್ಮೆಯಿದೆ. ಆದರೆ ನಮ್ಮನ್ನು ಸರ್ಕಾರಗಳು ಹಾಗೂ ವ್ಯವಸ್ಥೆ ಇಷ್ಟು ನಿಕೃಷ್ಟವಾಗಿ ಕಾಣುತ್ತಿರುವುದು ಬೇಸರದ ಸಂಗತಿ” ಎಂದು ವೃದ್ಧೆ ಹಾಲಮ್ಮ ತಮ್ಮ ನೋವು ತೋಡಿಕೊಂಡರು.

“ವಯಸ್ಸಾದ ಅ ತಾಯಿಗೆ ನ್ಯಾಯ ದೊರಕಿಸಿಕೊಟ್ಟು, ಕಟುಕತನ ಪ್ರದರ್ಶಿಸಿದ ಬ್ಯಾಂಕ್‌ ಸಿಬ್ಬಂದಿ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕಿದೆ” ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X