ಮೂರು ಸಾವಿರ ಲೈನ್‌ಮನ್‌ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಏಪ್ರಿಲ್‌ನೊಳಗೆ ಪೂರ್ಣ: ಕೆ ಜೆ ಜಾರ್ಜ್‌

Date:

Advertisements

ರಾಜ್ಯದಲ್ಲಿ ಖಾಲಿ ಇರುವ 3,000 ಸಾವಿರ ಲೈನ್‌ಮನ್‌ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಏಪ್ರಿಲ್‌ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದರು.

ಹಾವೇರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಲೈನ್‌ಮನ್‌ಗಳ ನೇಕ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಬಳಿಕ ಸಮಸ್ಯೆ ಬಹುತೇಕ ಬಗೆಹರಿಯಲಿದೆ ಎಂದು ತಿಳಿಸಿದರು.

“ರಾಜ್ಯದಲ್ಲಿ ಕಳೆದ ವರ್ಷತೀವ್ರ ಬರಗಾಲವಿದ್ದುದರಿಂದ ವಿದ್ಯುತ್‌ ಕೊರತೆಯಿದ್ದರೂ ಕೇವಲ ಒಂದು ತಿಂಗಳು ಮಾತ್ರ ಸಮಸ್ಯೆಯಾಗಿತ್ತು. ಉಳಿದ 11 ತಿಂಗಳಿನಲ್ಲಿ ಸಮರ್ಪಕವಾಗಿ ವಿದ್ಯುತ್‌ ಪೂರೈಸಲಾಗಿದೆ. ಪ್ರಸ್ತಕ ವರ್ಷ 19 ಸಾವಿರ ಮೆಗಾ ವ್ಯಾಟ್ ವಿದ್ಯುತ್‌ ಬೇಡಿಕೆ ಇದ್ದ. ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧವಾಗಿದೆ. ರಾಜ್ಯದಲ್ಲಿ ಯಾವುದೇ ವಿದ್ಯುತ್‌ ಕೊರತೆಯಿಲ್ಲ” ಎಂದು ಸ್ಪಷ್ಟಪಡಿಸಿದರು.

Advertisements

“ಜನರು ತಮ್ಮ ತೊಂದರೆಗಳನ್ನು ಜನಪ್ರತಿನಿಧಿಗಳ ಬಳಿ ಹೇಳಿಕೊಳ್ಳುತ್ತಾರೆ. ಜತೆಗೆ ಜನಪ್ರತಿನಿಧಿಗಳಲ್ಲಿಯೂ ಕ್ಷೇತದ ಸಮಸ್ಯೆ ಬಗೆಹರಿಸಲು ಸಾಕಷ್ಟು ಯೋಚನೆಗಳಿರುತ್ತವೆ. ಆದ್ದರಿಂದ ಅವರನ್ನು ಭೇಟಿಯಾಗಿ ಸಲಹೆಗಳನ್ನು ಪಡೆಯಿರಿ. ತೊಂದರೆಗಳಿದ್ದರೆ ನಿಮ್ಮ ವ್ಯಾಪ್ತಿಯಲ್ಲಿ ಸರಿ ಪಡಿಸಿ, ಇಲ್ಲವೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರ ಗಮನಕ್ಕೆ ತನ್ನಿ. ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ” ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಸೋಲಾರ್ ಪಂಪ್ ಸೆಟ್ ಒದಗಿಸುವ ಕುಸುಮ್-ಬಿ ಯೋಜನೆಗೆ ಸರ್ಕಾರ ಆದ್ಯತೆ ನೀಡುತ್ತಿದೆ.ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಸಬ್ಸಿಡಿಯನ್ನು ಶೇ. 50ಕ್ಕೆ ಹೆಚ್ಚಿಸಿದ್ದು, ಕೇಂದ್ರ ಸರ್ಕಾರ ೇ. 30ರಷ್ಟು ಸಬ್ಸಿಡಿ ನೀಡುತ್ತದೆ. ರೈತರು ಕೇವಲ ಶೇ.20 ಮಾತ್ರ ಹಣ ಪಾವತಿಸಿ ಸೋಲಾರ್ ಪಂಪ್ ಸೆಟ್ ಪಡೆಯಬಹುದು. ಈ ಯೋಜನ ರೈತರಿಗೆ ವರದಾನವಾಗಲಿದೆ” ಎಂದು ಹೇಳಿದರು.

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಕೃಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಿ ಮೂಲ ಸೌರ್ಯ ಒದಗಿಸಿದೆ. ಉಳಿದ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ. ಹೊಸದಾಗಿ ಬಂದ ಅಕ್ರಮ-ಸಕ್ರಮ ಅರ್ಜಿಗಳ ಕುರಿತು ನಂತರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X