ಬೆಂಗಳೂರು | ಕಾನೂನು ವಿವಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಮೂವರ ಬಂಧನ

Date:

Advertisements

ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಆಯ್ದ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆ ಮಾಡಿದ್ದ ಆರೋಪದಡಿ ಉಪ ಪ್ರಾಂಶುಪಾಲ ಸೇರಿ ಮೂವರು ಆರೋಪಿಗಳನ್ನು ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೋಲಾರ ಜಿಲ್ಲೆಯ ಬಸವ ಶ್ರೀ ಕಾನೂನು ಕಾಲೇಜಿನ ಉಪ ಪ್ರಾಂಶುಪಾಲ ನಾಗರಾಜ್, ಅವರ ಕಾರು ಚಾಲಕನೂ ಆಗಿದ್ದ ವಿದ್ಯಾರ್ಥಿ ಜಗದೀಶ್ ಹಾಗೂ ಬಂಗಾರಪೇಟೆ ಕಾನೂನು ಕಾಲೇಜ್‌ವೊಂದರ ವಿದ್ಯಾರ್ಥಿ ವರುಣ್ ಕುಮಾರ್ ಬಂಧಿತ ಆರೋಪಿಗಳು.

ರಾಜ್ಯ ಕಾನೂನು ವಿವಿಯಿಂದ ಜನವರಿ 23ರಂದು ನಿಗದಿಯಾಗಿದ್ದ ಕಾಂಟ್ರ್ಯಾಕ್ಟ್ ಲಾ-1 ಪರೀಕ್ಷೆಯ ಪ್ರಶ್ನೆಗಳು ಟೆಲಿಗ್ರಾಂ ಮತ್ತು ವಾಟ್ಸ್ಆ್ಯಪ್ ಗ್ರೂಪ್‌ಗಳಲ್ಲಿ ವೈರಲ್ ಆಗಿದ್ದವು. ಉಪ ಪ್ರಾಂಶುಪಾಲ ನಾಗರಾಜ್ ಅವರಿಗೆ ಕಾರು ಚಾಲಕ ಹಾಗೂ ಅದೇ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಜಗದೀಶ್, ನಾಗರಾಜ್ ಅವರ ಮೊಬೈಲ್ ಫೋನ್‌ನಲ್ಲಿದ್ದ ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳನ್ನು ತನ್ನ ಫೋನ್‌ಗೆ ವರ್ಗಾಯಿಸಿಕೊಂಡಿದ್ದರು. ಬಳಿಕ ಅವುಗಳನ್ನ ಪರೀಕ್ಷಾರ್ಥಿಗಳಿಗೆ ಸೋರಿಕೆ ಮಾಡಿ ಅಕ್ರಮವಾಗಿ ಹಣ ಗಳಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

Advertisements

ಪ್ರಕರಣದ ಮತ್ತೋರ್ವ ಆರೋಪಿ ವರುಣ್ ಕುಮಾರ್, ಪರೀಕ್ಷೆಯ ಹಿಂದಿನ ದಿನ ಕಾಲೇಜ್‌ಗೆ ಬಂದ ಪ್ರಶ್ನೆ ಪತ್ರಿಕೆಗಳನ್ನು ಯಾರಿಗೂ ತಿಳಿಯದಂತೆ ತೆರೆದು, ಅದರಲ್ಲಿನ ಪ್ರಶ್ನೆಗಳನ್ನು ತನ್ನ ಮೊಬೈಲ್ ಫೋನ್‌ನಲ್ಲಿ ಕಾಪಿ ಮಾಡಿಕೊಂಡು ಹಣಕ್ಕಾಗಿ ಅವುಗಳನ್ನು ಆನ್‌ಲೈನ್‌ನಲ್ಲಿ ಸೋರಿಕೆ ಮಾಡಿದ್ದರು ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳಾಗಿ ಪಿಯು ಕಾಲೇಜು ಪ್ರಾಂಶುಪಾಲರ ನೇಮಕ 

ಪ್ರಶ್ನೆ ಪತ್ರಿಕೆ ಸೋರಿಕೆಯ ಹಿಂದಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾನೂನು ವಿಶ್ವವಿದ್ಯಾಲಯಗಳ ಚೇರ್‌ಮನ್ ಹಾಗೂ ಜಾಗೃತ ದಳ-2 ಅಧಿಕಾರಿಯಾಗಿರುವ ವಿಶ್ವನಾಥ್ ಕೆ.ಎನ್ ಅವರು ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸೈಬರ್ ಕ್ರೈಂ ಠಾಣೆ ಪೊಲೀಸರು ತಾಂತ್ರಿಕ ಸಹಾಯದಿಂದ ಮಾಹಿತಿಗಳನ್ನು ಸಂಗ್ರಹಿಸಿ ಟೆಲಿಗ್ರಾಂ ಗ್ರೂಪ್‌ಗಳ ಮೂಲಕ ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳನ್ನ ಸೋರಿಕೆ ಮಾಡಿದ್ದ ಮೂವರು ಆರೋಪಿಗಳನ್ನ ಬಂಧಿಸಿರುವುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X