ಬೆಳಗಾವಿ | ವಿಶೇಷಚೇತನ ಮಗುವನ್ನು ದತ್ತು ಪಡೆದ ಇಟಲಿ ದಂಪತಿಗಳು

Date:

Advertisements

ಬೆಳಗಾವಿ ನಗರದ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನದ ಗಂಗಮ್ಮ ಚಿಕ್ಕುಂಬಿಮಠ ಬಾಲಕಲ್ಯಾಣ ಕೇಂದ್ರದಲ್ಲಿನ ವಿಶೇಷಚೇತನ ಮಗುವನ್ನು ಇಟಲಿ ದೇಶದ ದಂಪತಿಗಳು ಸೋಮವಾರ ದತ್ತು ಪಡೆದು ಮಾನವಿಯತೆಗೆ ಸಾಕ್ಷಿಯಾಗಿದ್ದಾರೆ.

ಇಟಲಿಯ ಪ್ಲಾರೆನ್ಸ್ ನಗರದ ನಿವಾಸಿಗಳಾದ ಕೋಸ್ತಾಂಜಾ ಹಾಗೂ ಬುಜಾರ್‌ ಡೆಡೆ ದಂಪತಿ ದತ್ತು ಪಡೆದವರು, ದತ್ತು ಪಡೆದ ಎರಡೂವರೆ ವರ್ಷದ ಮಗುವಿಗೆ ಆನಂದ ಎಂದು ಹೆಸರಿಡಲಾಗಿದೆ. ಈ ಮಗು ಅವಧಿಪೂರ್ವ ಜನಿಸಿತ್ತು. ಆಗ 1.3 ಕೆಜಿ ತೂಕ ಮಾತ್ರ ಇತ್ತು. ದೃಷ್ಟಿದೋಷವೂ ಸೇರಿ ಆರೋಗ್ಯದ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದೆ. ಹೆತ್ತವರು ಬಿಟ್ಟುಹೋದ ಹಸುಳೆಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ರಕ್ಷಣೆ ಮಾಡಿದ್ದರು. ಎರಡೂವರೆ ವರ್ಷಗಳಿಂದ ಗಂಗಮ್ಮ ಚಿಕ್ಕುಂಬಿಮಠ ಬಾಲಕಲ್ಯಾಣ ಕೇಂದ್ರದಲ್ಲಿ ಪೋಷಣೆ ಮಾಡಲಾಗಿದೆ.

ಆದರೆ, ಕೋಸ್ತಾಂಜಾ ಹಾಗೂ ಬುಜಾರ್ ಡೆಡೆ ದಂಪತಿ ವಿಶೇಷಚೇತನ ಮಗುವಿಗೆ ಹೊಸಬಾಳು ನೀಡಲು ಬಂದಿದ್ದಾರೆ. ತಮಗೆ ಮಕ್ಕಳಾಗಲಿಲ್ಲ ಎಂದು ಕೊರಗದೇ, ವಿಶೇಷ ಚೇತನ ಮಗುವೊಂದನ್ನು ಪೋಷಣೆ ಮಾಡಲು ಮುಂದಾಗಿದ್ದು ಪ್ರಶಂಸನೀಯ’ ಎಂದು ಬಾಲಕಲ್ಯಾಣ ಕೇಂದ್ರದ ಅಧ್ಯಕ್ಷೆ ಡಾ.ಮನಿಷಾ ಭಾಂಡನಕ‌ರ್ ತಿಳಿಸಿದರು.

Advertisements

‘ಈ ದಂಪತಿ ಆರು ವರ್ಷಗಳ ಹಿಂದೆ ದತ್ತು ಪಡೆಯಲು ಅರ್ಜಿ ಸಲ್ಲಿಸಿದ್ದರು. ‘ಕಾರಾ’ ನಿಯಮ (ಸೆಂಟ್ರಲ್‌ ಅಡಾಪ್ಟನ್ ರಿಸೋರ್ಸ್ ಅಥಾರಿಟಿ)ದಂತೆ ಎಲ್ಲವನ್ನೂ ಪರಿಶೀಲಿಸಿ, ಸಂದರ್ಶನ ಮಾಡಿ ಮಗು ದತ್ತು ನೀಡಲಾಗಿದೆ. ಮಂಗಳವಾರ (ಫೆ.18) ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಮಗುವನ್ನು ಹಸ್ತಾಂತರಿಸಲಾಗುವುದು’ ಎಂದು ಅವರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X