ಡಬಲ್ ಬಾಡಿಗೆ ಕೇಳಿದ ಆಟೋ ಚಾಲಕ; ನೀಡದಿದಕ್ಕೆ ಪ್ರಯಾಣಿಕನ ಕೊಲೆ

Date:

Advertisements

ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮೃತ ಅಹ್ಮದ ಹಾಗೂ ಗಾಯಗೊಂಡಿರುವ ಅಯೂಬ್ ಸಹೋದರರು

ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ಡಬಲ್ ಬಾಡಿಗೆ ಕೇಳಿದ್ದು, ಕೊಡದೆ ಇದಕ್ಕೆ ಇಬ್ಬರು ಪ್ರಯಾಣಿಕರ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ಮಾಡಿದ್ದಾನೆ.

ಬೆಂಗಳೂರಿನ ಯಶವಂತಪುರದ ಸೋಫ್‌ ಫ್ಯಾಕ್ಟರಿ ಬಳಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಆಟೋ ಚಾಲಕ ಅಶ್ವಥ್ ಎಂಬಾತ ಇಬ್ಬರು ಪ್ರಯಾಣಿಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ, ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿವೆ.

ಅಸ್ಸಾಂ ಮೂಲದ ಅಹ್ಮದ್ (28) ಕೊಲೆಯಾದ ಯುವಕ. ಮತ್ತೊಬ್ಬ ಯುವಕ ಅಯೂಬ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮೃತ ಅಹ್ಮದ ಹಾಗೂ ಗಾಯಗೊಂಡಿರುವ ಅಯೂಬ್ ಇಬ್ಬರು ಸಹೋದರರು ಬೆಂಗಳೂರಿಗೆ ಉದ್ಯೋಗ ಅರಿಸಿ ಬಂದಿದ್ದರು. ನಗರದ ಯಶವಂತಪುರದಲ್ಲಿ ನೆಲೆಸಿದ್ದರು.

ಇಬ್ಬರು ಸಹೋದರರು ಎಂದಿನಂತೆ ರಾತ್ರಿ ವೇಳೆ ಕೆಲಸ ಮುಗಿಸಿ ಆಟೋ ಮೂಲಕ ಮನೆಗೆ ತೆರಳುತ್ತಿದ್ದರು. ಈ ವೇಳೆ, ಆಟೋ ಹತ್ತಿಸಿಕೊಂಡ ಚಾಲಕ ಪ್ರಯಾಣಿಕರಿಂದ ಡಬಲ್ ಬಾಡಿಗೆ ನೀಡುವಂತೆ ಕೇಳಿದ್ದಾನೆ.

ಇಬ್ಬರು ಸಹೋದರರು ಇದಕ್ಕೆ ಒಪ್ಪದ ಕಾರಣ ಈ ವಿಚಾರವಾಗಿ ಜಗಳವಾಗಿದೆ. ಮಾರಕಾಸ್ತ್ರಗಳಿಂದ ಆಟೋ ಚಾಲಕ ಸಹೋದರರ ಮೇಲೆ ಹಲ್ಲೆ ಮಾಡಿದ್ದಾನೆ.

ಈ ಸುದ್ದಿ ಓದಿದ್ದೀರಾ? ಈಜಿಪುರ ಮೇಲ್ಸೇತುವೆ ಕಾಮಗಾರಿ ಮರು ಆರಂಭ; ಸರ್ಕಾರಕ್ಕೆ ವರದಿ ಸಲ್ಲಿಸಲು ಪಾಲಿಕೆ ಸಿದ್ಧತೆ

ಹಲ್ಲೆಗೊಳಗಾದ ಇಬ್ಬರು ಸಹೋದರರ ಪೈಕಿ ಅಹ್ಮದ್ ಮೃತಪಟ್ಟಿದ್ದು, ಅಯೋಬ್‌ಗೆ ಗಂಭೀರ ಗಾಯಗಳಾಗಿವೆ. ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಣ್ಣು ಮಕ್ಕಳು ನಮ್ಮ ದೇಶದ ಮುಂದಿನ ಭವಿಷ್ಯ: ಕ್ರೀಡಾಪಟು ಅಂಜು ಬಾಬಿ‌ ಜಾರ್ಜ್

ಹೆಣ್ಣು ಮಕ್ಕಳು ನಮ್ಮ ದೇಶದ ಮುಂದಿನ ಭವಿಷ್ಯ.‌ ಕ್ರೀಡೆ ಸೇರಿದಂತೆ ಹೆಣ್ಣು...

ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ವತಿಯಿಂದ ಅ.2ರಿಂದ ರಾಜ್ಯಾದ್ಯಂತ ʼಅರಿವು-ಮಾನವೀಯತೆʼ ಜಾಗೃತಿ ಅಭಿಯಾನ

ಕರ್ನಾಟಕ ರಾಜ್ಯ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ವತಿಯಿಂದ ಅ.2ರಿಂದ ರಾಜ್ಯಾದ್ಯಂತ...

ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಬೆಂಬಲಕ್ಕೆ ಬೃಹತ್ ಪ್ರತಿಭಟನೆ: ನರಮೇಧ ನಿಲ್ಲಿಸಿ ಎಂದು ಆಗ್ರಹ

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ದೊಡ್ಡ ಸಂಖ್ಯೆಯ ಜನರು ಸೇರಿ, ಗಾಜಾದಲ್ಲಿ...

ರೈತರು ಸಹಕಾರ ಸಂಘಗಳಲ್ಲಿ ವ್ಯವಹರಿಸಿ ಸಂಘದ ಉನ್ನತಿಗೆ ಸಹಕರಿಸಿ

ದೇವನಹಳ್ಳಿ:ರೈತರು ಸಹಕಾರ ಸಂಘಗಳಲ್ಲಿ ವ್ಯವಹರಿಸಿ ಸಂಘದ ಉನ್ನತಿಗೆ ಸಹಕರಿಸಿ ಖಾಸಗಿ ಬ್ಯಾಂಕ್‌ಗಳಲ್ಲಿ...

Download Eedina App Android / iOS

X