ಮುಂಜಾನೆ ಕೂಗಿ ಸುಖನಿದ್ರೆ ಕೆಡಿಸುವ ಕೋಳಿಗಳು: ಸಾಕಾಣಿಕಾ ಕೇಂದ್ರದ ವಿರುದ್ಧ ದೂರು

Date:

Advertisements

ಹುಂಜಗಳು ಮುಂಜಾನೆ ಸುಮಾರು 3 ಗಂಟೆಗೆ ಕೂಗಿ ನಿದ್ರೆಗೆ ತೊಂದರೆ ಮಾಡುತ್ತಿದೆ ಎಂದು ಆರೋಪಿಸಿ ಕೇರಳದಲ್ಲಿ ಕೋಳಿ ಸಾಕಾಣಿಕೆ ಕೇಂದ್ರದ ವಿರುದ್ದವೇ ಪ್ರಕರಣ ದಾಖಲಿಸಿರುವ ಘಟನೆ ಕೇರಳದ ಆಡೂರು ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಸಾಮಾನ್ಯವಾಗಿ ಮುಂಜಾನೆ 3 ಗಂಟೆ ಗಾಢ ನಿದ್ದೆಯ ಸಮಯ. ಆದರೆ ಆ ಸಮಯದಲ್ಲೇ ಕೋಳಿ ಸಾಕಾಣೆ ಕೇಂದ್ರದಲ್ಲಿರುವ ಹುಂಜಗಳು ಕೂಗುತ್ತಿದ್ದು, ಇದು ಸ್ಥಳೀಯ ನಿವಾಸಿಗಳ ನಿದ್ದೆಗೆ ತೊಂದರೆ ಉಂಟು ಮಾಡಿದೆ ಎಂದು ಹೇಳಲಾಗಿದೆ. ಕೊನೆಗೆ ಈ ವಿಚಾರದಲ್ಲಿ ದೂರು ದಾಖಲಾಗಿ ಸರ್ಕಾರ ಮಧ್ಯಪ್ರವೇಶ ಮಾಡಬೇಕಾದ ಸ್ಥಿತಿ ಎದುರಾಗಿದೆ.

ಇದನ್ನು ಓದಿದ್ದೀರಾ? ಬಿಸಿಲಿನ ಜಳಕ್ಕೆ ಕೋಳಿಗಳ ಸಾವು; ಗ್ರಾಹಕರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ

Advertisements

ಸ್ಥಳೀಯ ನಿವಾಸಿಗಳ ಆರೋಪವನ್ನು ಪರಿಶೀಲಿಸಿದ ಅಡೂರು ಆರ್‌ಡಿಒ ಬಿ ರಾಧಾಕೃಷ್ಣನ್ ಅವರು ಈ ಆರೋಪ ನಿಜ ಎಂದು ತಿಳಿಸಿದ್ದಾರೆ. ಹುಂಜಗಳು ಮುಂಜಾನೆ 3 ಗಂಟೆಗೆ ಕೂಗಲು ಆರಂಭಿಸುತ್ತವೆ. ಇದರಿಂದಾಗಿ ಸ್ಥಳೀಯರ ನಿದ್ದೆಗೆ ತೊಂದರೆಯಾಗುತ್ತಿದೆ ಎಂಬುದು ಖಚಿತವಾದ ಬಳಿಕ ಆರ್‌ಡಿಒ ಕೋಳಿ ಸಾಕಾಣೆ ಕೇಂದ್ರವನ್ನು ಬೇರೆಡೆ ಸ್ಥಳಾಂತರಿಸುವಂತೆ ಆದೇಶಿಸಿದ್ದಾರೆ. ಆರ್‌ಡಿಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಹುಂಜ ಮುಂಜಾನೆ ಕೂಗುವುದರಿಂದ ಎಲ್ಲರಿಗೂ ನಿದ್ದೆಗೆ ತೊಂದರೆಯಾಗುತ್ತಿದೆ. ಅದರಲ್ಲೂ ವೃದ್ಧರಿಗೆ ಅಧಿಕ ಸಮಸ್ಯೆಯಾಗುತ್ತಿದೆ ಎಂಬುದು ಸ್ಥಳೀಯ ನಿವಾಸಿ ರಾಧಾಕೃಷ್ಣ ಕುರೂಪ್ ಆರೋಪವಾಗಿದೆ.

ಈ ನಿಟ್ಟಿನಲ್ಲಿ ಕೋಳಿ ಸಾಕಾಣಿಕೆ ಮಾಡುವ ನೆರೆಮನೆಯ ಅನಿಲ್ ಎಂಬವರ ವಿರುದ್ಧ ದೂರು ಕೂಡಾ ದಾಖಲಿಸಿದ್ದಾರೆ. ಇನ್ನು ಕೋಳಿ ಸಾಕಾಣಿಕೆ ಕೇಂದ್ರವನ್ನು 14 ದಿನಗಳ ಒಳಗಾಗಿ ಸ್ಥಳಾಂತರಿಸುವಂತೆ ತಿಳಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X