ವಿಜಯಪುರ | ಕೇಂದ್ರ, ರಾಜ್ಯ ಸರ್ಕಾರಗಳು ಸಹಕಾರ ಕ್ಷೇತ್ರದ ಮೇಲೆ ಲಕ್ಷ್ಯ ತೋರುತ್ತಿಲ್ಲ: ಸಚಿವ ಶಿವಾನಂದ ಪಾಟೀಲ

Date:

Advertisements

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕಾರ ತತ್ವದ ಆಶಯಗಳನ್ನೇ ಮರೆತಿದ್ದಲ್ಲದೆ, ಸಹಕಾರ ಕ್ಷೇತ್ರದ ಮೇಲೆ ಲಕ್ಷ್ಯ ತೋರುತ್ತಿಲ್ಲ ಎಂದು ಜವಳಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ವಿಷಾದ ವ್ಯಕ್ತಪಡಿಸಿದರು.

ವಿಜಯಪುರ ಜಿಲ್ಲೆಯ ಸಿಂಧಗಿ ಪಟ್ಟಣದ ಅನ್ನಪೂರ್ಣ ಲೇಔಟ್‌ನಲ್ಲಿ ಮಂಗಳವಾರ ಸಂಜೆ ಸಿಂಧಗಿ-ಆಲಮೇಲ ದೇವರಹಿಪ್ಪರಗಿ ತಾಲೂಕಿನ ಪ್ರಾಥಮಿಕ ಕೃಷಿ ತ್ತಿನ ಅರ್ಬನ್ ಬ್ಯಾಂಕ್ ಹಾಗೂ ಕ್ರೆಡಿಟ್, ಸೌಹಾರ್ದ ಸಹಕಾರ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿರುವ ಸಹಕಾರ ವಸತಿ ಮತ್ತು ಮೂಲಭೂತ ನಿಗಮ ನಿಯಮಿತ ಭವನದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

“ಸಹಕಾರ ಚಳವಳಿಗೆ ನಾಂದಿ ಹಾಡಿದ ರಾಜ್ಯದಲ್ಲಿ ಹುಟ್ಟಿಬೆಳೆದ ಕ್ಷೇತ್ರ ಈಗ ಕ್ಷೀಣಿಸುತ್ತಿದೆ. ಸಹಕಾರ ರಂಗದಿಂದ ರಾಜ್ಯ ಅಭಿವೃದ್ಧಿ ಕಂಡಿದೆ. ಈ ತತ್ವದಿಂದ ರಾಜ್ಯವೇ ಸ್ವಾವಲಂಬಿಯಾಗಿ ಬೆಳೆದುನಿಂತಿದೆ” ಎಂದರು.

Advertisements
ಸಹಕಾರ ಕ್ಷೇತ್ರ

“ಎಲ್ಲ ಬೆಳೆಯನ್ನು ಬೆಳೆಯುವ ದೇಶ ನಮ್ಮದು. ಭವಿಷ್ಯದಲ್ಲಿ ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿ, ಜಿಲ್ಲೆ ಸಂಪೂರ್ಣವಾಗಿ ನೀರಾವರಿಯಾಗುತ್ತದೆ. ಕೃಷಿ ಕುರಿತು ರೈತರಲ್ಲಿ ಅಸೂಯೆ ಮೂಡದಿರಲಿ. ವೈಜ್ಞಾನಿಕವಾಗಿ ಬೆಳೆಯುವ ಮೂಲಕ ತಮ್ಮ ಬದುಕನ್ನು ಬದಲಾವಣೆಗೆ ತೆರೆದುಕೊಳ್ಳಬೇಕು. ಸಹಕಾರ ತತ್ವದಡಿ ಸುಂದರ ಮತ್ತು ಸುಭದ್ರ ಬದುಕು ಕಟ್ಟಿಕೊಳ್ಳಬೇಕು. ಕಟ್ಟಡ ನಿರ್ಮಾಣಕ್ಕೆ ಕೈಲಾದ ಸಹಕಾರ ನೀಡಲಾಗುವುದು” ಎಂದು ಹೇಳಿದರು.

ಶಾಸಕ ಅಶೋಕ ಮನಗೂಳಿ ಮಾತನಾಡಿ, “ಮೂರು ತಾಲೂಕಿನ 362 ಸಹಕಾರ ಸಂಘಗಳು ತಮ್ಮ ಕಾರ್ಯ ಚಿಂತನ-ಮಂಥನ ಚಟುವಟಿಕೆಗಳು ಆಸರೆಯಿಲ್ಲದೇ ನಡೆದಿದ್ದವು. ಈ ಸಹಕಾರ ಭವನದ ಮೂಲಕ ಅವರ ಕೆಲಸಗಳಿಗೆ, ಸಭೆ-ಸಮಾರಂಭಗಳಿಗೆ ಅನುಕೂಲವಾಗಲಿದೆ. ಈ ಹಿಂದಿನ ಸಭೆಯಲ್ಲಿ ನಿರ್ಧರಿಸಿದಂತೆ ಕಟ್ಟಡ ನಿರ್ಮಾಣಕ್ಕೆ ದೇಣಿಗೆ ನೀಡಿವೆ. ಮುಂದಿನ ವರ್ಷ ಇದೇ ಫೆಬ್ರವರಿಯಲ್ಲಿ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಾಗುವುದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ತೊಗರಿ ಬೆಳೆಹಾನಿ ಪರಿಹಾರಕ್ಕೆ ರೈತರ ಆಗ್ರಹ

ಸಾರಂಗಮಠ-ಗಚ್ಚಿನಮಠದ ಡಾ.ಪ್ರಭು ಸಾರಂಗದೇವ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು. ಸಾನ್ನಿಧ್ಯ ಅಖಂಡ ಸಹಕಾರ ಸಂಘಗಳ ಸಮಿತಿ ಅಧ್ಯಕ್ಷ ಡಾ. ರಾಮರಾವ್ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ವಿಡಿಸಿಸಿ ಬ್ಯಾಂಕ್ ನಿರ್ದೇಶಕ ಹಣಮಂತ್ರಾಯಗೌಡ ಪಾಟೀಲ, ಗುರುಶಾಂತ ನಿಡೋಣಿ, ಸಾಧಿಕ್ ಸುಂಬಡ, ಕೆಡಿಪಿ ಸದಸ್ಯೆ ಮಹಾನಂದ ಬಮ್ಮಣ್ಣಿ, ಇಚಿಡಿ ಸಹಕಾರಿ ಸಹಾಯಕ ಉಪನಿಬಂಧಕ ಕೆ ಎಚ್‌ ವಡ್ಡರ, ಶಿವಕುಮಾರ ಗುಂದಗಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X