ಗುಜರಾತ್‌ ಕಡಲ ತೀರದಲ್ಲಿ ಹೆಚ್ಚಿದ ʼಬಿಪೊರ್‌ಜಾಯ್‌ʼ ಅಬ್ಬರ

Date:

Advertisements
  • ರಾಜ್ಯದ ಕರಾವಳಿಗೂ ತಟ್ಟಲಿದೆ ಚಂಡಮಾರುತದ ಪರಿಣಾಮ
  • ಪೋರ್‌ಬಂದರ್‌ನಲ್ಲಿ ಬಿರುಗಾಳಿ ಸಹಿತ ಮಳೆಗೆ ವ್ಯಕ್ತಿ ಬಲಿ

ಬಿಪೊರ್‌ಜಾಯ್‌ ಚಂಡಮಾರುತದ ಅಬ್ಬರ ಜೋರಾಗಿದ್ದು, ಜೂನ್‌ 15ರ ಹೊತ್ತಿಗೆ ಗುಜರಾತ್‌ನ ಕಚ್‌ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಂದಾಜಿಸಿದೆ. ಈ ಹಿನ್ನೆಲೆ ಕರಾವಳಿ ತೀರಕ್ಕೆ ಹೊಂದಿಕೊಂಡಿರುವ ಕಚ್‌ ಜಿಲ್ಲೆ ಮತ್ತ ಸೌರಾಷ್ಟ್ರ ಪ್ರದೇಶಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಪೋರ್‌ಬಂದರ್‌ ಸೇರಿದಂತೆ ಕಚ್‌ ಜಿಲ್ಲೆಯ ಹಲವೆಡೆ ಈಗಾಗಲೇ ಗಾಳಿ ಸಹಿತ ಮಳೆ ಶುರುವಾಗಿದೆ. ಕೆಲವೆಡೆ ದೈತ್ಯ ಮರಗಳು ಧರೆಗುರುಳಿದ್ದು, ಪೋರ್‌ಬಂದರ್‌ನಲ್ಲಿ ಬಿರುಗಾಳಿ-ಮಳೆಗೆ ಮನೆಯ ಗೋಡೆ ಕುಸಿದು ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ. ಈ ಹಿನ್ನೆಲೆ ಪರಿಸ್ಥಿತಿ ಅವಲೋಕಿಸುವ ಸಲವಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಗುಜರಾತ್‌ನ ಮುಖ್ಯಮಂತ್ರಿ ಭೂಪೇಂದ್ರಭಾಯ್‌ ಪಟೇಲ್‌ ಮತ್ತು ಕರಾವಳಿ ತೀರದ ಜಿಲ್ಲೆಗಳ ಸಂಸದರ ಜೊತೆಗೆ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಜೊತೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ಕಚ್‌ ಜಿಲ್ಲೆಗೆ ಭೇಟಿ ನೀಡಿದ್ದು, ಸ್ಥಳೀಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಕಚ್‌ ಕಡಲ ತೀರದುದ್ದಕ್ಕೂ ವಾಸಿಸುತ್ತಿರುವ 8 ಸಾವಿರಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

Advertisements

ಕರ್ನಾಟಕದ ಕರಾವಳಿಯಲ್ಲೂ ಬಿಪರ್‌ಜಾಯ್‌ ಅಬ್ಬರ

karnataka costal

ರಾಜ್ಯದ ಕರಾವಳಿ ತೀರದಲ್ಲೂ ಬಿಪೊರ್‌ಜಾಯ್‌ ಚಂಡಮಾರುತದ ಭೀತಿ ಹೆಚ್ಚಿದೆ. ಉಳ್ಳಾಲದ ಸಮುದ್ರ ತೀರಕ್ಕೂ ಚಂಡಮಾರುತದ ಪರಿಣಾಮ ತಟ್ಟುವ ಸಾಧ್ಯತೆ ಇದೆ. ಈ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಸ್ಥಳೀಯ ಆಡಳಿತ ಉಚ್ಚಿಲ ಬಟ್ಟಪ್ಪಾಡಿಯ ಸಮುದ್ರ ತೀರದಲ್ಲಿ ಕಲ್ಲು ಹಾಕುವ ತುರ್ತು ಕಾಮಗಾರಿಯನ್ನು ಆರಂಭಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X