ಭದ್ರಾವತಿ | ಫೆ.21 ರಂದು ಬೃಹತ್ ಪ್ರತಿಭಟನೆ: ರೈತ ಮುಖಂಡ ಬಸವರಾಜಪ್ಪ ಕರೆ

Date:

Advertisements

ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಬಗರ್ ಹುಕುಂ ಸಾಗುವಳಿ ಮತ್ತು ಶರಾವತಿ ಮುಳುಗಡೆ ರೈತರ ಹಿತಾರಕ್ಷಣಾ ಸಮಿತಿ ವತಿಯಿಂದ ನಾಳೆ (ಫೆ.21) ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಮುಖಂಡ ಹೆಚ್‌ ಆರ್ ಬಸವರಾಜಪ್ಪ ತಿಳಿಸಿದರು.

ನಗರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಭದ್ರಾವತಿ ತಾಲೂಕು ಹಾಗೂ ಶಿವಮೊಗ್ಗ ವಿಧಾನಸಭಾ ವ್ಯಾಪ್ತಿಯಲ್ಲಿ ಬಗರ್‌ ಹುಕುಂ ಸಾಗುವಳಿ ರೈತರು ಮತ್ತು ಶರಾವತಿ ಮುಳಗಡೆಯಿಂದ ಸ್ಥಳಾಂತರಗೊಂಡ ಸಂತ್ರಸ್ಥ ರೈತರಿಗೆ ಈ ಹಿಂದೆ ಬಗರ್ ಹುಕುಂ ಸಮಿತಿ ಸಾಗುವಳಿ ಮುಂಜೂರಾತಿ ಪತ್ರ ಕೊಟ್ಟಿತ್ತು. ಹಾಗಾಗಿ ಈ ಪ್ರದೇಶದ ರೈತರೆಲ್ಲರೂ ಆ ಭೂಮಿಯಲ್ಲಿ ಕಳೆದ 60-70 ವರ್ಷದಿಂದ ಸಾಗುವಳಿ ಮಾಡಿಕೊಂಡು ಬಂದಿದ್ದಾರೆ. ಅಲ್ಲದೆ ಕಂದಾಯ ಇಲಾಖೆಯಿಂದ ಪಹಣಿ ಹಾಗೂ ಮುಟೇಷನ್ ದಾಖಲಾತಿಗಳನ್ನು ಕೊಡುವಾಗ ಬಗರ್ ಹುಕುಂ ಸಮಿತಿಯಲ್ಲಿ ಅರಣ್ಯ ಅಧಿಕಾರಿಗಳ ಒಪ್ಪಿಗೆ ಮೇರೆಗೆ ದಾಖಲಾತಿಗಳನ್ನು ನೀಡಿರುತ್ತಾರೆ. ಆದರೆ, ಹಲವು ವರ್ಷಗಳ ನಂತರ ಈಗ ಆ ಜಮೀನು ಅರಣ್ಯ ಇಲಾಖೆಗೆ ಸೇರಿದ್ದು ಎಂದು ಇಲಾಖೆಯ ಅಧಿಕಾರಿಗಳು ಪಹಣಿಯಲ್ಲಿ ತಿದ್ದುಪಡಿ ಮಾಡಿದ್ದಾರೆ” ಎಂದು ಆರೋಪಿಸಿದರು.

“ಜೆಸಿಬಿ ಯಂತ್ರಗಳ ಮೂಲಕ ಸಾಗುವಳಿದಾರರ ಜಮೀನುಗಳಲ್ಲಿರುವ ಅಡಿಕೆ ಮರಗಳನ್ನು ಕಿತ್ತೆಸೆದು ದೌರ್ಜನ್ಯ ಎಸಗುತ್ತಿದ್ದಾರೆ. ರೈತರ ಜಮೀನಿನಲ್ಲಿ ಕಾಲುವೆಗಳನ್ನು ನಿರ್ಮಿಸಿ ರೈತರನ್ನು ಒಕ್ಕಲೆಬ್ಬಿಸುವಾಗ ರೈತರು ಅಧಿಕಾರಿಗಳನ್ನು ಪ್ರಶ್ನಿಸಲು ಹೋದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಶ್ರೀಗಂಧದಮರ, ಬೀಟೆ ಮತ್ತು ಸಾಗುವಾನಿ ಇತರೆ ಬೆಲೆ ಬಾಳುವ ಮರಗಳನ್ನು ಕಡಿದು ಕಾಡನ್ನು ನಾಶ ಮಾಡಿದ್ದೀರಿ ಎಂದು ರೈತರ ಮೇಲೆಯೇ ಸುಳ್ಳು ಮೊಕದ್ದಮೆ ಹೂಡುವುದಾಗಿ ಸೂಚನಾ ಪತ್ರಗಳನ್ನು ಕೊಟ್ಟಿರುತ್ತಾರೆ. ಕಂದಾಯ ಇಲಾಖೆಯವರೂ ಸಹ ಇದೇ ರೀತಿ ಸೂಚನಾ ಪತ್ರಗಳನ್ನು ಕೊಟ್ಟಿರುವುದು ದೌರ್ಜನ್ಯವಲ್ಲದೆ ಮತ್ತೇನು” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ?: ಭದ್ರಾವತಿ | ಹಾಡಹಗಲೇ ಲಾಂಗು ಮಚ್ಚಿನಿಂದ ಹೊಡೆದಾಟದ; ವಿಡಿಯೊ ವೈರಲ್

ಈ ರೀತಿ ದೌರ್ಜನ್ಯ ಎಸಗುತ್ತಿರುವ ರೈತ ವಿರೋಧಿ ನೀತಿಯನ್ನು ಖಂಡಿಸಿ ರೈತರ ಬೃಹತ್ ಪ್ರತಿಭಟನೆಯನ್ನು ಫೆಬ್ರವರಿ 21ರ ಬೆಳಗ್ಗೆ 10 ಗಂಟೆಗೆ ಭದ್ರಾವತಿ ರಂಗಪ್ಪ ಸರ್ಕಲ್‌ನಿಂದ ತಹಿಶೀಲ್ದಾರರ ಕಚೇರಿ ಮತ್ತು ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. ಈ ಪ್ರತಿಭಟನೆಗೆ ಬಗ‌ರ್ ಹುಕುಂ ಸಾಗುವಳಿ ರೈತರು, ಶರಾವತಿ ಮುಳುಗಡೆ ಸಂತ್ರಸ್ಥರು, ಸ್ಥಳಾತರಗೊಂಡ ರೈತರು, ಅರಣ್ಯ ಹಕ್ಕು ಸಮಿತಿ ರೈತರು, ರಾಜ್ಯ ರೈತ ಸಂಘಟನೆಗಳು ಹಾಗೂ ಹಸಿರು ಸೇನೆ ರೈತ ಮುಖಂಡರುಗಳು, ಎಲ್ಲಾ ಸಹಕಾರಿ ಸಂಘಟನೆಗಳ ಸದಸ್ಯರು ಹೆಚ್ಚಿನ ಸಂಖೆಯಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X