ಶಿರಾ | ಕಳಪೆ ಗುಣಮಟ್ಟದ ಆಹಾರ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Date:

Advertisements

ಹಾಸ್ಟೆಲ್‌ನಲ್ಲಿ ಊಟ ಸೇವಿಸಿದ ಬಳಿಕ 40 ರಿಂದ 50 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಆತಂಕಕಾರಿ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನಲ್ಲಿ ನಡೆದಿದೆ.

ಶಿರಾ ಪಟ್ಟಣದ ವಿಧಾನ ಪರಿಷತ್ ಸದಸ್ಯ ಚಿದಾನಂದ್ ಒಡೆತನದ ಪ್ರೆಸಿಡೆನ್ಸಿ ಖಾಸಗಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಕಳಪೆ ಗುಣಮಟ್ಟದ ಕಲುಷಿತ ಆಹಾರ ಸೇವಿಸಿ ಆರೋಗ್ಯದಲ್ಲಿ ಏರುಪೇರಾಗಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಸದ್ಯ ಶಿರಾ ತಾಲೂಕು ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ವಿಷಯ ತಿಳಿದ ವಸತಿ ಶಾಲೆಯ ಮಾಲೀಕ ಹಾಗೂ ಎಂ‌ಎಲ್‌ಸಿ ಚಿದಾನಂದ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

Advertisements

ಇತ್ತೀಚೆಗೆ ಮಂಗಳೂರು ಹಾಗೂ ಕೊಪ್ಪಳದಲ್ಲೂ ಈ ರೀತಿಯ ಘಟನೆಗಳು ನಡೆದಿದ್ದವು. ಅವು ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಇಂಥದ್ದೇ ಘಟನೆ ಮರುಕಳಿಸಿರುವುದು ಪೋಷಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಿಸಿದೆ.

ಈ ಸುದ್ದಿ ಓದಿದ್ದೀರಾ?: ಶಿರಾ |  ಹಾಸ್ಟೆಲ್ ನ 14 ವಿದ್ಯಾರ್ಥಿಗಳು ಅಸ್ವಸ್ಥ : ಆಸ್ಪತ್ರೆಯಲ್ಲಿ ಚಿಕಿತ್ಸೆ 

ರಾಜ್ಯದ ಬಹುತೇಕ ಶಾಲೆಗಳಲ್ಲಿ ಊಟದಲ್ಲಿ ನುಸಿ, ಹುಳುಗಳು ಕಂಡುಬರುತ್ತಿರುವ ವರದಿಗಳು ದಿನನಿತ್ಯ ಪ್ರಕಟವಾಗುತ್ತಿವೆ. ಆಹಾರ ಧಾನ್ಯಗಳನ್ನು ಪ್ರತಿ ತಿಂಗಳು ಆಯಾ ಶಾಲೆಗೆ ಬೇಕಾಗುವಷ್ಟು ಸರಬರಾಜು ಮಾಡಲಾಗುತ್ತದೆ. ಜಿಲ್ಲೆಯ ವಿವಿಧ ಗೋಡೌನ್ ಗಳಿಂದ ಅಕ್ಕಿ ಪೂರೈಕೆಯಾದ್ರೆ, ತೊಗರಿಬೇಳೆ, ಎಣ್ಣೆ ಸೇರಿದಂತೆ ಬೇರೆ ಪದಾರ್ಥಗಳು ಟೆಂಡರ್ ಪಡೆಯುವ ಏಜೆನ್ಸಿಗಳು ಪೂರೈಗೆ ಮಾಡುತ್ತವೆ. ಕಳಪೆ ಆಹಾರ ಧಾನ್ಯಗಳನ್ನು ಪೂರೈಕೆ ಮಾಡುವ ಏಜೆನ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಮನವಿ ಮಾಡುತ್ತಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X