‘ನೀವು ವ್ಯವಸ್ಥೆಯ ದಬ್ಬಾಳಿಕೆಯಿಂದ ನಲುಗಿದ್ದೀರಿ’: ದಲಿತ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ

Date:

Advertisements

“ಸಂವಿಧಾನ ರಚನೆಯಲ್ಲಿ ದಲಿತರ ಪಾತ್ರ ಪ್ರಮುಖವಾದದ್ದು. ಆದರೆ, ವ್ಯವಸ್ಥೆಯ ದಬ್ಬಾಳಿಕೆಯಿಂದಾಗಿ ದಲಿತರು ನಲುಗಿ ಹೋಗಿದ್ದಾರೆ” ಎಂದು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ತಾವು ಪ್ರತಿನಿಧಿಸುವ ರಾಯ್‌ಬರೇಲಿಯ ಬರ್ಗಡ್ ಚೌರಾಹಾದಲ್ಲಿರುವ ‘ಮೂಲ್ ಭಾರತಿ’ ಹಾಸ್ಟೆಲ್‌ನಲ್ಲಿ ದಲಿತ ವಿದ್ಯಾರ್ಥಿಗಳೊಂದಿಗೆ ರಾಹುಲ್‌ ಗಾಂಧಿ ಗುರುವಾರ ಸಂವಾದ ನಡೆಸಿದ್ದಾರೆ.”ಭಾರತದಲ್ಲಿರುವ 500 ಅತೀ ದೊಡ್ಡ ಖಾಸಗಿ ಕಂಪನಿಗಳನ್ನು ಪಟ್ಟಿ ಮಾಡಿದರೆ, ಅವುಗಳ ಪೈಕಿ ಎಷ್ಟು ಕಂಪನಿಗಳನ್ನು ದಲಿತರು ನಡೆಸುತ್ತಿದ್ದಾರೆ” ಎಂದು ವಿದ್ಯಾರ್ಥಿಗಳನ್ನು ರಾಹುಲ್‌ ಪ್ರಶ್ನಿಸಿದ್ದಾರೆ.

ಅವರ ಪ್ರಶ್ನೆಗೆ ಉತ್ತರಿಸಿದ ಓರ್ವ ವಿದ್ಯಾರ್ಥಿ, ‘ಒಂದೂ ಇಲ್ಲ’ ಎಂದಿದ್ದಾರೆ. ‘ಯಾಕೆ ಹೀಗೆ’ ಎಂದು ರಾಹುಲ್‌ ಗಾಂಧಿ ಮರುಪ್ರಶ್ನೆ ಕೇಳಿದ್ದು, ಮತ್ತೋರ್ವ ವಿದ್ಯಾರ್ಥಿ, ‘ಏಕೆಂದರೆ, ನಮಗೆ ಸಾಕಷ್ಟು ಸೌಲಭ್ಯಗಳು ದೊರೆಯುತ್ತಿಲ್ಲ” ಎಂದು ಉತ್ತರಿಸಿದರು.

Advertisements

ಅವರ ಉತ್ತರವನ್ನು ಒಪ್ಪದ ರಾಹುಲ್‌ ಗಾಂಧಿ, “ಬಿ.ಆರ್ ಅಂಬೇಡ್ಕರ್ ಅವರಿಗೆ ಯಾವುದೇ ಸೌಲಭ್ಯವಿರಲಿಲ್ಲ. ಅವರು ಏಕಾಂಗಿಯಾಗಿ ತಮ್ಮ ಪ್ರಯತ್ನಗಳನ್ನು ಮಾಡುತ್ತಿದ್ದರು. ಅವರು ದೇಶದ ರಾಜಕೀಯವನ್ನೇ ಅಲ್ಲಾಡಿಸಿದರು” ಎಂದು ಹೇಳಿದ್ದಾರೆ.

“ಸಮಾಜದಲ್ಲಿ ನಿಮ್ಮ (ದಲಿತರು) ವಿರುದ್ಧವಾದ, ನಿಮ್ಮ ಪ್ರಗತಿಯನ್ನು ಸಹಿಸದ ವ್ಯವಸ್ಥೆ ಇದೆ. ಈ ವ್ಯವಸ್ಥೆಯು ಪ್ರತಿದಿನ ನಿಮ್ಮ ಮೇಲೆ ದಾಳಿ ಮಾಡುತ್ತದೆ. ಬಹುತೇಕ ಸಮಯದಲ್ಲಿ, ನಿಮ್ಮ ಮೇಲೆ ವ್ಯವಸ್ಥೆಯ ದಾಳಿ ಹೇಗೆ ನಡೆಯುತ್ತಿದೆ ಎಂಬುದು ನಿಮಗೂ ತಿಳಿದಿರುವುದಿಲ್ಲ” ಎಂದು ರಾಹುಲ್ ವಿವರಿಸಿದ್ದಾರೆ.

“ಸಂವಿಧಾನದ ಸಿದ್ಧಾಂತವೇ ನಿಮ್ಮ ಸಿದ್ಧಾಂತ ಎಂಬುದನ್ನು ನೀವು ಅರ್ಥಮಾಡಿಕೊಳ್ಳಬೇಕು. ಈ ದೇಶದಲ್ಲಿ ದಲಿತರು ಇಲ್ಲದಿದ್ದರೆ, ಭಾರತಕ್ಕೆ ಇಂತಹ ಸಂವಿಧಾನ ಸಿಗುತ್ತಿರಲಿಲ್ಲ ಎಂದು ನಾನು ಖಚಿತವಾಗಿ ಹೇಳುತ್ತೇನೆ. ಇದು ನಿಮ್ಮ ಸಿದ್ಧಾಂತ, ಇದು ನಿಮ್ಮ ಸಂವಿಧಾನ. ಆದರೆ, ನೀವು ಎಲ್ಲಿಗೇ ಹೋದರೂ ವ್ಯವಸ್ಥೆಯ ದಬ್ಬಾಳಿಕೆಯಿಂದ ನೀವು ನಲುಗಿ ಹೋಗುತ್ತಿದ್ದೀರಿ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X