ರಾಯಚೂರು | ನಿಯಮಾನುಸಾರ ಮರಳು ಕೇಂದ್ರ ಸ್ಥಾಪನೆಗೆ ಸಿಐಟಿಯು ಒತ್ತಾಯ

Date:

Advertisements

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವಿವಿಧ ಹಳ್ಳಿಗಳಿಗೆ ಕಟ್ಟಡ ಕಾಮಗಾರಿಗಳಿಗೆ ಸರ್ಕಾರದ ನಿಯಮಾನುಸಾರ ಮರಳು ನೀಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು) ತಹಶೀಲ್ದಾರ್ ಚೆನ್ನಮಲ್ಲಪ್ಪ ಘಂಟಿ ಅವರಿಗೆ ಮನವಿ ಸಲ್ಲಿಸಿತು.

ತಾಲೂಕಿನಲ್ಲಿ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಬಹುತೇಕ ಕಟ್ಟಡ ಕಾರ್ಮಿಕರು, ಸಣ್ಣ ಪುಟ್ಟ ಮನೆಗಳು ಹಾಗೂ ಗ್ರಾಮ ಪಂಚಾಯತ್ ಕಾಮಾಗಾರಿಗಳನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ.‌ ಮರಳು ಸಿಗದೆ ಕಾಮಗಾರಿಗಳು ಕುಂಠಿತಗೊಂಡಿವೆ. ಕಾಮಗಾರಿಗಳು ಯಥಾವತ್ತಾಗಿ ನಡೆಯುವುದಕ್ಕೆ ಸರ್ಕಾರದ ನಿಯಮದಂತೆ ಮರಳು ನೀಡುವುದಕ್ಕೆ ಮುಂದಾಗಬೇಕೆಂದು ಸಂಘಟನೆಯ ಮುಖಂಡರು ಒತ್ತಾಯಿಸಿದರು.

ಪರವಾನಗಿ ನೀಡಿದಾಗ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅನಧಿಕೃತ ನೆರೆಯ ಜಿಲ್ಲೆಗಳಿಗೆ ಮರಳು ಸಾಗಿಸಲು ಮುಂದಾಗುತ್ತಾರೆ. ಸ್ಥಳೀಯ ಜನರ ಹೆಸರು ಬಳಸಿಕೊಂಡು ಅಧಿಕಾರ ದುರುಪಯೋಗಪಡಿಸಿಕೊಂಡು ಅವ್ಯವಹಾರ ನಡೆಸುತ್ತಾರೆ. ಇದರ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಸರ್ಕಾರದ ನಿಯಮದ ಪ್ರಕಾರ ಸ್ಥಳೀಯರಿಗೆ ಗ್ರಾಮ ಪಂಚಾಯತಿಗಳ ಮುಖಾಂತರ ಮರಳು ಕೇಂದ್ರಗಳನ್ನು ಸ್ಥಾಪಿಸಲು ಆಗ್ರಹಿಸಿ ಜಿಲ್ಲಾಡಳಿತ ಕಾರ್ಮಿಕರಿಗೆ ಬಡವರಿಗೆ ಯಾವುದೇ ಸಮಸ್ಯೆ ಆಗದಂತೆ ಗಮನವಹಿಸಬೇಕು ಎಂದು ಪ್ರತಿಭಟಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವ್ಯವಹಾರ; ಇಬ್ಬರು ಅಧಿಕಾರಿಗಳು ಅಮಾನತು

ಈ ವೇಳೆ ಸಿಐಟಿಯು ರಾಜ್ಯ ಜಂಟಿ ಕಾರ್ಯದರ್ಶಿ ಶಬ್ಬೀರ್ ಜಾಲಹಳ್ಳಿ, ರೈತ ಮುಖಂಡ ನರಸಣ್ಣ ನಾಯಕ, ಗಿರಿಯಪ್ಪ ಪೂಜಾರಿ, ಕಟ್ಟಡ ಕಾರ್ಮಿಕ ಸಂಘಟನೆ ತಾಲೂಕು ಅಧ್ಯಕ್ಷ ಪಿಡ್ಡಪ್ಪ ನಾಯಕ, ಕಾರ್ಯದರ್ಶಿ ಯೂಸುಫ್ ಸಾಬ್, ವಿದ್ಯಾರ್ಥಿ ಮುಖಂಡ ಮಹಾಲಿಂಗ ದೊಡ್ಡಮನಿ, ಪ್ಯಾಟಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಯಲ್ಲಪ್ಪ, ಶರೀಫ್, ಖಾಜಾ ಹುಸೇನಪ್ಪ, ಬಸವರಾಜ ಚಿಂಚೋಡಿ, ಹನುಮಂತ ದೊಡ್ಡಮನಿ, ಶಾಂತಪ್ಪ ಗಾಣಧಾಳ, ಹನುಮಂತ ಗುರಿಕಾರ ಮತ್ತು ಇತರರು ಇದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X