ಬೀದರ್‌ | ಚಾಲಕನ ನಿಯಂತ್ರಣ ತಪ್ಪಿ ಆಟೊ ಪಲ್ಟಿ : ಓರ್ವ ಸಾವು

Date:

Advertisements

ಚಾಲಕನ ನಿಯಂತ್ರಣ ತಪ್ಪಿ ಆಟೊ ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೀದರ್‌ ತಾಲ್ಲೂಕಿನ ಮರಖಲ್ ಗ್ರಾಮ ಹೊರವಲಯದ ರಾಷ್ಟ್ರೀಯ ಹೆದ್ದಾರಿ-161ಎ ರಲ್ಲಿ ಗುರುವಾರ ನಡೆದಿದೆ.

ಔರಾದ್‌ ತಾಲ್ಲೂಕಿನ ಬಲ್ಲೂರ(ಜೆ) ಗ್ರಾಮದ ರಾಜಕುಮಾರ್‌ ಉದಗೀರೆ (58) ಮೃತರು. ಮೃತರಿಗೆ ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರಿದ್ದಾರೆ.

ರಾಜಕುಮಾರ್‌ ಅವರು ಗುರುವಾರ ಬೆಳಿಗ್ಗೆ ಅದೇ ಗ್ರಾಮದ ಆಟೊದಲ್ಲಿ ಬೀದರ್‌ ಕಡೆಗೆ ತೆರಳುತ್ತಿದ್ದರು. ವೇಗವಾಗಿ ಚಲಿಸುತ್ತಿದ್ದ ಆಟೊ ಟ್ರ್ಯಾಕ್ಟರ್‌ಗೆ ಹಿಂದಿಕ್ಕುವ ಭರದಲ್ಲಿ ಪಲ್ಟಿಯಾಗಿದೆ. ಚಾಲಕನ ಪಕ್ಕ ಮುಂದೆ ಕುಳಿತಿದ್ದ ರಾಜಕುಮಾರ್‌ ಅವರ ತಲೆಗೆ ಪೆಟ್ಟು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸೆರೆಳೆದಿದ್ದಾರೆ. ಆಟೊ ಚಾಲಕ ಸೇರಿ ಆಟೊದಲ್ಲಿದ್ದ ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Advertisements

ಈ ಕುರಿತು ಜನವಾಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X