ಗುಬ್ಬಿ | ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಫೆ.24 ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

Date:

Advertisements

ಅಸಮರ್ಪಕ ವಿದ್ಯುತ್ ಸರಬರಾಜು ಮಾಡುತ್ತಿರುವ ಕಾರಣ ಕೃಷಿಕ ವರ್ಗ ಬೇಸತ್ತಿದೆ. ನಿಗದಿತ ವಿದ್ಯುತ್ ಪೂರೈಕೆ ಮಾಡುವಂತೆ ಹಾಗೂ ಕೃಷಿಕ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸುವ ಕೇಂದ್ರ ಸರ್ಕಾರದ ನಿರ್ಧಾರ ಕೈಬಿಡುವಂತೆ ಆಗ್ರಹಿಸಿ ರೈತ ಸಂಘ ಗುಬ್ಬಿ ಬೆಸ್ಕಾಂ ಕಚೇರಿ ಮುಂದೆ ಬೃಹತ್ ಪ್ರತಿಭಟನೆಯನ್ನು ಫೆ.24 ರಂದು ನಡೆಸಲಿದೆ. ತಾಲ್ಲೂಕಿನ ಎಲ್ಲಾ ರೈತರು ಆಗಮಿಸಲು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದರು.

ಗುಬ್ಬಿ ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೇಂದ್ರ ಸರ್ಕಾರ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಿ ಮೀಟರ್ ಅಳವಡಿಸುವ ಚಿಂತನೆ ಸರಿಯಲ್ಲ. ಇತ್ತ ಕೊಟ್ಟ ಮಾತಿನಂತೆ ರಾಜ್ಯ ಸರ್ಕಾರ ಏಳು ಗಂಟೆ ತ್ರೀ ಫೇಸ್ ಕರೆಂಟ್ ಕೊಡುವ ಮಾತು ಹುಸಿಯಾಗಿದೆ. ದಿನಕ್ಕೆ ಒಂದು ತಾಸು ಕೂಡಾ ಕೊಟ್ಟಿಲ್ಲ. ರೈತರು ಹೈರಾಣಾಗಿದ್ದಾರೆ ಎಂದು ತಿಳಿಸಿದರು.

ಬೇಸಿಗೆ ಆರಂಭದಲ್ಲೇ ಕರೆಂಟ್ ಸಮಸ್ಯೆ ತಲೆದೋರಿರುವುದು ಕೃಷಿಕ ವರ್ಗಕ್ಕೆ ತೀವ್ರ ಆಘಾತ ತಂದಿದೆ. ಅಡಿಕೆ ತೆಂಗು ಬೆಳೆಗಾರರ ಸಂಕಷ್ಟ ಹೇಳುವಂತಿಲ್ಲ. ಇರುವ ಬೋರ್ ವೆಲ್ ನಲ್ಲಿ ಅಲ್ಪ ನೀರು ಬಳಸಿ ಗಿಡಗಳನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡ್ತಾ ಇರುವ ವೇಳೆಗೆ ಕರೆಂಟ್ ಕೈ ಕೊಟ್ಟಿದೆ. ದಿನಕ್ಕೆ ಒಂದು ತಾಸು ತ್ರೀ ಫೇಸ್ ಕರೆಂಟ್ ಸಿಗುತ್ತಿಲ್ಲ. ಈ ಸಮಸ್ಯೆ ಜೊತೆ ಸಿಂಗಲ್ ಫೇಸ್ ಕರೆಂಟ್ ಕೂಡಾ ನೀಡುತ್ತಿಲ್ಲ. ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳ ಪಾಡು ಹೇಳತೀರದು. ಇಷ್ಟೆಲ್ಲಾ ಸಮಸ್ಯೆ ಕೇಳೋಣ ಅಂದ್ರೆ ಬೆಸ್ಕಾಂ ಅಧಿಕಾರಿಗಳು ಕೈಗೆ ಸಿಗುವುದಿಲ್ಲ. ಪೋನ್ ಕರೆ ಮಾಡಿದರೆ ಪಿಕ್ ಮಾಡೋಲ್ಲ. ನಾಲ್ಕೈದು ಬಾರಿ ಕರೆ ಮಾಡಿದರೆ ಪೋನ್ ಆಫ್ ಆಗುತ್ತದೆ ಎಂದು ಕಿಡಿಕಾರಿದರು.

Advertisements

ಇಷ್ಟೆಲ್ಲಾ ಸಮಸ್ಯೆಗೆ ಉತ್ತರ ನೀಡಬೇಕಾದ ಸರ್ಕಾರ ಜಾಣ ಮೌನ ವಹಿಸಿದೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಸಮಸ್ಯೆ ಬಗೆಹರಿಸಲು ಬೃಹತ್ ರೈತರ ಹೋರಾಟ ಹಮ್ಮಿಕೊಳ್ಳಲಾಗಿದೆ. ಈ ಹೋರಾಟಕ್ಕೆ ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ಇಲಾಖೆಯ ಎಸ್ಇ, ಇಇ ಹಾಗೂ ಎಇಇ ಸ್ಥಳಕ್ಕೆ ಆಗಮಿಸಿ ಸೂಕ್ತ ಪರಿಹಾರ ಕೊಡುವವರೆವಿಗೂ ಪ್ರತಿಭಟನೆ ಮುಗಿಸುವುದಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತ ರೂಪದಲ್ಲಿ ತಿಳಿಸಲಾಗಿದೆ. ತಾಲ್ಲೂಕಿನ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿ ಉತ್ತರ ಸಿಗುವವರೆಗೂ ಹೋರಾಟದಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X