ಚಿಕ್ಕಬಳ್ಳಾಪುರ | ಬಿ – ಖಾತೆ ಅಭಿಯಾನಕ್ಕೆ ಶಾಸಕ ಪ್ರದೀಪ್‌ ಈಶ್ವರ್‌ ಚಾಲನೆ; ಮೊದಲ ದಿನ 716 ಅರ್ಜಿಗಳು ಸ್ವೀಕಾರ

Date:

Advertisements

ಬಹುವರ್ಷಗಳ ಬೇಡಿಕೆಯಾಗಿದ್ದ ಅನಧಿಕೃತ ಆಸ್ತಿಗಳಿಗೆ ಖಾತೆ ನೀಡುವ ಕಾನೂನಾತ್ಮಕ ಬಿ-ಖಾತೆ ಅಭಿಯಾನಕ್ಕೆ ಚಿಕ್ಕಬಳ್ಳಾಪುರ ನಗರ ಶಾಸಕ ಪ್ರದೀಪ್‌ ಈಶ್ವರ್‌ ನಗರದ 7ನೇ ವಾರ್ಡಿನಲ್ಲಿ ಗುರುವಾರ ಸಾರ್ವಜನಿಕರ ಅರ್ಜಿ ಸ್ವೀಕರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಅರ್ಜಿ ಸ್ವೀಕರಿಸಿ ಬಳಿಕ ಮಾತನಾಡಿದ ಶಾಸಕರು, ಭ್ರಷ್ಟಾಚಾರ ಮತ್ತು ದಲ್ಲಾಳಿಗಳ ಹಾವಳಿಯನ್ನು ತಪ್ಪಿಸಬೇಕೆಂಬ ಸದುದ್ದೇಶದಿಂದ ನಗರದ ಪ್ರತಿ ವಾರ್ಡ್‌ಗಳಲ್ಲೂ ಕೌಂಟರ್ ತೆರೆಯಲಾಗಿದೆ. ನಾಗರಿಕರು ಯಾರಿಗೂ ಹಣ ನೀಡುವ ಅಗತ್ಯವಿಲ್ಲ. ನಾಗರಿಕರು ತಮ್ಮ ಬಳಿಯಿರುವ ಸ್ವತ್ತಿನ ದಾಖಲೆಗಳನ್ನು ಒದಗಿಸಿ ಕಾನೂನಾತ್ಮಕವಾದ ಬಿ-ಖಾತೆ ದಾಖಲೆಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.

ನಗರ ನಿವಾಸಿಗಳ ಹತ್ತಾರು ವರ್ಷಗಳ ಬೇಡಿಕೆಯಾಗಿದ್ದ ಖಾತೆ ಕನಸಿಗೆ ರಾಜ್ಯ ಸರಕಾರ ಹಸಿರು ನಿಶಾನೆ ತೋರಿದ್ದು, ಸಾರ್ವಜನಿಕರು ಅಭಿಯಾನವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

Advertisements

ಯಾರಾದರೂ ಬಡವರು ಕಂದಾಯ ಕಟ್ಟಲು ಸಾಧ್ಯವಾಗದಿದ್ದಲ್ಲಿ ಅಂತವರಿಗೆ ಆಯಾ ವಾರ್ಡಿನ ಸದಸ್ಯರೇ ಕಂದಾಯ ಕಟ್ಟುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಖಾತೆ ಅಭಿಯಾನಕ್ಕೆ ಮೂರು ಪಕ್ಷದವರು ಸಹಕರಿಸಿದ್ದು, ಎಲ್ಲರಿಗೂ ಅಭಿನಂದನೆಗಳು. ಅಭಿಯಾನ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ. ದಲ್ಲಾಳಿಗಳಿಗೆ ಬ್ರೇಕ್ ಹಾಕೋಣ ಎಂದರು.

ಡಿವೈನ್‌ ಸಿಟಿ ಬಡಾವಣೆ ಮುಖಂಡರ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ಮಾಡಿ ಅಲ್ಲಿನ ಅಧಿಕೃತ ಆಸ್ತಿಗಳಿಗೆ ಖಾತೆ ಮಾಡಿಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮೊದಲ ದಿನ 716 ಅರ್ಜಿಗಳು ಸ್ವೀಕಾರ :
ಬಿ-ಖಾತೆ ಅಭಿಯಾನದ ಮೊದಲ ದಿನವಾದ ಇಂದು ನಗರದ 31 ವಾರ್ಡ್‌ಗಳ ಪೈಕಿ ಒಟ್ಟು 716 ಅರ್ಜಿಗಳು ಸ್ವೀಕಾರವಾಗಿದ್ದು, ಫೆ.22ರವರೆಗೆ ಅಭಿಯಾನ ನಡೆಯಲಿದೆ. ಅವಶ್ಯಕತೆಗೆ ಅನುಗುಣವಾಗಿ ಅಭಿಯಾನವನ್ನು ಮುಂದುವರಿಸಲಾಗುವುದು ಎಂದು ನಗರಸಭೆ ಆಯುಕ್ತ ಮನ್ಸೂರ್‌ ಅಲಿ ಹೇಳಿದ್ದಾರೆ.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ರೈಲಿನಲ್ಲಿ ಗಾಂಜಾ ತಂದಿದ್ದ ಕುಟುಂಬ ಬಂಧನ; 17.5ಲಕ್ಷ ಮೌಲ್ಯದ ಗಾಂಜಾ ವಶ

ಈ ವೇಳೆ ನಗರಸಭೆ ಆಯುಕ್ತ ಮನ್ಸೂರ್‌ ಅಲಿ ಹಾಗೂ ಇತರೆ ಕಾಂಗ್ರೆಸ್‌ ಕಾರ್ಯಕರ್ತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

Download Eedina App Android / iOS

X