ರಾಯಚೂರು | ಘನತ್ಯಾಜ್ಯ ಸಂಗ್ರಹ ಘಟಕ ಸ್ಥಳಾಂತರಕ್ಕೆ ಸಿಪಿಐಎಂಎಲ್ ಒತ್ತಾಯ

Date:

Advertisements

‌ಜನನಿಬಿಡ ಸ್ಥಳದಲ್ಲಿರುವ ಸಿಂಧನೂರು ಘನತ್ಯಾಜ್ಯ ಸಂಗ್ರಹ ಘಟಕವನ್ನು ಬೇರೆಡೆಗೆ ಸ್ಥಳಾಂತರ ಮಾಡಿ, ಜನರ ಜೀವ, ಬೆಳೆ ಮತ್ತು ಪರಿಸರ ಕಾಪಾಡಬೇಕೆಂದು ಒತ್ತಾಯಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ತಾಲೂಕು ಘಟಕವು ಜಿಲ್ಲಾಧಿಕಾರಿ ನಿತೀಶ್ ಕೆ ಅವರಿಗೆ ಮನವಿ ಸಲ್ಲಿಸಿತು.

“ಸಿಂಧನೂರು ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಜನಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಘನತ್ಯಾಜ್ಯ ಕೂಡಾ ವರ್ಷದಿಂದ ವರ್ಷಕ್ಕೆ ದುಪ್ಪಟ್ಟಾಗುತ್ತಿದೆ. ಮಲ್ಲಾಪುರ-ದೇವರಗುಡಿ ರಸ್ತೆಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಸ್ಟೋರೇಜ್ ಶೆಡ್ ಗೆ ಅವೈಜ್ಞಾನಿಕವಾಗಿ ಕಸ ಎಸೆಯಲಾಗುತ್ತಿದೆ. ನಗರದಿಂದ 15 ಕೀಮಿ ದೂರದಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣ ಮಾಡಬೇಕೆಂಬ ನಿಯಮವಿದ್ದರೂ ಉಲ್ಲಂಘನೆ ಮಾಡಲಾಗಿದೆ. ಕೂಡಲೇ ಕಸ ವಿಲೇವಾರಿ ಘಟಕದ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು” ಎಂದು ಸಿಪಿಐಎಂಎಲ್‌ ಮುಖಂಡರು ಆಗ್ರಹಿಸಿದರು.

“ದಟ್ಟವಾದ ಕಲುಷಿತ ಗಾಳಿಯು ಜನರ ಆರೋಗ್ಯದ ಮೇಲೆ ಪರಿಸರದ ಜೀವ ಸಂಕುಲದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಇದಕ್ಕೆಲ್ಲಾ ನಗರಸಭೆಯೇ ನೇರವಾಗಿ ಹೊಣೆಯಾಗಲಿದೆ. ವಿಷದ ಗಾಳಿಯಿಂದ ಬಾಧಿತರಾದ ಜನರ ಆರೋಗ್ಯದ ವೆಚ್ಚವನ್ನು ಹಾಗೂ ಬೆಳೆ ನಷ್ಟವನ್ನು ನಗರಸಭೆಯವರೇ ಭರಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಮಾಜಿ ಶಾಸಕನ ಬೆಂಬಲಿಗರಿಂದ ದೌರ್ಜನ್ಯ; ದಯಾಮರಣ ಕೋರಿ ಧರಣಿ ಕುಳಿತ ಕುಟುಂಬ

ಈ ವೇಳೆ ಎಂ.ಗಂಗಾಧರ, ವೆಂಕನಗೌಡ ಮಲ್ಲಾಪುರ, ಅಮರೇಗೌಡ ವನಸಿರಿ ಮಲ್ಲಾಪುರ, ಪರಶುರಾಮ ಮಲ್ಲಾಪುರ ಇನ್ನಿತರರು ಹಾಜರಿದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X