ಕುಂಭಮೇಳ | ಕರ್ನಾಟಕದಿಂದ ತೆರಳಿದ್ದವರಲ್ಲಿ 20 ಮಂದಿ ಸಾವು; ಭೀಕರ ಅಪಘಾತದಲ್ಲಿ ಐವರ ದುರ್ಮರಣ

Date:

Advertisements

ಭೀಕರ ಅಪಘಾತ ಸಂಭವಿಸಿದ್ದು, ಕರ್ನಾಟಕದ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಬಳಿ ನಡೆದಿದೆ. ಮೃತರು ಬೀದರ್‌ ಜಿಲ್ಲೆಯವರು ಎಂದು ತಿಳಿದುಬಂದಿದೆ. ಕುಂಭಮೇಳದಲ್ಲಿ ಭಾಗಿಯಾಗಲು ಕರ್ನಾಟಕದಿಂದ ತೆರಳಿದ್ದವರಲ್ಲಿ ಕನಿಷ್ಠ 20 ಮಂದಿ ವಿವಿಧ ಅವಘಡಗಳಲ್ಲಿ ಸಾವನ್ನಪ್ಪಿದ್ದಾರೆ.

ಬೀದರ್‌ನ ಲಾಡಗೇರಿ ಬಡಾವಣೆಯ 14 ಮಂದಿ ಕ್ರೂಸರ್ ವಾಹನದಲ್ಲಿ ಕುಂಭಮೇಳಕ್ಕೆ ತೆರಳಿದ್ದರು. ಈ ವೇಳೆ, ವಾರಣಾಸಿಯ ಮೀರ್ಜಾಮುರತ್ ನಗರದ ಬಳಿ ತೆರಳುತ್ತಿದ್ದಾಗ, ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತ ಸಂಭವಿಸಿದೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 9 ಮಂದಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಮೃತರನ್ನು ಬೀದರ್‌ನ ಲಕ್ಷ್ಮೀ (56), ನೀಲಮ್ಮ (55), ಸಂತೋಷ್‌ಕುಮಾರ್ (42), ಸುನೀತಾ (42) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಮೃತರ ಹೆಸರು ಗೊತ್ತಾಗಿಲ್ಲ.

Advertisements

ಕುಂಭಮೇಳಕ್ಕೆ ತೆರಳಿದ್ದ ಲಾಡಗೇರಿ ಬಡಾವಣೆಯ ನಿವಾಸಿಗಳು ಪ್ರಯಾಗ್‌ರಾಜ್ ಮತ್ತು ಕಾಶಿಗೆ ಭೇಟಿ ನೀಡಿದ್ದರು. ಬಳಿಕ, ಅಯೋಧ್ಯೆಗೆ ತೆರಳುತ್ತಿದ್ದರು. ಈ ವೇಳೆ, ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಕುಂಭಮೇಳಕ್ಕಾಗಿ ಕರ್ನಾಟಕದಿಂದ ಉತ್ತರ ಪ್ರದೇಶಕ್ಕೆ ತೆರಳಿದ್ದವರಲ್ಲಿ ಈವರೆಗೆ ಸುಮಾರು 20ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿ ನಾಲ್ವರು ಸಾವನ್ನಪ್ಪಿದ್ದರು. ಪ್ರಯಾಗ್‌ರಾಜ್‌ ನಗರಕ್ಕೆ ತೆರಳಿದ್ದ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರದ ಪ್ರವೀಣ್ ಹೊಸಮನಿ ಎಂಬವರು ಗೋರಖಪುರ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ತಗುಲಿ ಸಾವನ್ನಪ್ಪಿದ್ದರು.

ಇನ್ನು, ಮೈಸೂರು ಜಿಲ್ಲೆಯ ಮಂಟಿಕ್ಯಾತನಹಳ್ಳಿ ಗ್ರಾಮದ ರಾಮಕೃಷ್ಣ ಶರ್ಮಾ ಮತ್ತು ಶ್ರೀರಂಗಪಟ್ಟನ ತಾಲೂಕಿನ ಕೆಆರ್‌ಎಸ್‌ ನಿವಾಸಿ ಅರುಣ್‌ ಶಾಸ್ತ್ರಿ ಎಂಬವರು ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದರು. ಅಲ್ಲದೆ, ಮಧ್ಯಪ್ರದೇಶದ ಇಂಧೋರ್ ಬಳಿ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ನಾಲ್ವರು ಸಾವನ್ನಪ್ಪಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X