ಅಕ್ರಮ ಹಣ ವರ್ಗಾವಣೆ | ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ನಿವಾಸದ ಮೇಲೆ ಇ.ಡಿ ದಾಳಿ

Date:

Advertisements
  • ಸೆಂಥಿಲ್ ಬಾಲಾಜಿ ಅವರ ಚೆನ್ನೈ, ಕರೂರು ನಿವಾಸಗಳ ಮೇಲೆ ಇ.ಡಿ ದಾಳಿ
  • ಮೇ 26ರಂದು ಸೆಂಥಿಲ್ ಆಪ್ತರ ನಿವಾಸಗಳ ಮೇಲೆ ದಾಳಿ ಮಾಡಿದ್ದ ಐಟಿ

ತಮಿಳುನಾಡು ವಿದ್ಯುತ್ ಇಲಾಖೆ ಸಚಿವ ವಿ. ಸೆಂಥಿಲ್ ಬಾಲಾಜಿ ಮತ್ತು ಇತರರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಮಂಗಳವಾರ (ಜೂನ್ 13) ದಾಳಿ ನಡೆಸಿದ್ದಾರೆ.

ಸೆಂಥಿಲ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಭಾಗವಾಗಿ ಇ.ಡಿ ಈ ದಾಳಿ ನಡೆಸಿದ್ದು ಶೋಧ ಆರಂಭಿಸಿದೆ.

ಸೆಂಥಿಲ್ ಅವರ ಚೆನ್ನೈ ಹಾಗೂ ಕರೂರು ನಗರಗಳಲ್ಲಿರುವ ನಿವಾಸಗಳು ಮತ್ತು ಅವರಿಗೆ ಸಂಬಂಧಿಸಿದ ಇತರ ಸ್ಥಳಗಳ ಮೇಲೆ ಇ.ಡಿ ದಾಳಿ ನಡೆಸಿದೆ.

Advertisements

ಸೆಂಥಿಲ್‌ ಬಾಲಾಜಿ ಅವರು ಹಿಂದಿನ ಎಐಎಡಿಎಂಕೆ ಸರ್ಕಾರದಲ್ಲಿ ಸಚಿವರಾಗಿದ್ದಾಗ ನಡೆದ ಉದ್ಯೋಗ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗುತ್ತಿದೆ.

‘ಉದ್ಯೋಗಕ್ಕಾಗಿ ಹಣ’ ಹಗರಣಕ್ಕೆ ಸಂಬಂಧಿಸಿ ಸೆಂಥಿಲ್ ಅವರ ವಿರುದ್ಧದ ಪ್ರಕರಣಗಳ ತನಿಖೆಗೆ ಪೊಲೀಸ್ ಮತ್ತು ಇ.ಡಿ.ಗೆ ಸುಪ್ರೀಂ ಕೋರ್ಟ್ ಕಳೆದ ತಿಂಗಳು ಅನುಮತಿ ನೀಡಿತ್ತು.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ನಿಬಂಧನೆಗಳ ಅಡಿಯಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆದಾಯ ತೆರಿಗೆ ಇಲಾಖೆಯು (ಐಟಿ) ತಮಿಳುನಾಡಿನಲ್ಲಿ ಮೇ 26 ರಂದು ಸೆಂಥಿಲ್ ಬಾಲಾಜಿ ಅವರ ಆಪ್ತರ ಮನೆಗಳ ಮೇಲೆ ದಾಳಿ ನಡೆಸಿತ್ತು.

ಈ ಸುದ್ದಿ ಓದಿದ್ದೀರಾ? ಗೋಡ್ಸೆ ಭಾರತದ ಸುಪುತ್ರ ಎನ್ನಲು ಬಿಜೆಪಿಯವರಿಗೆ ನಾಚಿಕೆಯಾಗಬೇಕು: ಭೂಪೇಶ್ ಬಘೇಲ್ ಟೀಕೆ

ಈ ವೇಳೆ ಆದಾಯ ತೆರಿಗೆ ಇಲಾಖೆಯು ವಿದ್ಯುತ್ ಸಚಿವ ಸೆಂಥಿಲ್ ಅವರ ಜೊತೆಗೆ ಸಂಪರ್ಕ ಹೊಂದಿದ ನಾನಾ ಸರ್ಕಾರಿ ಗುತ್ತಿಗೆದಾರರ ನಿವಾಸಗಳು ಹಾಗೂ ಕಚೇರಿಗಳು ಸೇರಿ ರಾಜ್ಯದ 40 ಸ್ಥಳಗಳಲ್ಲಿ ದಾಳಿ ಮಾಡಿತ್ತು.

ಕರೂರಿನಲ್ಲಿರುವ ಸೆಂಥಿಲ್ ಬಾಲಾಜಿ ಅವರ ಸಹೋದರನ ನಿವಾಸದ ಮೇಲೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ತಮ್ಮ ನಿವಾಸದ ಮೇಲಿನ ಐಟಿ ದಾಳಿ ವದಂತಿಯನ್ನು ಸೆಂಥಿಲ್‌ ಅವರು ತಳ್ಳಿ ಹಾಕಿದ್ದರು. ತಮ್ಮ ಆಪ್ತರಿಗೆ ಅಧಿಕಾರಿಗಳಿಗೆ ಸಹಕರಿಸುವಂತೆ ಮನವಿ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X