ಬೆಂಗಳೂರು | ಕನ್ನಡೇತರರಿಗಾಗಿ ಉಚಿತ ಕನ್ನಡ ಕಲಿಕಾ ಕೇಂದ್ರ ಆರಂಭ

Date:

Advertisements

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಾಯದೊಂದಿಗೆ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಹೊಸ ಉಚಿತ ಕನ್ನಡ ಕಲಿಕಾ ಕೇಂದ್ರ ಪ್ರಾರಂಭಿಸಿಲಾಗಿದೆ.

ಕೇಂದ್ರವು 3 ತಿಂಗಳ ಕೋರ್ಸ್‌ನಲ್ಲಿ ಒಟ್ಟು 36 ಗಂಟೆಗಳ ಅವಧಿಯ ಕಲಿಕಾ ತರಗತಿಗಳನ್ನು ನಡೆಸಿ, ಭಾಗವಹಿಸುವವರಲ್ಲಿ ಕನ್ನಡದಲ್ಲಿ ಮಾತನಾಡುವ, ಓದುವ ಮತ್ತು ಬರೆಯುವ ಕೌಶಲ್ಯವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ.

ಕಲಿಯುವವರ ಅನುಕೂಲಕ್ಕೆ ಅನುಗುಣವಾಗಿ ತರಗತಿ ಸಮಯವನ್ನು ನಿಗದಿಪಡಿಸಲಾಗಿದೆ. ವಾರಕ್ಕೆ ಮೂರು ಗಂಟೆಗಳ ಕಾಲ ತರಗತಿ ನಿಗದಿಪಡಿಸಲಾಗಿದ್ದು, ಅಗತ್ಯವಿದ್ದರೆ ಅವಧಿಯನ್ನು ವಿಸ್ತರಿಸಬಹುದು. ಕೋರ್ಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದವರಿಗೆ ಕರ್ನಾಟಕ ಸರ್ಕಾರ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರಮಾಣಪತ್ರ ದೊರೆಯುತ್ತದೆ. ಒಂದು ತರಗತಿಯಲ್ಲಿ 30 ಜನರನ್ನು ಮಾತ್ರ ನಿಗದಿಪಡಿಸಲಾಗಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಹೊಸ ತರಗತಿಯು ಪ್ರಾರಂಭವಾಗುತ್ತವೆ.

Advertisements
WhatsApp Image 2025 02 21 at 11.07.26 AM

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರೊ. ನಿರಂಜನರಾಧ್ಯ ವಿ ಪಿ ಕನ್ನಡ ಕಲಿಕಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. “ನಮ್ಮ ಮಾತೃಭಾಷೆಯ ಮೂಲಕವೇ ಎರಡನೇ ಭಾಷೆಯನ್ನು ಕಲಿಯಬೇಕು. ಭಾಷೆಯ ಬಗ್ಗೆ ಅಭಿಮಾನವಿರಲಿ, ಆದರೆ ದುರಭಿಮಾನ ಬೇಡ. ಭಾಷೆಯನ್ನು ಸಹಕಾರ ಸಾಮರಸ್ಯದ ಮೂಲಕ ಕಲಿಯಬೇಕೇ ಹೊರತು ಸಂಘರ್ಷ ಅಥವಾ ಭಯದಿಂದಲ್ಲ. ಕನ್ನಡದ ನೆಲದಲ್ಲಿ ಎಲ್ಲವನ್ನೂ ಪಡೆವ ಕನ್ನಡೇತರರು, ಕನ್ನಡ ಕಲಿತು ಕನ್ನಡಿಗರ ಜೊತೆ ಶಾಂತಿಯುತ ಸಹಬಾಳ್ವೆ ನಡೆಸಲು ಹಿಂದೇಟು ಹಾಕಬಾರದು. ಕನ್ನಡಿಗರ ಶಾಂತಿ ಸಂಯಮವನ್ನು ಅರಿತು ನಡೆಯಬೇಕು” ಎಂದರು.

ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಮಲಯಾಳಂ ಮಿಷನ್ ಕರ್ನಾಟಕದ ಅಧ್ಯಕ್ಷ ಕೆ. ದಾಮೋದರನ್, ಟಾಮಿ ಜೆ. ಅಲುಂಕಲ್, ನ್ಯಾಯವಾದಿ ಬುಶ್ರ ವಲಪ್ಪಿಲ್, ಆರ್ಟ್ ಆಫ್ ಲಿವಿಂಗ್‌ನ ಆರ್ ಶ್ರೀನಿವಾಸ್, ಪ್ರವಾಸಿ ಮಲಯಾಳಿ ಅಸೋಸಿಯೇಷನ್ ​​ವೈಟ್‌ಫೀಲ್ಡ್ ಅಧ್ಯಕ್ಷ ರಮೇಶ್ ಕುಮಾರ್ ವಿ, ಕಾರ್ಯದರ್ಶಿ ರಾಗೇಶ್ ಪಿ, ಸಂತೋಷ್ ಕುಮಾರ್, ಕೇರಳ ಸಮಾಜ ವೈಟ್‌ಫೀಲ್ಡ್ ಜೋನ್ ಸಂಚಾಲಕ ಸುರೇಶ್ ಕುಮಾರ್ ಭಾಗವಹಿಸಿದ್ದರು.

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ಮಧ್ಯರಾತ್ರಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಮೂವರ ಬಂಧನ

ಕರ್ನಾಟಕ ಸರ್ಕಾರದಿಂದ ವಿಶೇಷ ತರಬೇತಿ ಪಡೆದಿರುವ ಡಾ. ಸುಷ್ಮಾ ಶಂಕರ್ ತರಗತಿಗಳನ್ನು ಮುನ್ನಡೆಸಲಿದ್ದಾರೆ.
ತರಬೇತಿ ಪಡೆದ ಪ್ರೊ. ರಾಕೇಶ್ ವಿ.ಎಸ್ ಮತ್ತು ರೆಬಿನ್ ರವೀಂದ್ರನ್ ತರಗತಿಗಳನ್ನು ನಡೆಸಲಿದ್ದಾರೆ ಎಂದು ಕಲಿಕಾ ಕೇಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X