ಬೆಂಗಳೂರಿನ ಅಭಿವೃದ್ಧಿ ಸೊನ್ನೆ, ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರಕ್ಕೆ ಆರ್‌ ಅಶೋಕ್‌ ಒತ್ತಾಯ

Date:

Advertisements

ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ತಿಳಿಸಿದರು.

ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ನಡೆದ, ಬಿಜೆಪಿ ಶಾಸಕರು, ಮುಖಂಡರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಆದಷ್ಟು ಬೇಗ ಚುನಾವಣೆ ನಡೆಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಈ ಸಂಬಂಧ ನ್ಯಾಯಾಲಯದಲ್ಲಿ ವಾದ ಮಾಡಲು 15 ತಜ್ಞರ ತಂಡವನ್ನು ರಚಿಸಲಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನ ಅಭಿವೃದ್ಧಿ ಸೊನ್ನೆಯಾಗಿದೆ. ರಸ್ತೆಗುಂಡಿಗಳ ಆಕಾರ ಸೊನ್ನೆಯಾಗಿರುವಂತೆಯೇ ಅಭಿವೃದ್ಧಿಯೂ ಸೊನ್ನೆಯೇ ಆಗಿದೆ. ರಸ್ತೆಗುಂಡಿಗಳಿಂದ ಬಿದ್ದು ಗಾಯಕ್ಕೊಳಗಾಗಿ ಜನರು ಆಸ್ಪತ್ರೆ ಸೇರುತ್ತಿದ್ದಾರೆ. ಎಲ್ಲ ಕಡೆ ಕಸದ ರಾಶಿ ಕಂಡುಬರುತ್ತಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗ ಹಿಮಾಲಯದ ಶಿಖರದಂತೆ ನಗರದ ಅಭಿವೃದ್ಧಿಯನ್ನು ಬ್ರ್ಯಾಂಡ್‌ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದರು. ಈಗ ಅವರೇ ಬೆಂಗಳೂರನ್ನು ಉದ್ಧಾರ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದರ ವಿರುದ್ಧ ಹೋರಾಟ ರೂಪಿಸಲು ಸಭೆ ನಡೆಸಲಾಗಿದೆ ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ವಿಳಂಬ, ನಜೀರ್ ಸಾಬ್‌ರಿಗೆ ಬಗೆದ ದ್ರೋಹವಲ್ಲವೇ?

ಬಿಬಿಎಂಪಿ ಚುನಾವಣೆ ನಡೆಸುವ ಮನಸ್ಸಿಲ್ಲದ ಸರ್ಕಾರ, ಗ್ರೇಟರ್‌ ಬೆಂಗಳೂರು ರಚಿಸುತ್ತೇವೆ, ಇನ್ನಷ್ಟು ಪ್ರದೇಶಗಳನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದು ಹೇಳುತ್ತಿದೆ. ಇರುವ ನಗರವನ್ನೇ ಸುಧಾರಣೆ ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಇನ್ನು ಹೊಸ ಪ್ರದೇಶಗಳ ಅಭಿವೃದ್ಧಿ ಹೇಗೆ ಸಾಧ್ಯ? ಬೆಂಗಳೂರನ್ನು ಒಡೆದರೆ ನಾಡಪ್ರಭು ಕೆಂಪೇಗೌಡರಿಗೆ ಅಪಮಾನ ಮಾಡಿದಂತಾಗುತ್ತದೆ. ಕೆಂಪೇಗೌಡರನ್ನು ನಂಬುವ ಜನರ ಮನಸ್ಸಿಗೆ ನೋವಾಗುತ್ತದೆ ಎಂದರು.

ಈಗ 198 ವಾರ್ಡ್‌ಗಳಿಗೆ ಚುನಾವಣೆ ನಡೆಸಿದರೆ ಸಾಕು. ರಸ್ತೆ ಮೇಲ್ಭಾಗದಲ್ಲೇ ಸುರಂಗ ನಿರ್ಮಾಣವಾಗುತ್ತಿರುವಾಗ 150 ಅಡಿ ಕೆಳಗೆ ಸುರಂಗ ಕೊರೆಯಲು ಹೊರಟಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಗಳಿಂದ ಜನರು ರೊಚ್ಚಿಗೆದ್ದಿದ್ದಾರೆ. ಬೆಂಗಳೂರು ಇಂದು ಸರಿಹೋಗಲಿದೆ ಎಂದು ಜನರು ಕಾಯುತ್ತಿದ್ದಾರೆ. ಬೆಂಗಳೂರಿಗೆ ಬೆಂಗಳೂರಿನವರೇ ಆದ ಸಚಿವರಿಲ್ಲ. ಬೇರೆ ಜಿಲ್ಲೆಯ ಸಚಿವರಿಗೆ ನಗರದ ಬಗ್ಗೆ ಆಸಕ್ತಿ ಇಲ್ಲ. ಸರ್ಕಾರದಿಂದಾಗಿ ಬೆಂಗಳೂರು ಅನಾಥವಾಗಿದೆ ಎಂದು ದೂರಿದರು.

ಬೆಂಗಳೂರು ಮಾಫಿಯಾಗಳ ಕೈಗೆ ಸಿಲುಕಿದೆ. ಡಾನ್‌ಗಳ ಕೈಗೆ ಸಿಕ್ಕಿದೆ. ಮೈಸೂರು ಗಲಭೆ, ಬೆಂಗಳೂರಿನ ಬಾಂಬ್‌ ಬ್ಲಾಸ್ಟ್‌, ಅತ್ಯಾಚಾರ ಮೊದಲಾದ ಅಪರಾಧಿ ಚಟುವಟಿಕೆ ನಡೆಯುತ್ತಿದೆ. ಜನರೇ ಸ್ವತಃ ಆತ್ಮರಕ್ಷಣೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ. ಕಾಂಗ್ರೆಸ್‌ ನಾಯಕರು ಇನ್ನೂ ಗ್ಯಾರಂಟಿಗಳ ಗುಂಗಿನಲ್ಲೇ ಇದ್ದಾರೆ. ಕೊಲೆ, ಸುಲಿಗೆ ನಿರಂತರವಾಗಿದ್ದು, ಈ ಸರ್ಕಾರ ತೊಲಗಿದರೆ ಸಾಕು ಎಂದು ಜನರು ಹೇಳುತ್ತಿದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಜವಾಬ್ದಾರಿ ವಹಿಸಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೇವರ ಮೊರೆ ಹೋಗಿ, ನಗರವನ್ನು ದೇವರಿಗೆ ಅರ್ಪಣೆ ಮಾಡಿದ್ದಾರೆ. ರಾಜಧಾನಿಯನ್ನು ದೇವರೇ ಕಾಪಾಡಬೇಕಿದೆ. ಬೆಂಗಳೂರಿನ ಉಸ್ತುವಾರಿಯನ್ನು ಯಾರಾದರೂ ವಹಿಸಲಿ. ಆದರೆ ಬೆಂಗಳೂರನ್ನು ಉದ್ಧಾರ ಮಾಡುವವರು, ನಗರದ ಬಗ್ಗೆ ಜ್ಞಾನ ಇರುವವರು ಸಚಿವರಾಗಲಿ ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X