5 ವರ್ಷಗಳ ಕಾಲ ಅಲೆದಾಡಿಸಿ ಕೊನೆಗೂ 18.47 ಕೋಟಿ ರೂ. ಭೂ ಪರಿಹಾರ ಬಿಡುಗಡೆ ಮಾಡಿದ ಕೆಐಎಡಿಬಿ

Date:

Advertisements

ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಟಯೋಟ ಕಾರ್ಖಾನೆ ಸ್ಥಾಪನೆಗಾಗಿ ಭೂಮಿ ನೀಡಿ ಭೂ ಪರಿಹಾರಕ್ಕಾಗಿ 25 ವರ್ಷಗಳ ಕಾಲ ಅಲೆದಾಡಿದ್ದ ವಯೋವೃದ್ಧರಿಗೆ ಕೊನೆಗೂ ಕೆಐಎಡಿಬಿ ಪರಿಹಾರ ಮಂಜೂರು ಮಾಡಿದೆ.

ಆದರೆ ಪರಿಹಾರದ ಸವಿಯುಣ್ಣಬೇಕಿದ್ದ ರೈತರಲ್ಲಿ ಇದೀಗ ಬದುಕುಳಿದಿರುವುದು ಕೇವಲ ಇಬ್ಬರು ಮಾತ್ರ. ಪರಿಹಾರದ ಕನಸಿನೊಂದಿಗೆ ಉಳಿದವರು ಮಣ್ಣಾಗಿದ್ದಾರೆ. 84 ವರ್ಷದ ಬೋಜ ತಿಮ್ಮಯ್ಯ, 81 ವರ್ಷದ ಪತ್ತಿ ಕುಮಾರಸ್ವಾಮಿ ಜೀವಂತವಾಗಿದ್ದಾರೆ. ಪರಿಹಾರಕ್ಕಾಗಿ ಪರಿತಪಿಸಿ ಇಹಲೋಕ ತ್ಯಜಿಸಿದ ಕೃಷಿಕ ಸ್ನೇಹಿತರನ್ನು ನೆನೆದು ಇಂದು ಕೆಐಎಡಿಬಿ ಕಚೇರಿಗೆ ಬಂದಿದ್ದ ಈ ವಯೋವೃದ್ಧರು ಗದ್ಗದಿತರಾದರು.

ಹೈಕೋರ್ಟ್, ಸುಪ್ರೀಂ ಕೋರ್ಟ್ ಒಳಗೊಂಡಂತೆ ಬಹುತೇಕ ಎಲ್ಲ ನ್ಯಾಯಾಲಯಗಳು ತಕ್ಷಣವೇ ಪರಿಹಾರ ನೀಡುವಂತೆ ನೀಡಿದ ಆದೇಶಗಳಿಗೆ ಕೆಐಎಡಿಬಿ ಈವರೆಗೆ ಕ್ಯಾರೆ ಎಂದಿರಲಿಲ್ಲ. ಕೆಐಎಡಿಬಿ ಜಪ್ತಿ ಆದೇಶ ನೀಡುತ್ತಿದ್ದಂತೆ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಪರಿಹಾರ ಬಿಡುಗಡೆ ಮಾಡಿದೆ.

Advertisements

ಪರಿಹಾರ ನೀಡುವಂತೆ ರಾಮನಗರ ಜಿಲ್ಲಾ ನ್ಯಾಯಾಲಯ, ಹೈಕೋರ್ಟ್, ಸುಪ್ರೀಂಗಳು ನೀಡಿದ ಆದೇಶಗಳು ಜಾರಿಯಾಗಿರಲಿಲ್ಲ. ಎರಡು ತಿಂಗಳ ಹಿಂದೆ ಸುಪ್ರೀಂ ಕೋರ್ಟ್ ಮತ್ತೊಮ್ಮೆ ಖಡಕ್ ಆದೇಶ ನೀಡಿ ಎರಡು ತಿಂಗಳೊಳಗಾಗಿ ಪರಿಹಾರದ ಮೊತ್ತವನ್ನು ನ್ಯಾಯಾಲಯದಲ್ಲಿ ಠೇವಣಿ ಇಡುವಂತೆ ಸೂಚಿಸಿತ್ತು. ಪರಿಹಾರ ವಿಳಂಬವಾದ ಕಾರಣ ಮಹಾರಾಣಿ ಕಾಲೇಜು ಪಕ್ಕದಲ್ಲಿರುವ ಕೆಐಎಡಿಬಿ ಕಚೇರಿಯನ್ನು ಜಪ್ತಿ ಮಾಡುವಂತೆ ಆದೇಶಿಸಿತ್ತು.

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಸೊಕ್ಕು-ಸರ್ವಾಧಿಕಾರ-ಮೆದು ಹಿಂದುತ್ವದ ದಾರಿಯನ್ನು ತೊರೆಯುವರೇ ಕೇಜ್ರೀವಾಲ್?

ಇಂದು ಕೋರ್ಟ್ ಅಮೀನ್ ಅವರ ಜೊತೆ ಬಿಡದಿ ರೈತರು ಕಚೇರಿ ಜಪ್ತಿಗೆ ಮುಂದಾದಾಗ 38 ರೈತರಿಗೆ 18.47 ಕೋಟಿ ರೂಪಾಯಿ ಪರಿಹಾರವನ್ನು ನ್ಯಾಯಾಲಯದಲ್ಲಿ ಠೇವಣಿ ಇಟ್ಟಿರುವುದಾಗಿ ದಾಖಲೆಗಳನ್ನು ಒದಗಿಸಿದರು. ಇದರಿಂದ ಕಚೇರಿ ಜಪ್ತಿ ಮಾಡಲು ಮುಂದಾಗಿದ್ದ ರೈತರು ಕೆಐಎಡಿಬಿ ಆದೇಶ ಪ್ರತಿ ಪಡೆದು ವಾಪಸ್ ಆದರು.

ರೈತರಿಗೆ ಪರಿಹಾರ ಒದಗಿಸಲೇಬೇಕೆಂದು ಹಠತೊಟ್ಟು ಎರಡೂವರೆ ದಶಕಗಳಿಂದ ತ್ರಿವಿಕ್ರಮನಂತೆ ಹೋರಾಟ ನಡೆಸಿದ್ದ ಕೋಟೆ ಶಿವಣ್ಣ 8 ತಿಂಗಳ ಹಿಂದೆ ಮೃತಪಟ್ಟಿದ್ದರು. ಅವರ ಪುತ್ರ ಗಿರೀಶ್ ಶಿವಣ್ಣ ಇದೀಗ ಹೋರಾಟದ ನೇತೃತ್ವ ವಹಿಸಿಕೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಗಿರೀಶ್ ಶಿವಣ್ಣ, ನಮ್ಮ ತಂದೆ ಬದುಕಿದ್ದಾಗ ಪರಿಹಾರದ ಹಣ ದೊರೆತಿದ್ದರೆ ಹೋರಾಟ ಸಾರ್ಥಕವಾಗುತ್ತಿತ್ತು. ಹೃದಯ ಶೂನ್ಯ ಅಧಿಕಾರಿಗಳು ಮತ್ತು ಹೃದಯಹೀನ ಸರ್ಕಾರ ಪರಿಹಾರ ನೀಡುವುದನ್ನು ವಿಳಂಬ ಮಾಡಿದೆ ಎಂದರು.

ಕೆಐಎಡಿಬಿ 1998 ರಲ್ಲಿ ಭೂ ಸ್ವಾಧೀನಮಾಡಿಕೊಂಡಿತ್ತು. ಶಾನಮಂಗಲ, ಬಾನಂದೂರು, ಅಬ್ಬಿನಕುಂಟೆ ಗ್ರಾಮಗಳ ಬಹುತೇಕ ಸಣ್ಣ ಮತ್ತು ಅತಿ ಸಣ್ಣ ರೈತರು ಕಾರ್ಖಾನೆ ಸ್ಥಾಪನೆಗೆ ಭೂಮಿ ನೀಡಿದ್ದರು. 2003 ರ ಆಗಸ್ಟ್ 26 ರಂದು ಹೈಕೋರ್ಟ್ ರೈತರಿಗೆ ಪರಿಹಾರ ನೀಡುವಂತೆ ಸ್ಪಷ್ಟವಾಗಿ ನಿರ್ದೇಶನ ನೀಡಿತ್ತು. ಆದರೆ ಕೆಐಎಡಿಬಿ ಸಬೂಬುಗಳನ್ನು ಹೇಳುತ್ತಿತ್ತು.
ಆದರೆ ಸುಪ್ರೀಂ ಕೋರ್ಟ್ ಬಡ್ಡಿಸಮೇತ ಪರಿಹಾರ ನೀಡುವಂತೆ ನೀಡಿದ ಆದೇಶದ ನಂತರ ಎಚ್ಚೆತ್ತುಕೊಂಡ ಕೆಐಎಡಿಬಿ ಅಧಿಕಾರಿಗಳು ಪರಿಹಾರ ಮೊತ್ತವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಿದೆ. ತಬರನ ಕಥೆಯಂತಾಗಿದ್ದ ಕೃಷಿಕರ ಗೋಳು ಇದೀಗ ತಾರ್ಕಕ ಅಂತ್ಯಕ್ಕೆ ತಲುಪಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X