ಎತ್ತಿನಹೊಳೆ ಯೋಜನೆ: ಭೂಮಿ ಕಳೆದುಕೊಂಡ ರೈತರ ಪರಿಹಾರಕ್ಕೆ ಆಗ್ರಹಿಸಿ ಕೆಪಿಆರ್‌ಎಸ್ ಪ್ರತಿಭಟನೆ

Date:

Advertisements

ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿ ಮತ್ತು ಅರಣ್ಯ ಇಲಾಖೆಯ ಕಿರುಕುಳ ತಡೆಗಟ್ಟಲು ಒತ್ತಾಯಿಸಿ ಹಾಸನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ಶುಕ್ರವಾರ ‌ಪ್ರತಿಭಟನೆ ನಡೆಸಿತು.

Screenshot 2025 02 21 19 30 00 42 7352322957d4404136654ef4adb64504

“ಬಯಲು ಸೀಮೆಗೆ ಕುಡಿಯುವ ನೀರು ಪೂರೈಸುವ ಎತ್ತಿನಹೊಳೆ ಯೋಜನೆ ಕಾಮಗಾರಿ ಹಲವು ವರ್ಷಗಳಿಂದ ನಡೆಯುತ್ತಿದೆ. ಈ ಯೋಜನೆಯ ದಿಸೆಯಿಂದ ಜಿಲ್ಲೆಯ ಸಾವಿರಾರು ಜನ ರೈತರು ತಮ್ಮ ಭೂಮಿಯನ್ನು ಕಳೆದುಕೊಂಡಿದ್ದಾರೆ. ಬೇಲೂರು ತಾಲೂಕಿನ ಶಿವಪುರ ಕಾವಲು, ಹಾಸನ ತಾಲೂಕಿನ ಉದಳ್ಳ ಕಾವಲು, ಅರಸೀಕರೆ ತಾಲೂಕಿನ ನಾಯಕನಕೆರೆ ಕಾವಲಿನ ಸುತ್ತಮುತ್ತಲಿನ ರೈತರ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು 2022ರಲ್ಲೇ ಆವಾಡ್ ನೋಟಿಸ್ ನೀಡಿದ್ದರೂ ಇದುವರೆಗೂ ಇವರುಗಳಿಗೆ ಸೂಕ್ತ ಪರಿಹಾರವನ್ನು ನೀಡಿಲ್ಲ” ಎಂದು ಸಂಘದ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

Screenshot 2025 02 21 19 30 14 27 7352322957d4404136654ef4adb64504

ಹಲವು ವರ್ಷಗಳಿಂದ ಸಾಗುವಳಿ ಮಾಡಿ ಮಂಜೂರಾತಿ ಚೀಟಿ ಪಡೆದು, ಪಹಣಿಯಲ್ಲಿ ಹೆಸರು ಬರುತ್ತಿದ್ದ ಭೂಮಿಗೆ ವಿಶೇಷ ಭೂಸ್ವಾಧೀನಾಧಿಕಾರಿಯವರ ಕಾರ್ಯಾಲಯ ಆವಾಡ್ ನೋಟಿಸ್ ನೀಡಿದ ಮೇಲೆ, ಅರಣ್ಯ ಇಲಾಖೆಯವರು ಬೇಲೂರು ತಾಲೂಕಿನ ಶಿವಪುರ ಕಾವಲು ಗ್ರಾಮಗಳ ಸುತ್ತಮುತ್ತಲಿನ ಸುಮಾರು 30ಕ್ಕೂ ಹೆಚ್ಚು ಜನರಿಗೆ ಭೂ ಪರಿಹಾರ ನೀಡುವುದನ್ನು ತಡೆಹಿಡಿದಿದ್ದಾರೆ.

Advertisements
Screenshot 2025 02 21 19 30 58 21 7352322957d4404136654ef4adb64504

ಶಿವಪುರ ಕಾವಲಿನ ಸರ್ವೆ ನಂಬರ್ 80/2 ರಲ್ಲಿ 1.32 ಎಕರೆ ಭೂಮಿಯನ್ನು ಎತ್ತಿನಹೊಳೆ ಯೋಜನೆಗೆ ಕಳೆದುಕೊಂಡು ಇದುವರೆಗೂ ಪರಿಹಾರ ಸಿಗದ ಕಾರಣ ಬೇಸತ್ತು ವಡ್ಡರಹಳ್ಳಿ ಗ್ರಾಮದ ನಿವಾಸಿ 55 ವರ್ಷದ ರಂಗಸ್ವಾಮಿ ಬಿನ್ ಮೂಡಯ್ಯ ಎಂಬುವವರು 11 ಡಿಸೆಂಬರ್ 2024ರಂದು ಇದೇ ಎತ್ತಿನ ಹೊಳೆ ಕಾಲುವೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಭೂಮಿ ಕಳೆದುಕೊಂಡು 5 ವರ್ಷಗಳಾದರೂ ಇದುವರೆಗೂ ಭೂ ಪರಿಹಾರ ಸಿಗದ ಕಾರಣ ರೈತರು ಅತ್ಯಂತ ಸಂಕಷ್ಟದಲ್ಲಿದ್ದಾರೆ ಎಂದು ರೈತ ಮುಖಂಡ ತಿಳಿಸಿದರು.

ಹಕ್ಕೊತ್ತಾಯಗಳು:

1. ಎತ್ತಿನಹೊಳೆ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ  ಪರಿಹಾರ ನೀಡಬೇಕು.

2. 06.12.2022 ರಂದು ಪರಿಹಾರದ ಆವಾರ್ಡ್ ನೋಟಿಸ್ ನೀಡಿದ್ದು, ಪರಿಹಾರದ ಹಣ ಬಡ್ಡಿ ಸಮೇತ ಮರು ಪಾವತಿಯಗಬೇಕು. 

3. ರೈತರ ಪರಿಹಾರಕ್ಕೆ ಅರಣ್ಯ ಇಲಾಖೆ ತಂದಿರುವ ತಡೆಯಾಜ್ಞೆಯನ್ನು ರದ್ದುಪಡಿಸಬೇಕು.

4. ಭೂಸ್ವಾಧೀನ ಮಾಡಿಕೊಳ್ಳದೇ ಕಳೆದ 4 ವರ್ಷಗಳಿಂದ ಉಳಿಕೆ ಕೃಷಿ ಭೂಮಿಯ ಮೇಲೆ ಕಾಲುವೆಯ ಮಣ್ಣು ಮತ್ತು ಕಲ್ಲಿನ ರಾಶಿ ಹಾಕಿ ವ್ಯವಸಾಯಕ್ಕೆ ಅಡ್ಡಿ ಪಡಿಸಲಾಗಿದೆ. ಇದಕ್ಕೆ ಸೂಕ್ತ ರೀತಿಯ ಬೆಳೆ ಪರಿಹಾರ ನೀಡಬೇಕು. ಮತ್ತು ಮಣ್ಣಿನ ಗುಡ್ಡೆಯನ್ನು ತೆರವುಗೊಳಿಸಬೇಕು.

ಇದನ್ನೂ ಓದಿದ್ದೀರಾ?ಹಾಸನ ವಿಶ್ವವಿದ್ಯಾಲಯದ ಉಳಿವಿಗೆ ಎಸ್‌ಎಫ್‌ಐ, ಡಿವೈಎಫ್‌ಐ ಹೋರಾಟ

ಹೋರಾಟದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎಚ್.ಆರ್. ನವೀನ್ ಕುಮಾರ್, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಎಂ.ಜಿ.ಪೃಥ್ವಿ, ವಿವೇಕ ಬಂಟೇನಹಳ್ಳಿ‌ ಗ್ರಾಮದ ವಿರುಪಾಕ್ಷ, ಜಯಣ್ಣ, ಮುತ್ತಣ್ಣ, ಶಿವೇಗೌಡ, ಗಂಗಾಧರ, ಶಿವಪುರ ಕಾವಲಿನ ಸಿದ್ದರಾಜು, ಗಂಗಾಧರ, ಉದಯ್ ಕುಮಾರ್, ಗೋವಿಂದರಾಜು, ರಂಗಸ್ವಾಮಿ, ಪುಟ್ಟರಾಜು, ರಾಜಾನಾಯಕ್ ಇನ್ನಿತರರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X