ಉಡುಪಿ | ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ, ವ್ಯಕ್ತಿಯ ಸ್ಥಿತಿ ಚಿಂತಾಜನಕ

Date:

Advertisements

ಉಡುಪಿ ತಾಲೂಕಿನ ಪರ್ಕಳದ ಬಡಗು ಬೆಟ್ಟು ತಿರುವಿನಲ್ಲಿ ಬಳಿ ರಸ್ತೆಯ ಬದಿ ಕಾರು ನಿಲ್ಲಿಸಿ ಪಕ್ಕದ ಅಂಗಡಿಯತ್ತ ತೆರಳುತ್ತಿದ್ದ ವೇಳೆ ಶಿವಮೊಗ್ಗ ಕಡೆಗೆ ವೇಗವಾಗಿ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್ ಎನ್ನುವರು ತಲೆಗೆ ಬಲವಾದ ಪೆಟ್ಟು ಬಿದು ಚಿಂತಾಜನಕ ಸ್ಥಿತಿಯಲ್ಲಿ ಇರುವ ಬಗ್ಗೆ ವರದಿಯಾಗಿದೆ. ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು ಮೆದುಳು ನಿಷ್ಕ್ರಿಯ ಆಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಮಣಿಪಾಲದ ಜಿಸಿಸಿಯಯಲ್ಲಿ ಕೆಲಸ ಮಾಡುತ್ತಿದ್ದ ರಮೇಶ್ ನಾಯಕ್ ರು ಪ್ರತಿದಿನದಂತೆ ಇಂದು‌ ಸಹ ಪತ್ನಿಯನ್ನು ಕೆಎಂಸಿ‌ ಆಸ್ಪತ್ರೆಯಲ್ಲಿ ಕೆಲಸಕ್ಕೆ ಬಿಟ್ಟು, ಬಡಗುಬೆಟ್ಟು ಬಳಿ ಕಾರು ಇಳಿದು ಬೀಡಾ ತೆಗೆದುಕೊಳ್ಳಲು ಪಕ್ಕದ ರಸ್ತೆಯಲ್ಲಿರುವ ಅಂಗಡಿಗೆ ರಸ್ತೆ ದಾಟುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿ ಹೊಡೆದ ಕಾರು ಚಾಲಕ ಮತ್ತು ಸ್ಥಳೀಯರ ಸಹಕಾರದಿಂದ ಅವರದ್ದೆ ಕಾರಿನಲ್ಲಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಯಿತು.

ರಾಷ್ಟ್ರೀಯ ಹೆದ್ದಾರಿಯ ರಸ್ತೆ ಬಡಗುಬೆಟ್ಟು ತಿರುವು ಇರುವುದು ಈ ಭಾಗ ಇದೊಂದು ಬ್ಲ್ಯಾಕ್ ಸ್ಪಾಟ್ ಆಗಿ ಪರಿಣಮಿಸಿದೆ. ಮತ್ತು ಇಲ್ಲಿ ರಾಷ್ಟ್ರೀಯ ಹೆದ್ದಾರಿಯ ರಸ್ತೆಗೆ. ಮಧ್ಯದಲ್ಲಿ ಡಿವೈಡರ್ ಹಾಕದೇ ಇರುವುದು ಮತ್ತು ಗುತ್ತಿಗೆದಾರರು ಬಾಕಿ ಇರಿಸಿದ ಕಾಮಗಾರಿ ಎದ್ದು ಕಾಣುತ್ತದೆ. ಹಾಗಾಗಿ ರಾಷ್ಟ್ರೀಯ ಹೆದ್ದಾರಿಯ ಪೂರ್ಣ ಕಾಮಗಾರಿ ನಡೆದಿಲ್ಲ ಅರ್ಧಕ್ಕೆ ನಿಲ್ಲಿಸಿದ್ದಾರೆ, ಇದೀಗ ಈ ಬ್ಲ್ಯಾಕ್ ಸ್ಪಾಟ್ ಸ್ಪಾಟ್ ಆಗಿ ಐದು ಜನ ಪಾದಾಚಾರಿಗಳೇ ಈಗಾಗಲೇ ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X